Webdunia - Bharat's app for daily news and videos

Install App

ಗ್ರಾಹಕರ ಜೇಬಿಗೆ ಕತ್ತರಿ!

Webdunia
ಶುಕ್ರವಾರ, 26 ನವೆಂಬರ್ 2021 (14:38 IST)
ಹಾವೇರಿ : ಜಿಲ್ಲೆಯಲ್ಲಿ ಕೆಲ ದಿನಗಳಿಂದ ಸುರಿಯುತ್ತಿರುವ ಅಕಾಲಿಕ ಮಳೆಗೆ ತರಕಾರಿ ಬೆಳೆಗಳು ನೆಲಕಚ್ಚಿವೆ. ಅಳಿದುಳಿದ ತರಕಾರಿಗೆ ಭಾರೀ ಬೆಲೆ ಬಂದಿದೆ.
ಮಾರುಕಟ್ಟೆಗಳಲ್ಲಿ ತರಕಾರಿ ಬೆಲೆಗಳು ಗಗನಮುಖಿಯಾಗಿವೆ. ಈ ನಡುವೆ, ಗ್ರಾಹಕರು ಮತ್ತು ವ್ಯಾಪಾರಿಗಳಿಗೆ ಈರುಳ್ಳಿ ಬೆಲೆ ಕಣ್ಣೀರು ತರಿಸಿದರೆ, ಟೊಮೇಟೊ ರೇಟು ಕೂಡ ಜನಸಾಮಾನ್ಯರ ಹೊಟ್ಟೆ ಕಿವುಚುವಂತಿದೆ.
ತೋಟಗಾರಿಕಾ ಇಲಾಖೆ ಮಾಹಿತಿ ಪ್ರಕಾರ, ಜಿಲ್ಲಾದ್ಯಂತ ನವೆಂಬರ್ 20ರವರೆಗೆ ಸುರಿದ ಅಕಾಲಿಕ ಮಳೆಗೆ ಬರೋಬ್ಬರಿ 621.45 ಹೆಕ್ಟೇರ್ ಪ್ರದೇಶದಲ್ಲಿ ಬೆಳೆಯಲಾಗಿದ್ದ ತೋಟಗಾರಿಕಾ ಬೆಳೆಗಳು ಸಂಪೂರ್ಣ ನಾಶವಾಗಿವೆ.
ಪ್ರಮುಖ ತರಕಾರಿ ಬೆಳೆಗಳಾದ ಹಿರೇಕಾಯಿ, ಬೆಂಡೆಕಾಯಿ, ಸೌತೆಕಾಯಿ, ಈರುಳ್ಳಿ, ಟೊಮೇಟೊ, ಚವಳೆಕಾಯಿ, ಹಾಗಲಕಾಯಿ, ಬೀನ್ಸ್, ಕ್ಯಾರೆಟ್, ಹಸಿ ಮೆಣಸಿನಕಾಯಿ, ಕ್ಯಾಬೇಜ್, ಮೂಲಂಗಿ, ಮೆಂತೆ ಸೇರಿದಂತೆ ಇನ್ನಿತರ ತರಕಾರಿ ಹಾಗೂ ಸೊಪ್ಪುಗಳು ಮಳೆ ಹೊಡೆತಕ್ಕೆ ನಲುಗಿದ್ದು, ಮಣ್ಣಿನಲ್ಲಿ ಕೊಳೆತು ಹಾಳಾಗಿವೆ. ಈ ಹಿನ್ನೆಲೆ ಜಿಲ್ಲೆ ಸೇರಿದಂತೆ ಹೊರ ಜಿಲ್ಲೆ, ಹೊರ ರಾಜ್ಯಗಳಿಂದ ಬರುವ ತರಕಾರಿಗಳು ನಿರೀಕ್ಷಿತ ಪ್ರಮಾಣದಲ್ಲಿ ಮಾರುಕಟ್ಟೆಗೆ ಬರುತ್ತಿಲ್ಲ. ಇದರಿಂದ ವ್ಯಾಪಾರಿಗಳು ಹಾಗೂ ಗ್ರಾಹಕರು ಪರದಾಡುವಂತಾಗಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments