Select Your Language

Notifications

webdunia
webdunia
webdunia
webdunia

ರೌಡಿಶೀಟರ್ ಕೊಲೆ ಮಾಡಿದ ಆರೋಪಿಗಳಿಗಾಗಿ ಹುಡುಕಾಟ

murder
ಬೆಂಗಳೂರು-ವಿವೇಕನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ರಾತ್ರಿ 2.30-3ಗಂಟೆ ಸುಮಾರಿಗೆ ರೌಡಿಶೀಟರ್ ಕೊಲೆ ನಡೆದಿದೆ.ಇನ್ನೂ ಇದೇ ವಿಷಯವಾಗಿ ನಗರದಲ್ಲಿ  ಕೇಂದ್ರ ವಿಭಾಗದ ಡಿಸಿಪಿ ಶೇಖರ್ ಹೆಚ್ ಟಿ ಪ್ರತಿಕ್ರಿಯಿಸಿದ್ದಾರೆ.ಸತೀಶ್ ಅಲಿಯಾಸ್ ಮಿಲ್ಟ್ರಿ ಸತೀಶ್ ಎಂಬಾತನನ್ನ ಮಾರಕಾಸ್ತ್ರಗಳಿಂದ ಹತ್ಯೆ ಮಾಡಲಾಗಿದೆ.

ಆರೋಪಿಯ ವಿರುದ್ಧ ಹಲವು ಪ್ರಕರಣಗಳು ಇದ್ದು ರೌಡಿ ಶೀಟ್ ಕೂಡ ಓಪನ್ ಮಾಡಲಾಗಿತ್ತು.ರಾತ್ರಿ ಆರೋಪಿಗಳು ದಾಳಿ ಮಾಡಿ ಕೊಲೆ ಮಾಡಿದ್ದಾರೆ‌‌‌‌.ಕೊಲೆಯಾದ ವ್ಯಕ್ತಿಯ ಪತ್ನಿ ನೀಡಿದ ದೂರಿನ ಆಧಾರದ ಮೇಲೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗ್ತಿದೆ.ಹಳೇ ವೈಷಮ್ಯ ಹಿನ್ನೆಲೆ ಕೊಲೆ ನಡೆದಿರೋ ಶಂಕೆ ಇದೆ.ಸದ್ಯ ಆರೋಪಿಗಳ ಹುಡುಕಾಟ ನಡೆಸಲಾಗ್ತಿದೆ ಎಂದು ಕೇಂದ್ರ ವಿಭಾಗದ ಡಿಸಿಪಿ ಶೇಖರ್ ಹೆಚ್ ಟಿ ಹೇಳಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಬೆಂಗಳೂರಲ್ಲಿ ಹೆಚ್ಚಾದ ಬೈಕ್ ಕಳ್ಳರ ಕಾಟ