Webdunia - Bharat's app for daily news and videos

Install App

ಗ್ರಾಹಕರ ಜೇಬಿಗೆ ಕತ್ತರಿ!

Webdunia
ಶುಕ್ರವಾರ, 26 ನವೆಂಬರ್ 2021 (14:38 IST)
ಹಾವೇರಿ : ಜಿಲ್ಲೆಯಲ್ಲಿ ಕೆಲ ದಿನಗಳಿಂದ ಸುರಿಯುತ್ತಿರುವ ಅಕಾಲಿಕ ಮಳೆಗೆ ತರಕಾರಿ ಬೆಳೆಗಳು ನೆಲಕಚ್ಚಿವೆ. ಅಳಿದುಳಿದ ತರಕಾರಿಗೆ ಭಾರೀ ಬೆಲೆ ಬಂದಿದೆ.
ಮಾರುಕಟ್ಟೆಗಳಲ್ಲಿ ತರಕಾರಿ ಬೆಲೆಗಳು ಗಗನಮುಖಿಯಾಗಿವೆ. ಈ ನಡುವೆ, ಗ್ರಾಹಕರು ಮತ್ತು ವ್ಯಾಪಾರಿಗಳಿಗೆ ಈರುಳ್ಳಿ ಬೆಲೆ ಕಣ್ಣೀರು ತರಿಸಿದರೆ, ಟೊಮೇಟೊ ರೇಟು ಕೂಡ ಜನಸಾಮಾನ್ಯರ ಹೊಟ್ಟೆ ಕಿವುಚುವಂತಿದೆ.
ತೋಟಗಾರಿಕಾ ಇಲಾಖೆ ಮಾಹಿತಿ ಪ್ರಕಾರ, ಜಿಲ್ಲಾದ್ಯಂತ ನವೆಂಬರ್ 20ರವರೆಗೆ ಸುರಿದ ಅಕಾಲಿಕ ಮಳೆಗೆ ಬರೋಬ್ಬರಿ 621.45 ಹೆಕ್ಟೇರ್ ಪ್ರದೇಶದಲ್ಲಿ ಬೆಳೆಯಲಾಗಿದ್ದ ತೋಟಗಾರಿಕಾ ಬೆಳೆಗಳು ಸಂಪೂರ್ಣ ನಾಶವಾಗಿವೆ.
ಪ್ರಮುಖ ತರಕಾರಿ ಬೆಳೆಗಳಾದ ಹಿರೇಕಾಯಿ, ಬೆಂಡೆಕಾಯಿ, ಸೌತೆಕಾಯಿ, ಈರುಳ್ಳಿ, ಟೊಮೇಟೊ, ಚವಳೆಕಾಯಿ, ಹಾಗಲಕಾಯಿ, ಬೀನ್ಸ್, ಕ್ಯಾರೆಟ್, ಹಸಿ ಮೆಣಸಿನಕಾಯಿ, ಕ್ಯಾಬೇಜ್, ಮೂಲಂಗಿ, ಮೆಂತೆ ಸೇರಿದಂತೆ ಇನ್ನಿತರ ತರಕಾರಿ ಹಾಗೂ ಸೊಪ್ಪುಗಳು ಮಳೆ ಹೊಡೆತಕ್ಕೆ ನಲುಗಿದ್ದು, ಮಣ್ಣಿನಲ್ಲಿ ಕೊಳೆತು ಹಾಳಾಗಿವೆ. ಈ ಹಿನ್ನೆಲೆ ಜಿಲ್ಲೆ ಸೇರಿದಂತೆ ಹೊರ ಜಿಲ್ಲೆ, ಹೊರ ರಾಜ್ಯಗಳಿಂದ ಬರುವ ತರಕಾರಿಗಳು ನಿರೀಕ್ಷಿತ ಪ್ರಮಾಣದಲ್ಲಿ ಮಾರುಕಟ್ಟೆಗೆ ಬರುತ್ತಿಲ್ಲ. ಇದರಿಂದ ವ್ಯಾಪಾರಿಗಳು ಹಾಗೂ ಗ್ರಾಹಕರು ಪರದಾಡುವಂತಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜೈಲಿನಲ್ಲೂ ಅದೇ ಚಟ ಮುಂದುವರೆಸಿದ ಪ್ರಜ್ವಲ್ ರೇವಣ್ಣ, ವಿಐಪಿ ಸೆಲ್‌ನಿಂದ ಕಿಕ್‌ಔಟ್‌

ಬೈಕರ್‌ ರಿಧಿ ದಿವ್ಯೇಶ್ ಠಕ್ಕರ್ ಅಪಘಾತದಲ್ಲಿ ಸಾವು

ಪ್ರಿಯಕರನ ಜತೆ ಸೇರಿ ಪತಿಗೆ ನಿದ್ರೆ ಮಾತ್ರೆ ಕೊಟ್ಟು, ಗಂಡನ ಖಾಸಗಿ ಅಂಗಕ್ಕೆ ಕರೆಂಟ್ ಶಾಕ್ ಕೊಟ್ಟು ಮರ್ಡರ್ ಮಾಡಿದ ಪತ್ನಿ

ಓಣಂ ಹಬ್ಬದ ಹಿನ್ನೆಲೆ ಕಣ್ಣೂರಿಗೆ ಪ್ರಯಾಣಿಸುವವರಿಗೆ ಇಲ್ಲಿದೆ ಗುಡ್‌ನ್ಯೂಸ್‌

ಕದಿಯಲು ಬಂದವನು ಬೆಡ್ ರೂಂನಲ್ಲಿ ಇದೊಂದು ತಪ್ಪು ಮಾಡಿ ಸಿಕ್ಕಿಹಾಕಿಕೊಂಡ Video

ಮುಂದಿನ ಸುದ್ದಿ
Show comments