Webdunia - Bharat's app for daily news and videos

Install App

ಆರತಿ ಬೆಳಗಿ ಶಾಲಾ ವಿದ್ಯಾರ್ಥಿಗಳಿಗೆ ಸ್ವಾಗತ!

Webdunia
ಸೋಮವಾರ, 23 ಆಗಸ್ಟ್ 2021 (18:37 IST)
ರಾಜ್ಯ ಸರ್ಕಾರ ಇಂದಿನಿಂದ 9-10 ಮ
ತ್ತು ಪ್ರಥಮ - ದ್ವಿತೀಯ ಪಿಯುಸಿ ತರಗತಿಗಳನ್ನ ಆರಂಭಿಸಲು ಆದೇಶಿಸಿರುವ  ಹಿನ್ನಲೆಯಲ್ಲಿ ರಾಯಚೂರು ಜಿಲ್ಲೆಯಾದ್ಯಂತ ಶಾಲಾ-ಕಾಲೇಜು ಪ್ರಾರಂಭಿಸಲಾಗಿದೆ.
ರಾಯಚೂರು ತಾಲೂಕಿನ ಸರ್ಕಾರ ಪ್ರೌಢ ಶಾಲೆಯಲ್ಲಿ 9 ಮತ್ತು 10ನೇ ತರಗತಿಯ ವಿದ್ಯಾರ್ಥಿಗಳು ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ್, ಜಿಲ್ಲಾ ಪಂಚಾಯಿತಿ ಸಿಇಒ ಶೇಕ್ ತನ್ವೀರ್ ಆಸೀಫ್ ವಿದ್ಯಾರ್ಥಿಗಳಿಗೆ ಹೂಗುಚ್ಛ ಪುಸಕ್ತಗಳನ್ನ ನೀಡಿ ಸ್ವಾಗತಿಸಿದ್ದರೆ, ಶಾಲಾ ಶಿಕ್ಷಕರು ವಿದ್ಯಾರ್ಥಿಗಳು ಆರತಿ ಬೆಳಗುವ ಮೂಲ ತರಗತಿಗಳಿಗೆ ಬಾರ ಮಾಡಿಕೊಂಡರು.
ಸರ್ಕಾರದ ನಿರ್ದೇಶನ್ವಯ ಕೋವಿಡ್ ಹಿನ್ನಲೆಯಲ್ಲಿ ಮೊದಲೇ ಶಾಲಾ ಕೊಠಡಿಗಳಿಗೆ ಸ್ಯಾನಿಟೈಷನ್ ಮಾಡಿಕೊಂಡಿದ್ದು, ವಿದ್ಯಾರ್ಥಿಗಳು ಪಾಲಕರ ಒಪ್ಪಿಗೆ ಪತ್ರ ಪಡೆದುಕೊಂಡು ಬಂದವರಿಗೆ ಮಾತ್ರ ತರಗತಿಗೆ ಹಾಜರಾಗಲು ಅವಕಾಶವನ್ನ ನೀಡಲಾಯಿತು. ಈ ವೇಳೆ ಮಾತನಾಡಿದ ಜಿಲ್ಲಾಧಿಕಾರಿಗಳು, ಸರ್ಕಾರದ ಸೂಚನೆಯಂತೆ ಜಿಲ್ಲೆಯಲ್ಲಿರುವ ಸರ್ಕಾರಿ, ಅನುದಾನಿ, ಅನುದಾನ ರಹಿತ ಶಾಲಾಗಳನ್ನ ಸೇರಿದಂತೆ ಒಟ್ಟು 449 ಪ್ರೌಢಶಾಲೆಗಳನ್ನ ಆರಂಭಿಸಲಾಗುತ್ತಿದೆ.
ಈಗಾಗಲೇ ಶಿಕ್ಷಣ ಇಲಾಖೆಯಿಂದ ಅಗತ್ಯ ಸಿದ್ದತೆಗಳನ್ನ ಮಾಡಿಕೊಳ್ಳಲಾಗಿದೆ. ವಿದ್ಯಾರ್ಥಿಗಳಿಗೆ ಕುಡಿಯುವ ನೀರು, ಮಾಸ್ಕ್ ಧರಿಸಿಕೊಂಡು ಬರಬೇಕಾಗಿದ್ದು, ಪಾಲಕರ ಒಪ್ಪಿಗೆ ಮಾತ್ರ ಅವಕಾಶ ನೀಡಲಾಗುತ್ತಿದ್ದು, ತರಗತಿಗಳಿಗೆ ವಿದ್ಯಾರ್ಥಿಗಳು ಅತ್ಯಂತ ಉತ್ಸಕತೆಯಿಂದ ಬರುತ್ತಿದ್ದಾರೆ ಎಂದರು.
ಈ ವೇಳೆ ಸಿಇಒ ಜಿ.ಪಂ. ಶೇಕ್ ತನ್ವೀರ್ ಆಸೀಫ್, ಡಿಡಿಪಿಐ, ಬಿಇಒ ಚಂದ್ರಶೇಖರ್ ಸೇರಿದಂತೆ ಹಲವು ಅಧಿಕಾರಿಗಳು, ಸಿಬ್ಬಂದಿಗಳು, ಶಿಕ್ಷಕರು, ಗ್ರಾಮಸ್ಥರು ಇದ್ದರು.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments