Webdunia - Bharat's app for daily news and videos

Install App

ಇನ್ನೆರಡು ದಿನಗಳಲ್ಲಿ ಶಾಲೆ ಆರಂಭ : ಭಯಪಡದೇ ಬನ್ನಿ ಮಕ್ಕಳೇ ಎಂದ ಬೊಮ್ಮಾಯಿ

Webdunia
ಶನಿವಾರ, 21 ಆಗಸ್ಟ್ 2021 (12:30 IST)
ಬೆಂಗಳೂರು : ರಾಜ್ಯದಲ್ಲಿ ಆಗಸ್ಟ್ 23ರಿಂದ 9, 10, 11 ಮತ್ತು 12ನೇ ತರಗತಿಗಳ ಶಾಲೆಗಳು ಆರಂಭಗೊಳ್ಳಲಿವೆ. ಈಗಾಗಲೇ ಶಾಲೆಗಳ ಆರಂಭಕ್ಕಾಗಿ ಶಿಕ್ಷಣ ಇಲಾಖೆ ಮಾರ್ಗಸೂಚಿ ಕೂಡ ಹೊರಡಿಸಿದ್ದು, ಆ ಮಾರ್ಗಸೂಚಿ ಕ್ರಮ ಅನುಸರಿಸಿ, ವಿದ್ಯಾರ್ಥಿಗಳನ್ನು ಸ್ವಾಗತಿಸಲು ಸಜ್ಜಾಗಿವೆ. ಈ ಹಿನ್ನಲೆಯಲ್ಲಿ ಶಾಲೆಗಳ ಆರಂಭಕ್ಕೆ ಎಲ್ಲಾ ಸಿದ್ಧತೆ, ಮುಂಜಾಗ್ರತಾ ಕ್ರಮ ಕೈಗೊಂಡಿದ್ದು, ಮಕ್ಕಳು ಭಯಪಡೇ ಬನ್ನಿ ಎಂಬುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರೀತಿಯಿಂದ ಆಹ್ವಾನಿಸಿದ್ದಾರೆ.

ಈ ಕುರಿತಂತೆ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಪೋಷಕರು, ಶಾಲಾ ಆಡಳಿತ ಮಂಡಳಗಳು ಸೇರಿದಂತೆ ವಿವಿಧ ತಜ್ಞರ ಜೊತೆಗೆ ಚರ್ಚಿಸಿದ ನಂತ್ರವೇ ರಾಜ್ಯದಲ್ಲಿ ಶಾಲೆಗಳನ್ನು ಆರಂಭಿಸಲಾಗುತ್ತಿದೆ. ಈಗಾಗಲೇ ಸರ್ಕಾರಿ ಹಾಗೂ ಖಾಸಗಿ ಶಾಲೆಗಳಿಗೆ ಯಾವ ರೀತಿ ಆರಂಭಿಸಬೇಕೆಂಬ ಬಗ್ಗೆಯೂ ಮಾರ್ಗಸೂಚಿಯಲ್ಲಿ ತಿಳಿಸಲಾಗಿದೆ ಎಂದರು.
ನಾನು ಈಗಾಗಲೇ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಜೊತೆಗೆ ಮಾತನಾಡಿದ್ದೇನೆ. ಅಲ್ಲದೇ ನಾನು ಸಹ ಮೂರು ಶಾಲೆಗಳಿಗೆ ಭೇಟಿ ನೀಡಿ, ಕೊರೋನಾ ಭೀತಿಯ ನಡುವೆಯೂ ಆರಂಭಿಸಲಾಗುತ್ತಿರುವಂತ ಶಾಲೆಗಳಲ್ಲಿ ಯಾವ ರೀತಿಯಾಗಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡು ಆರಂಭಿಸಲಾಗುತ್ತಿದೆ ಎಂಬುದನ್ನು ಪರಿಶೀಲಿಸಿರುವುದಾಗಿ ತಿಳಿಸಿದರು.
ಪೋಷಕರು ಕೊರೋನಾ ಲಸಿಕೆ ಕಡ್ಡಾಯವಾಗಿ ಪಡೆದು ಮಕ್ಕಳನ್ನು ಶಾಲೆಗೆ ಕರೆದು ತನ್ನಿ. ಯಾರೂ ಆತಂಕಕ್ಕೆ ಒಳಗಾಗದೇ, ಶಾಲೆಗೆ ಮಕ್ಕಳನ್ನು ಕಳುಹಿಸಿ. ಸರ್ಕಾರ ಎಲ್ಲಾ ರೀತಿಯ ಸಿದ್ಧತೆಗಳನ್ನು, ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಇನ್ನೆರಡು ದಿನಗಳಲ್ಲಿ ಆರಂಭಗೊಳ್ಳುತ್ತಿರುವಂತ ಶಾಲೆಗಳಿಗೆ ಭಯಪಡದೇ ಬನ್ನಿ ಮಕ್ಕಳೇ ಎಂದು ಸಿಎಂ ಪ್ರೀತಿಯಿಂದ ಆಹ್ವಾನಿಸಿದ್ದಾರೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಹಿಳೆಯರು ದೇಶದ ನಿಜವಾದ ಶಕ್ತಿ: ರಾಹುಲ್ ಗಾಂಧಿ

ಹೋಂ ಸ್ಟೇಗೆ ಎಂಜಾಯ್ ಮಾಡಲು ಹೋಗಿದ್ದ ಪ್ರವಾಸಿಗ ಕಾಡಾನೆ ದಾಳಿಗೆ ಬಲಿ

ರೇಪ್ ಕೇಸ್ ಮುಚ್ಚಿ ಹಾಕಲು ಪಂಜಾಬ್ ಸಿಎಂ ಪತ್ನಿ ಲಂಚದ ಬೇಡಿಕೆ, ತನಿಖೆಗೆ ನೋಟಿಸ್ ಜಾರಿ

ಆಟೋದಲ್ಲಿ ಫ್ರೀ ಆಗಿ ಕರೆದೊಯ್ಯಲಿಲ್ಲ ಎಂದು ಚಾಲಕನ ಮೇಲೆ ಇದೆಂಥಾ ಅನ್ಯಾಯವೆಸಗಿದ ಪೊಲೀಸ್ ಅಧಿಕಾರಿ Video

ರಾಜೀನಾಮೆಗೆ ಒತ್ತಾಯದ ನಡುವೆ ಬಿ ನಾಗೇಂದ್ರ ಹೊಸ ಜವಾಬ್ದಾರಿ ವಹಿಸಿದ ಡಿಕೆ ಶಿವಕುಮಾರ್‌

ಮುಂದಿನ ಸುದ್ದಿ
Show comments