ಕರ್ನಾಟಕದಲ್ಲಿ ನಾಳೆ ಎರಡನೇ ಹಂತದ ಮತದಾನ: ಕಣದಲ್ಲಿದ್ದಾರೆ ಘಟಾನುಘಟಿ ಅಭ್ಯರ್ಥಿಗಳು

Sampriya
ಸೋಮವಾರ, 6 ಮೇ 2024 (14:20 IST)
Photo Courtesy X
ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ ಲೋಕಸಭೆ ಚುನಾವಣೆಯ ಎರಡನೇ ಹಂತದ ಮತದಾನ ಮೇ 7ರಂದು ನಡೆಯಲಿದೆ. ಉತ್ತರ ಕರ್ನಾಟಕದ 14 ಕ್ಷೇತ್ರಗಳಲ್ಲಿ ಹಕ್ಕು ಚಲಾವಣೆ ನಡೆಯಲಿದೆ. ಭಾರತದಲ್ಲಿ ಇದು ಮೂರನೇ ಹಂತದ ಮತದಾನವಾಗಿದ್ದು, 11 ರಾಜ್ಯಗಳ 92 ಸ್ಥಾನಗಳಿಗೆ ಮತದಾನ ನಡೆಯಲಿದೆ.

ಕರ್ನಾಟಕದ ಬಾಗಲಕೋಟೆ, ಬೆಳಗಾವಿ, ಬಳ್ಳಾರಿ, ಬೀದರ್, ವಿಜಯಪುರ, ‌ಚಿಕ್ಕೋಡಿ, ದಾವಣಗೆರೆ, ಧಾರವಾಡ, ಹಾವೇರಿ, ಕೊಪ್ಪಳ, ಗುಲ್ಬರ್ಗ, ರಾಯಚೂರು, ಶಿವಮೊಗ್ಗ, ಉತ್ತರ ಕನ್ನಡ ಲೋಕಸಭಾ ಕ್ಷೇತ್ರಗಳಲ್ಲಿ ಮಂಗಳವಾರ ಮತದಾನ ನಡೆಯಲಿದೆ. ಬೆಳಗ್ಗೆ 7 ಗಂಟೆಗೆ ಮತದಾನ ಆರಂಭವಾಗಲಿದ್ದು, ಸಂಜೆ 6ರ ವರೆಗೆ ನಡೆಯಲಿದೆ.  

ಕರ್ನಾಟಕದಲ್ಲಿ ಕೇಂದ್ರ ಸಚಿವ ಪ್ರಹ್ಲಾದ್‌ ಜೋಷಿ, ಮಾಜಿ ಸಿಎಂಗಳಾದ ಜಗದೀಶ ಶೆಟ್ಟರ್‌, ಬಸವರಾಜ ಬೊಮ್ಮಾಯಿ ಸೇರಿದಂತೆ ಸಚಿವರ ಮಕ್ಕಳು, ಸಂಬಂಧಿಕರು, ಹಾಲಿ ಸಂಸದರು ಕಣದಲ್ಲಿದ್ದಾರೆ.

ಕರ್ನಾಟಕದಲ್ಲಿ ಮೊದಲ ಹಂತದ ಲೋಕಸಭೆ ಚುನಾವಣೆಯಲ್ಲಿ 14 ಕ್ಷೇತ್ರಗಳಲ್ಲಿ ಶೇಕಡಾ 69.56 ರಷ್ಟು ಮತದಾನವಾಗಿತ್ತು. ಮಂಡ್ಯದಲ್ಲಿ (ಶೇ 81.67) ಅಧಿಕ ಮತದಾನವಾಗಿತ್ತು.
ಜೂನ್ 1ರಂದು ದೇಶದಲ್ಲಿ ಅಂತಿಮ ಹಂತದ ಮತದಾನ ನಡೆಯಲಿದ್ದು, ಜೂನ್ 4ರಂದು ಮತ ಎಣಿಕೆ ನಡೆಯಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Video: ಲಾರಿಯಡಿ ಸಿಲುಕಿ ಸ್ಥಳದಲ್ಲೇ ನರಳಾಡಿ ಪ್ರಾಣ ಬಿಟ್ಟ ದ್ವಿಚಕ್ರ ವಾಹನ ಸವಾರನನ್ನು ಕೇಳೋರೇ ಇಲ್ಲ

ಕಾರ್ಕಳ: ಮುಖ್ಯ ಶಿಕ್ಷಕರು ಹೇಳಿದ್ರೂ ಕೇಳದೇ ಜನಿವಾರ, ದಾರ ತೆಗೆಸುತ್ತಿದ್ದ ಶಿಕ್ಷಕ ಅಮಾನತು

ಖರ್ಗೆ ಭೇಟಿ ಫೋಟೋ ಹಾಕಿದ್ರಿ, ಮೋದಿ ಜೊತೆಗಿರುವ ಫೋಟೋ ಯಾಕಿಲ್ಲ: ಸಿದ್ದರಾಮಯ್ಯಗೆ ಪ್ರಶ್ನೆ

ಪತ್ನಿಗೆ ಅನಾರೋಗ್ಯ, ಕೆಲಸ ಕಾರ್ಯ ಬಿಟ್ಟು ಓಡಿ ಬಂದ ಸಿಎಂ ಸಿದ್ದರಾಮಯ್ಯ

Karnataka Weather: ಮುಗಿದಿಲ್ಲ ಮಳೆಗಾಲ, ಇಂದು ಈ ಜಿಲ್ಲೆಗಳಿಗೆ ಮಳೆ ಸಾಧ್ಯತೆ

ಮುಂದಿನ ಸುದ್ದಿ
Show comments