Webdunia - Bharat's app for daily news and videos

Install App

ಮುಂಬೈ ನಲ್ಲಿ‌ ಇಂದಿನಿಂದ ಶಾಲೆ ರೀ ಓಪನ್: ಆತಂಕದಲ್ಲಿ ಪೋಷಕರು

Webdunia
ಬುಧವಾರ, 15 ಡಿಸೆಂಬರ್ 2021 (20:02 IST)
ಮಹಾರಾಷ್ಟ್ರದಲ್ಲಿ ಕೊರೋನಾ ಹಾಗೂ ಒಮಿಕ್ರಾನ್ ಸೋಂಕಿನ ಆರ್ಭಟದ ನಡುವೆ ಇಂದಿನಿಂದ ಮುಂಬೈ ನಲ್ಲಿ ಶಾಲೆ ಪುನರಾರಂಭಗೊಳ್ಳಲಿದೆ.
ಈ ಬಗ್ಗೆ ಮಾಹಿತಿ ನೀಡಿದ ಬಿಎಂಸಿ(ವೃಹತ್ ಮುಂಬೈ ಮುನ್ಸಿಪಲ್ ಕಾರ್ಪೊರೇಷನ್), ಡಿ.15ರಿಂದ ಮುಂಬೈನಲ್ಲಿ 1-7ನೇ ತರಗತಿ ಶಾಲೆ ಪುನರಾರಂಭಗೊಳ್ಳಲಿದ್ದು, ಎಲ್ಲರೂ ಕೋವಿಡ್ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ತಿಳಿಸಿದೆ.
ಕೋವಿಡ್ ನಿಯಮಗಳು ಹೀಗಿವೆ..
ಶಾಲಾ ಸಿಬ್ಬಂದಿ, ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು, ಸ್ಯಾನಿಟೈಸ್ ಮಾಡಿಕೊಳ್ಳಬೇಕು.
ಶಾಲೆಯಲ್ಲಿನ ಎಲ್ಲಾ ಸಿಬ್ಬಂದಿಗಳೂ ಕಡ್ಡಾಯವಾಗಿ ಕೋವಿಡ್ ಲಸಿಕೆ ಪಡೆದಿರಬೇಕು.
ಕೋವಿಡ್ ಲಕ್ಷಣಗಳಿದ್ದರೆ ಅವರು ಶಾಲೆಗೆ ಬರುವಂತಿಲ್ಲ..
ಶಾಲೆಗೆ ಮಕ್ಕಳ ಹಾಜರಾತಿ ಕಡ್ಡಾಯವಲ್ಲ. ಆನ್ ಲೈನ್ ಶಿಕ್ಷಣದ ವ್ಯವಸ್ಥೆಯೂ ಇರಬೇಕು.
ಆಹಾರ, ನೀರು ಸೇರಿದಂತೆ ಯಾವುದನ್ನು ಹಂಚಿಕೊಳ್ಳದಿರುವಂತೆ ಮಕ್ಕಳಿಗೆ ಸೂಚಿಸಬೇಕು.
ಶಾಲೆಯನ್ನು ಸಮಯಕ್ಕೆ ಅನುಗುಣವಾಗಿ ಸ್ಯಾನಿಟೈಸ್ ಮಾಡಬೇಕು ಎಂದು ಬಿಎಂಸಿ ಶಾಲೆಗಳಿಗೆ ಸೂಚಿಸಿದೆ.
ಮಹಾರಾಷ್ಟ್ರದಲ್ಲಿ ಕೆಲವು ದಿನಗಳಿಂದ ಒಮಿಕ್ರಾನ್ ಸೋಂಕಿನ ಪ್ರಕರಣ ಹೆಚ್ಚಾಗುತ್ತಿದ್ದು, ಇಂದಿನಿಂದ ಮಕ್ಕಳನ್ನು ಶಾಲೆಗೆ ಕಳುಹಿಸಲು ಪೋಷಕರು ಹಿಂದೇಟು ಹಾಕುತ್ತಿರುವುದು ಕಂಡುಬಂದಿದೆ. ಮುಂಬೈ ನಗರದಲ್ಲಿ 1-7ನೇ ತರಗತಿ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ 1-4ನೇ ತರಗತಿಯ ವಿದ್ಯಾರ್ಥಿಗಳಿಗೆ ಶಾಲೆ ಪುನರಾರಂಭಗೊಂಡಿದೆ.
ಮಹಾರಾಷ್ಟ್ರದಲ್ಲಿ ನಿನ್ನೆ 8 ಮಂದಿಯಲ್ಲಿ ಒಮಿಕ್ರಾನ್‌ ಸೋಂಕು ದೃಢಪಟ್ಟಿದ್ದು, ಒಟ್ಟು ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 28ಕ್ಕೆ ಏರಿಕೆಯಾಗಿದೆ. ಈ ನಿಟ್ಟಿನಲ್ಲಿ ಮಕ್ಕಳನ್ನು ಶಾಲೆಗೆ ಕಳುಹಿಸುವುದಕ್ಕೆ ಪೋಷಕರು ಹಿಂದೇಟು ಹಾಕುತ್ತಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Suhas Shetty Murder: ತನಿಖೆಯಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಗೃಹ ಸಚಿವಾಲಯದ ಆದೇಶದಲ್ಲೇನಿದೆ

ರೇಣುಕಾಸ್ವಾಮಿ ತಂದೆ ಕಣ್ಣೀರು: ಮಾನವೀಯತೆಯಿಂದಾದ್ರೂ ಸೊಸೆಗೆ ಸರ್ಕಾರಿ ನೌಕರಿ ಕೊಡಿಸಿ

ಯಡಿಯೂರಪ್ಪ ಮನೆ ಮದುವೆಯಲ್ಲಿ ಸಿದ್ದರಾಮಯ್ಯ: ಒಳಗೊಳಗೆ ಎಲ್ಲಾ ಚೆನ್ನಾಗೇ ಇರ್ತೀರಾ ನೆಟ್ಟಿಗರ ಟಾಂಗ್

Suhas Shetty: ಸುಹಾಸ್ ಶೆಟ್ಟಿ ಕೇಸ್ ಎನ್ಐಎಗೆ ವಹಿಸಿದ ಕೇಂದ್ರ: ಕರಾವಳಿಯ ಹತ್ಯಾಕಾಂಡಗಳೆಲ್ಲಾ ಬಯಲಾಗುತ್ತಾ

Bengaluru Stampede: ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಆಕ್ರೋಶ

ಮುಂದಿನ ಸುದ್ದಿ
Show comments