Webdunia - Bharat's app for daily news and videos

Install App

ಕುಮಾರಸ್ವಾಮಿಯ ಬಿಡದಿ ತೋಟದ ಮನೆಯಲ್ಲಿ ನಡೆಯಿತು ಆ ಒಂದು ಸೀಕ್ರೆಟ್

Krishnaveni K
ಸೋಮವಾರ, 28 ಅಕ್ಟೋಬರ್ 2024 (12:54 IST)
ಬೆಂಗಳೂರು: ಚನ್ನಪಟ್ಟಣ ಬೈ ಎಲೆಕ್ಷನ್ ಗೆಲ್ಲಲು ಶತಾಯ ಗತಾಯ ಪ್ರಯತ್ನ ಮಾಡುತ್ತಿರುವ ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ತಮ್ಮ ತೋಟದ ಮನೆಯಲ್ಲಿ ಭರ್ಜರಿ ಪ್ಲ್ಯಾನಿಂಗ್ ಮಾಡಿದ್ದಾರೆ ಎಂದು ತಿಳಿದುಬಂದಿದೆ.

ಚನ್ನಪಟ್ಟಣ ಉಪ ಚುನಾವಣೆ ಕುಮಾರಸ್ವಾಮಿಯವರಿಗೆ ಪ್ರತಿಷ್ಠೆಯ ಕಣ. ಬಿಜೆಪಿಯಲ್ಲಿದ್ದಾಗ ಸಿಪಿ ಯೋಗೇಶ್ವರ್ ಟಿಕೆಟ್ ಕೇಳಿದರೂ ಕೊಡದೇ ತಮ್ಮ ಪುತ್ರ ನಿಖಿಲ್ ರನ್ನೇ ಇಲ್ಲಿಂದ ಕಣಕ್ಕಿಳಿಸಿದ್ದಾರೆ. ಈ ಜಿದ್ದು ಬಿಜೆಪಿಯ ಕೆಲವು ನಾಯಕರಿಗೆ ಒಳಗೊಳಗೇ ಇದೆ. ಆದರೆ ಮೈತ್ರಿಯಾಗಿರುವ ಕಾರಣಕ್ಕೆ ಹೇಳಿಕೊಳ್ಳುವಂತಿಲ್ಲ.

ನಿಖಿಲ್ ಈಗಾಗಲೇ ಹಿಂದೊಮ್ಮೆ ಚುನಾವಣೆ ಎದುರಿಸಿ ಸೋತಿದ್ದಾರೆ. ಹೀಗಾಗಿ ಮತ್ತೆ ಸೋತರೆ ಅದು ಕುಮಾರಸ್ವಾಮಿಗೇ ಅಭಿಮಾನ ಭಂಗವಾದಂತೆ. ಹೀಗಾಗಿ ಎಚ್ ಡಿ ಕುಮಾರಸ್ವಾಮಿ ಈಗ ಚನ್ನಪಟ್ಟಣದಲ್ಲಿ ಯಾವ ಲೆಕ್ಕಾಚಾರಗಳೊಂದಿಗೆ ಪ್ರಚಾರ ನಡೆಸಬೇಕು ಎಂದು ತಮ್ಮ ಬಿಡದಿಯ ತೋಟದ ಮನೆಯಲ್ಲಿ ರಹಸ್ಯ ಮೀಟಿಂಗ್ ನಡೆಸಿದ್ದಾರೆ ಎಂದು ತಿಳಿದುಬಂದಿದೆ.

ಯಾವ ಸಮುದಾಯದ ಮತ ಸೆಳೆಯುವತ್ತ ಗಮನ ಹರಿಸಬೇಕು, ಪ್ರಚಾರ ಯಾವ ರೀತಿ ಇರಬೇಕು ಎಂದು ಕುಮಾರಸ್ವಾಮಿ ತಮ್ಮ ತೋಟದ ಮನೆಯಲ್ಲಿ ಮೀಟಿಂಗ್ ನಡೆಸಿ ಯೋಜನೆ ರೂಪಿಸಿದ್ದಾರೆ. ಇಂದಿನಿಂದ ಅವರು ಚುನಾವಣಾ ಪ್ರಚಾರ ಕಣಕ್ಕಿಳಿಯಲಿದ್ದು, ಅದಕ್ಕೆ ಮುನ್ನ ಸರಿಯಾಗಿ ಯೋಜನೆ ರೂಪಿಸಿಕೊಂಡೇ ಕಣಕ್ಕಿಳಿಯುತ್ತಿದ್ದಾರೆ ಎಂದು ತಿಳಿದುಬಂದಿದೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Arecanut price today: ಅಡಿಕೆ, ಕಾಳುಮೆಣಸು ಇಂದಿನ ಮಾರುಕಟ್ಟೆ ದರ ಹೇಗಿದೆ

Gold Price today: ಚಿನ್ನ ಖರೀದಿದಾರರಿಗೆ ಇಂದು ಮತ್ತೆ ಶಾಕ್

Indore Raja Raghuvanshi murder: ಗಂಡನ ಕೊಲೆ ಮಾಡಿದ ಸೋನಂ ಅದೊಂದನ್ನು ಮಾತ್ರ ಬಿಟ್ಟು ಹೋಗಿದ್ದಳು

Pradeep Eshwar: ಮೋದಿ 11 ವರ್ಷದಲ್ಲಿ ಕಡಿದು ಕಟ್ಟೆ ಹಾಕಿದ್ದಾರೆ ಬಿಡ್ರಿ: ಪ್ರದೀಪ್ ಈಶ್ವರ್

ಕುರ್ಚಿ ಉಳಿಸಿಕೊಳ್ಳಲು ಭಾರತದ ಜೊತೆಗೇ ಯುದ್ಧ ಮಾಡಲು ಹೊರಟಿದ್ದರಂತೆ ಬಾಂಗ್ಲಾ ಪ್ರಧಾನಿ ಯೂನಸ್

ಮುಂದಿನ ಸುದ್ದಿ
Show comments