ಶಾಲಾ ಮಕ್ಕಳಿಂದ ಮರ ಕಡಿಯದಂತೆ ಮರಗಳನ್ನು ಅಪ್ಪಿಕೊಂಡು ಪ್ರತಿಭಟನೆ

Webdunia
ಶನಿವಾರ, 11 ಸೆಪ್ಟಂಬರ್ 2021 (20:45 IST)
ಬೆಂಗಳೂರು: ತಮ್ಮ ಶಾಲೆ ಆವರಣದ ಆಟದ ಮೈದಾನದಲ್ಲಿರುವ ಮರಗಳನ್ನು ಕಡಿಯದಂತೆ ಆಗ್ರಹಿಸಿ ಪೀಣ್ಯ ದಾಸರಹಳ್ಳಿಯ ಅಬ್ಬಿಗೆರೆ ಸರ್ಕಾರಿ ಶಾಲಾ ವಿದ್ಯಾರ್ಥಿಗಳು ಅಪ್ಪಿಕೋ ಚಳವಳಿ ರೀತಿಯಲ್ಲಿ ಪ್ರತಿಭಟನೆ ನೆಡೆಸಿದ್ದಾರೆ.
 
ರಸ್ತೆಯನ್ನು ವಿಸ್ತರಣೆ ಮಾಡಲು ಮರಗಳನ್ನು ಕಡಿಯಲು ಬಿಬಿಎಂಪಿ ಏಕಾಏಕಿ ಮುಂದಾಗಿದೆ. ಈ ಹಿನ್ನೆಲೆಯಲ್ಲಿ ಅಬ್ಬಿಗೆರೆ ಸರಕಾರಿ ಶಾಲಾ ಮಕ್ಕಳು ಕೈಯಲ್ಲಿ ನಾಮಫಲಕಗಳನ್ನು ಹಿಡಿದು, ಮರಗಳನ್ನು ಸುತ್ತುವರಿದು ತಬ್ಬಿಕೊಂಡು ಕಡಿಯದಂತೆ ಶಾಲಾ ಆವರಣದಲ್ಲಿ ಮನವಿ ಮಾಡುತ್ತಿದ್ದಾರೆ.
 
ಅಬ್ಬಿಗೆರೆ ಸರಕಾರಿ ಶಾಲೆ ಆವರಣದಲ್ಲಿರುವ ಮೈದಾನದಲ್ಲಿ 100ಕ್ಕೂ ಹೆಚ್ಚು ಮರಗಳಿವೆ. ಅಬ್ಬಿಗೆರೆಯಿಂದ ಚಿಕ್ಕಬಾಣಾವರಕ್ಕೆ ಸಂಪರ್ಕಿಸುವ ಮುಖ್ಯರಸ್ತೆಯನ್ನು ಅಗಲೀಕರಣ ಮಾಡಲು ಪಾಲಿಕೆ ಅಧಿಕಾರಿಗಳು, ಕಾಂಟ್ರಾಕ್ಟರ್ ಗಳು ಮುಂದಾಗಿದ್ದಾರೆ. ಈ ಅಗಲೀಕರಣ ಅವೈಜ್ಞಾನಿಕವಾಗಿದ್ದು ಯಾವುದೇ ಕಾರಣಕ್ಕೂ ಮುಂದುವರೆಸದಂತೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಗೆ ಮನವಿ ಮಾಡುತ್ತಿದ್ದಾರೆ.
 
20 ವರ್ಷದ ಮರಗಳು: 
 
 
ಜಿಂದಾಲ್ ಜುಬ್ಲೀ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಹಳೆಯ ಮತ್ತು ಈಗ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು, ಶಿಕ್ಷಕರು, ಮುಖ್ಯೋಪಾದ್ಯಾಯರು ಮತ್ತು ಸ್ಥಳೀಯರನ್ನು ಈಟಿವಿ ಭಾರತ ಮತನಾಡಿಸಿದಾಗ ಏನಿಲ್ಲವೆಂದರೂ 15 ರಿಂದ 20 ವರ್ಷದ ಆಮ್ಲಜನಕ ಎತೇಚ್ಛವಾಗಿ ಪೂರೈಸುವ ಮರಗಳು ಇವಾಗಿದ್ದು, ಈ ಶಾಲೆ ಕೂಡ 30 ವರ್ಷ ಹಳೆಯದಾದ ಶಾಲೆಯಾಗಿದೆ. ಶಿಕ್ಷಣ ಅಥವಾ ಅರಣ್ಯ ಇಲಾಖೆಯಾಗಲಿ ಈ ಕುರಿತು ಯಾವುದೇ ಸೂಚನೆ ನೋಟಿಸ್ ನೀಡಿಲ್ಲ ಎಂದು ಹೇಳಿದರು.
 
ಜನಪ್ರತಿನಿಧಿಗಳ ಅಸಡ್ಡೆ: 
 
 
ಮುಂದಿನ ಲಕ್ಷ್ಮಿಪುರಕ್ಕೆ ಹೋಗುವ ರಸ್ತೆ ಪಾರ್ಕ್ ಪಕ್ಕದಲ್ಲಿದೆ ಕಳೆದ ಒಂದು ವಾರದಿಂದ ಮರ ಕಡಿಯಲು ಪಾಲಿಕೆ ಅಧಿಕಾರಿಗಳು ಮುಂದಾಗಿದ್ದಾರೆ. ಸ್ಥಳೀಯ ಎಂ.ಎಲ್.ಎ, ಮಾಜಿ ಪಾಲಿಕೆ ಸದಸ್ಯರಿಗೆ ಮನವಿ ಸಲ್ಲಿಸಲಾಗಿದೆ ಆದರೆ ಈ ವರೆಗೆ ಯಾವುದೇ ಪ್ರತಿಕ್ರಿಯೆ ಬಂದಿಲ್ಲ ಎಂದು ಅಳಲು ತೋಡಿಕೊಂಡಿದ್ದಾರೆ.
 
ಪಾಲಿಕೆ ಅಧಿಕಾರಿಗಳ ನೋ ರೆಸ್ಪಾಂಸ್: 
 
ಈ ಕುರಿತು ಪೀಣ್ಯ ದಾಸರಹಳ್ಳಿ ವಿಭಾಗದ ಪಾಲಿಕೆ ಅಧಿಕಾರಿಗಳನ್ನು ಸಂಪರ್ಕಿಸಲು ಪ್ರಯತ್ನಿಸಿದರೂ ಯಾವುದೇ ಸ್ಪಂದನೆ ನೀಡುತ್ತಿಲ್ಲ ಎಂದು ಆಕ್ರೋಶ ಹೊರಹಾಕಿದ್ದಾರೆ.
students

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆರ್ ಎಸ್ಎಸ್ ಚಡ್ಡಿ ಲೇವಡಿ ಮಾಡಿದ್ದ ಕಾಂಗ್ರೆಸ್: ಜವಹರಲಾಲ್ ನೆಹರೂ ಫೋಟೋ ರಿಲೀಸ್ ಮಾಡಿದ ಬಿಜೆಪಿ

ಕರ್ನೂಲ್ ಬಸ್ ದುರಂತದಲ್ಲಿ ಸಾವನ್ನಪ್ಪಿದವರಿಗೆ ಪರಿಹಾರ ಘೋಷಿಸಿದ ಮೋದಿ: ಸಂತಾಪ ಸೂಚಿಸಿದ ಸಿದ್ದರಾಮಯ್ಯ

Arecanut Price: ಅಡಿಕೆ ಬೆಳೆಗಾರರಿಗೆ ಗುಡ್ ನ್ಯೂಸ್ ಇಂದಿನ ಬೆಲೆ ಇಲ್ಲಿದೆ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಆಶಾ ಕಾರ್ಯಕರ್ತೆಯರಿಗೆ ಮೂರು ತಿಂಗಳಿಂದ ಸಂಬಳವೇ ಇಲ್ಲ: ಪಾಪರ್ ಸರ್ಕಾರ ಎಂದು ಬೈದ ಆರ್ ಅಶೋಕ್

ಮುಂದಿನ ಸುದ್ದಿ
Show comments