ಡಿಕೆ ಶಿವಕುಮಾರ್, ಸಿದ್ದರಾಮಯ್ಯ ಕಾಂಪ್ರಮೈಸ್ ಆಗಿರುವುದರ ಹಿಂದಿದ ಸೀಕ್ರೆಟ್ ಇದುವೇ

Krishnaveni K
ಭಾನುವಾರ, 30 ನವೆಂಬರ್ 2025 (11:31 IST)
ಬೆಂಗಳೂರು: ಕಳೆದ ಒಂದು ವಾರದಿಂದ ಸಿಎಂ ಕುರ್ಚಿಗಾಗಿ ನಡೆಯುತ್ತಿದ್ದ ಫೈಟ್ ಈಗ ಒಂದೇ ಮೀಟಿಂಗ್ ನಿಂದ ತಣ್ಣಗಾಗಿದೆ. ಇದರ ಹಿಂದೆ ಭಾರೀ ದೊಡ್ಡ ಸೀಕ್ರೆಟ್ ಇದೆ ಎಂದು ವಿಶ್ಲೇಷಿಸಲಾಗುತ್ತಿದೆ.

ಒಂದು ವಾರದಿಂದ ನಡೆಯುತ್ತಿದ್ದ ಕುರ್ಚಿ ಫೈಟ್ ಒಂದೇ ದಿನದಲ್ಲಿ ಇಬ್ಬರೂ ಕಾಂಪ್ರಮೈಸ್ ಮಾಡಿಕೊಂಡು ತಣ್ಣಗಾದಾಗ ಎಲ್ಲರಿಗೂ ಅಚ್ಚರಿಯಾಗಿದೆ. ಆದರೆ ಇದರ ಹಿಂದಿನ ಲೆಕ್ಕಾಚಾರವೇ ಬೇರೆಯೇ ಇದೆ ಎನ್ನುವುದು ಈಗ ಕೇಳಿಬರುತ್ತಿರುವ ಸುದ್ದಿ.

ನಾಯಕತ್ವದ ವಿಚಾರವಾಗಿ ವಿವಾದ ಮಾಡಿಕೊಳ್ಳಲು ಇದು ಸೂಕ್ತ ಸಮಯವಲ್ಲ ಎಂಬ ಸಂದೇಶ ಹೈಕಮಾಂಡ್ ನಿಂದ ಬಂದಿದೆ ಎನ್ನಲಾಗಿದೆ. ಈಗ ಕುರ್ಚಿಗಾಗಿ ಕಿತ್ತಾಡುತ್ತಿದ್ದರೆ ಪಕ್ಷಕ್ಕೆ ಡ್ಯಾಮೇಜ್ ಎಂಬ ಸಂದೇಶ ವರಿಷ್ಠರು ನೀಡಿದ್ದಾರೆ ಎನ್ನಲಾಗಿದೆ.

ಯಾಕೆಂದರೆ ಮುಂದಿನ ವಾರದಿಂದ ಲೋಕಸಭೆ ಚಳಿಗಾಲ ಅಧಿವೇಶನ ಆರಂಭವಾಗುತ್ತದೆ. ಡಿಸೆಂಬರ್ 8 ರಿಂದ ಕರ್ನಾಟಕದಲ್ಲಿ ವಿಧಾನಸಭೆ ಅಧಿವೇಶನ ಆರಂಭವಾಗುತ್ತದೆ. ಈ ಸಂದರ್ಭದಲ್ಲಿ ಕುರ್ಚಿಗಾಗಿ ರಾಜ್ಯ ಸರ್ಕಾರದಲ್ಲೇ ಕಿತ್ತಾಟ ನಡೆಯುತ್ತಿದ್ದರೆ ಇದು ಬಿಜೆಪಿ ಮತ್ತು ಮಿತ್ರ ಪಕ್ಷಗಳಿಗೆ ದೊಡ್ಡ ಅಸ್ತ್ರವಾಗಲಿದೆ. ಹೀಗಾಗಿ ಸದ್ಯಕ್ಕೆ ಅಧಿವೇಶನದಲ್ಲಿ ಎದುರಾಳಿ ಪಕ್ಷವನ್ನು ಎದುರಿಸುವ ಬಗ್ಗೆ ಯೋಜನೆ ರೂಪಿಸಬೇಕಿದೆ. ಇಂತಹ ಸಂದರ್ಭದಲ್ಲಿ ಇಲ್ಲದ ರಗಳೆಗಳು ಬೇಡ ಎಂದು ಹೈಕಮಾಂಡ್ ನಿಂದ ಸೂಚನೆ ಬಂದಿರುವ ಕಾರಣಕ್ಕೇ ಇಬ್ಬರೂ ಮಾತನಾಡಿಕೊಂಡು ಸದ್ಯಕ್ಕೆ ಕಾಂಪ್ರಮೈಸ್ ಆಗಿದ್ದಾರೆ ಎನ್ನಲಾಗುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಡಿಕೆ ಶಿವಕುಮಾರ್, ಸಿದ್ದರಾಮಯ್ಯ ಕಾಂಪ್ರಮೈಸ್ ಆಗಿರುವುದರ ಹಿಂದಿದ ಸೀಕ್ರೆಟ್ ಇದುವೇ

ದಿತ್ವಾ ಚಂಡಮಾರುತದ ಎಫೆಕ್ಟ್‌ಗೆ ಗಡಗಡ ನಡುಗಿದ ಸಿಲಿಕಾನ್ ಮಂದಿ

ದಿತ್ವಾ ಚಂಡಮಾರುತ, ದೇಶದ ಈ ಪ್ರದೇಶದಲ್ಲಿ ರೆಡ್ ಅಲರ್ಟ್ ಘೋಷಣೆ

ಸಿದ್ದರಾಮಯ್ಯ, ಶಿವಕುಮಾರ್ ಬ್ರೇಕ್‌ಫಾಸ್ಟ್ ಭೇಟಿ ಬಗ್ಗೆ ಡಿಕೆ ಸುರೇಶ್ ಸ್ಪೋಟಕ ಹೇಳಿಕೆ

ಭ್ರಾತೃತ್ವ ಬೇರೂರಿರುವ ಭಾರತದಲ್ಲಿ ವಿವಾದ ತರವಲ್ಲ: ಮೋಹನ್ ಭಾಗವತ್

ಮುಂದಿನ ಸುದ್ದಿ
Show comments