ಏಪ್ರಿಲ್ 16ರಿಂದ ಸೆಕೆಂಡ್ ಪಿಯು ಎಕ್ಸಾಂ- ತಾತ್ಕಾಲಿಕ ವೇಳಾಪಟ್ಟಿ ಪ್ರಕಟ

Webdunia
ಬುಧವಾರ, 19 ಜನವರಿ 2022 (21:10 IST)
ಬೆಂಗಳೂರು: ದ್ವಿತೀಯ ಪಿಯುಸಿ ಹಾಗೂ ಪ್ರಥಮ ಪಿಯುಸಿ ಪರೀಕ್ಷೆಗಳ ತಾತ್ಕಾಲಿಕ ವೇಳಾಪಟ್ಟಿ ಪ್ರಕಟವಾಗಿದೆ.
ಏಪ್ರಿಲ್ 16 ರಿಂದ ಮೇ 4 ವರೆಗೆ ಪರೀಕ್ಷೆ ನಡೆಸಲು ದಿನಾಂಕ ನಿಗದಿ ಮಾಡಲಾಗಿದೆ. ಪಿಯು ಬೋರ್ಡ್ ನಿಂದ ವೇಳಾಪಟ್ಟಿ ಪ್ರಕಟವಾಗಿದ್ದು, ಆಕ್ಷೇಪಣೆ ಸಲ್ಲಿಸಲು ಫೆಬ್ರವರಿ 1 ವರೆಗೆ ಅವಕಾಶ ನೀಡಲಾಗಿದೆ. ದ್ವಿತೀಯ ಪಿಯುಸಿ ಪ್ರಾಯೋಗಿಕ ಪರೀಕ್ಷೆ ಫೆಬ್ರವರಿ 17 ರಿಂದ ಮಾರ್ಚ್ 25 ವರೆಗೆ ನಡೆಸಲು ದಿನಾಂಕ ನಿಗದಿಯಾಗಿದೆ..
ದ್ವಿತೀಯ ಪಿಯುಸಿ ಪರೀಕ್ಷೆಗೆ ಶೇ.70ರಷ್ಟು ಪಠ್ಯಕ್ಕೆ ಮಾತ್ರ ಪರೀಕ್ಷೆ ನಡೆಯಲಿದೆ. ಭಾಷಾ ವಿಷಯಕ್ಕೆ ಶೇ.70ರಷ್ಟು ಪಠ್ಯದಲ್ಲಿ ಪರೀಕ್ಷೆ ನಡೆಯಲಿದ್ದು, ಐಚ್ಛಿಕ ವಿಷಯಗಳಲ್ಲಿ ಯಾವುದೇ ಬದಲಾವಣೆ ಇಲ್ಲ. ಶೇ.100ರಷ್ಟು ಪಠ್ಯದಲ್ಲಿ ಪರೀಕ್ಷೆ ನಡೆಯಲಿದೆ ಎಂದು ಪಿಯು ಬೋರ್ಡ್ ಆದೇಶ ಹೊರಡಿಸಿದೆ.
ಇತ್ತ ಪ್ರಥಮ ಪಿಯುಸಿ ವಾರ್ಷಿಕ ಪರೀಕ್ಷೆಗೂ ದಿನಾಂಕ ನಿಗದಿ ಮಾಡಲಾಗಿದೆ. ಮಾರ್ಚ್ 28 ರಿಂದ ಏಪ್ರಿಲ್ 13 ರವರೆಗೆ ಪರೀಕ್ಷೆ ನಡೆಯಲಿದೆ. ಪ್ರಥಮ ಪಿಯುಸಿ ಪರೀಕ್ಷೆಗೆ ಶೇ.70 ಪಠ್ಯಕ್ಕೆ ಮಾತ್ರ ಪರೀಕ್ಷೆ ನಡೆಯಲಿದ್ದು, ಭಾಷಾ ವಿಷಯಕ್ಕೆ ಶೇ.70ರಷ್ಟು ಪಠ್ಯದಲ್ಲಿ ಪರೀಕ್ಷೆ ನಡೆಯಲಿದೆ. ಇಲ್ಲಿಯೂ ಐಚ್ಛಿಕ ವಿಷಯಗಳಲ್ಲಿ ಯಾವುದೇ ಬದಲಾವಣೆ ಇಲ್ಲ. ಶೇ.100ರಷ್ಟು ಪಠ್ಯದಲ್ಲಿ ಪರೀಕ್ಷೆ ನಡೆಯಲಿದೆ.
ದ್ವಿತೀಯ ಪಿಯು ಪರೀಕ್ಷಾ ವೇಳಾಪಟ್ಟಿ ಇಂತಿದೆ:
ಏ.16- ಗಣಿತ, ಶಿಕ್ಷಣ, ಬೇಸಿಕ್ ಗಣಿತ.
ಏ.18- ರಾಜ್ಯಶಾಸ್ತ್ರ, ಸಂಖ್ಯಾಶಾಸ್ತ್ರ.
ಏ.19– ಹೆಲ್ತ್ ಕೇರ್, ರೀಟೇಲ್, ಇನ್ಫಾರ್ಮೇಶನ್ ಟೆಕ್ನಾಲಜಿ.
ಏ.20- ಇತಿಹಾಸ, ಭೌತಶಾಸ್ತ್ರ
ಏ.21– ತಮಿಳು, ತೆಲುಗು, ಮಲಯಾಳಂ, ಮರಾಠಿ, ಉರ್ದು, ಸಂಸ್ಕೃತ, ಅರೇಬಿಕ್, ಫ್ರೆಂಚ್.
ಏ.22– ಲಾಜಿಕ್, ಬ್ಯುಸಿನೆಸ್ ಸ್ಟಡೀಸ್.
ಏ.23- ಕರ್ನಾಟಕ ಸಂಗೀತ, ಹಿಂದುಸ್ತಾನಿ ಸಂಗೀತ, ಮನಃಶಾಸ್ತ್ರ, ರಸಾಯನಶಾಸ್ತ್ರ.
ಏ.25- ಅರ್ಥಶಾಸ್ತ್ರ
ಏ.26- ಹಿಂದಿ.
ಏ.28- ಐಚ್ಛಿಕ ಕನ್ನಡ, ಲೆಕ್ಕಶಾಸ್ತ್ರ, ಭೂಗರ್ಭಶಾಸ್ತ್ರ, ಗೃಹ ವಿಜ್ಞಾನ.
ಏ.29- ಕನ್ನಡ.
ಏ.30– ಸಮಾಜಶಾಸ್ತ್ರ, ವಿದ್ಯುನ್ಮಾನಶಾಸ್ತ್ರ, ಗಣಕ ವಿಜ್ಞಾನ
ಮೇ.2-ಭೂಗೋಳಶಾಸ್ತ್ರ, ಜೀವಶಾಸ್ತ್ರ
ಮೇ.4- ಇಂಗ್ಲಿಷ್

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇಂದಿರಾ, ಸೋನಿಯಾ, ಪ್ರಿಯಾಂಕಾರನ್ನು ಎಂಥವಳೋ ಎಂದು ಸಂಬೋಧನೆ ಮಾಡೋ ತಾಕತ್ತಿದೆಯಾ

ಸಂಕಷ್ಟಕ್ಕೆ ಕೈಜೋಡಿಸಿದ ಭಾರತಕ್ಕೆ ಶ್ರೀಲಂಕಾ ಧನ್ಯವಾದ

ದಿತ್ವಾ ಚಂಡಮಾರುತಕ್ಕೆ ಶ್ರೀಲಂಕಾದಲ್ಲಿ ಮೃತರ ಸಂಖ್ಯೆ 627ಕ್ಕೆ ಏರಿಕೆ, ಇನ್ನೂ ಹಲವು ಮಂದಿ ನಾಪತ್ತೆ

ನಾಳೆಯಿಂದ ಬೆಳಗಾವಿ ಅಧಿವೇಶನ, ಖಾಕಿ ಪಡೆ ಹೈ ಅಲರ್ಟ್‌

ವಿದ್ಯಾರ್ಥಿಗಳಿಗೆ ಗುಡ್‌ನ್ಯೂಸ್ ಕೊಟ್ಟ ಶಿಕ್ಷಣ ಸಚಿವ ಮಧು ಬಂಗಾರಪ್ಪ

ಮುಂದಿನ ಸುದ್ದಿ
Show comments