ಕಳ್ಳನೆಂದು ಭಾವಿಸಿ ಎಂ.ಬಿ.ಎ. ಪದವೀಧರನ ಕೊಲೆ

Webdunia
ಸೋಮವಾರ, 11 ಜುಲೈ 2022 (16:29 IST)

ಬೆಂಗಳೂರಿಗೆ ಹೊಸಬರಾಗಿದ್ದ ಅಬಿನಾಶ್, ಮಾರತ್ತಹಳ್ಳಿಯ ಅಪಾರ್ಟ್‌ಮೆಂಟ್‌ ಸಮುಚ್ಚಯವೊಂದರಲ್ಲಿರುವ ಸ್ನೇಹಿತರೊಬ್ಬರ ಫ್ಲ್ಯಾಟ್‌ನಲ್ಲಿ ಉಳಿದುಕೊಂಡಿದ್ದರು' ಎಂದು ಪೊಲೀಸರು ಹೇಳಿದರು.

'ಅಬಿನಾಶ್ ಹಾಗೂ ಸ್ನೇಹಿತ, ಜುಲೈ 4ರಂದು ರಾತ್ರಿ ಮಾರತ್ತಹಳ್ಳಿ ಬಳಿಯ ಬಾರೊಂದಕ್ಕೆ ಹೋಗಿ ಮದ್ಯ ಕುಡಿದಿದ್ದರು. ವೈಯಕ್ತಿಕ ಕೆಲಸ ಇರುವುದಾಗಿ ಹೇಳಿದ್ದ ಸ್ನೇಹಿತ, ಬಾರ್‌ನಿಂದ ಅರ್ಧಕ್ಕೆ ಹೊರಟು ಹೋಗಿದ್ದರು. ಅಭಿನಾಶ್, ತಡರಾತ್ರಿ ಬಾರ್‌ನಿಂದ ಹೊರಬಂದು ಒಬ್ಬರೇ ಫ್ಲ್ಯಾಟ್‌ನತ್ತ ಹೊರಟಿದ್ದರು.'

'ಮದ್ಯದ ಅಮಲಿನಲ್ಲಿದ್ದ ಅಬಿನಾಶ್ ಅವರಿಗೆ ಫ್ಲ್ಯಾಟ್‌ಗೆ ಹೋಗುವ ದಾರಿ ಗೊತ್ತಾಗಿರಲಿಲ್ಲ. ದಾರಿ ತಪ್ಪಿ ಆನಂದನಗರದಲ್ಲಿರುವ ವಂಶಿ ಸಿಟಾಡೆಲ್ ಅಪಾರ್ಟ್‌ಮೆಂಟ್‌ ಸಮುಚ್ಚಯದ ಬಳಿ ಹೋಗಿದ್ದರು. ತಮ್ಮದೇ ಅಪಾರ್ಟ್‌ಮೆಂಟ್‌ ಸಮುಚ್ಚಯ ಇರಬಹುದೆಂದು ತಿಳಿದು, ಒಳಹೋಗಲು ಮುಂದಾಗಿದ್ದರು. ಆದರೆ, ಗೇಟ್‌ ಮುಚ್ಚಿತ್ತು. ಕಾಂಪೌಂಡ್ ಹತ್ತಿ ಜಿಗಿಯಲು ಯತ್ನಿಸಿದ್ದರು' ಎಂದೂ ಪೊಲೀಸರು ಹೇಳಿದರು.

'ವಂಶಿ ಸಿಟಾಡೆಲ್ ಅಪಾರ್ಟ್‌ಮೆಂಟ್‌ ಸಮುಚ್ಚಯದ ಭದ್ರತಾ ಸಿಬ್ಬಂದಿ ಶ್ಯಾಮನಾಥ್ ಹಾಗೂ ಸ್ನೇಹಿತ ಅಜಿತ್, ಅಬಿನಾಶ್‌ ಅವರನ್ನು ತಡೆದು ಪ್ರಶ್ನಿಸಿದ್ದರು. ಪ್ಯಾಂಟ್‌ ಇಲ್ಲದೇ ಚಡ್ಡಿ ಮಾತ್ರ ಧರಿಸಿದ್ದರಿಂದ ಅನುಮಾನಗೊಂಡು ಗುರುತಿನ ಚೀಟಿ ತೋರಿಸುವಂತೆ ಹೇಳಿದ್ದರು. ಆದರೆ, ಅಭಿನಾಶ್ ಸಮರ್ಪಕ ಉತ್ತರ ನೀಡಿರಲಿಲ್ಲ.'

'ಕಳ್ಳನಿರಬೇಕೆಂದು ತಿಳಿದ ಭದ್ರತಾ ಸಿಬ್ಬಂದಿ, ಅಭಿನಾಶ್ ಅವರ ತಲೆಗೆ ರಾಡ್‌ನಿಂದ ಹೊಡೆದಿದ್ದರು. ತೀವ್ರ ರಕ್ತಸ್ರಾವವಾಗಿ ಅಭಿನಾಶ್ ಮೃತಪಟ್ಟಿದ್ದರು. ಘಟನೆ ಬಗ್ಗೆ ಮಾಹಿತಿ ಬರುತ್ತಿದ್ದಂತೆ ಭದ್ರತಾ ಸಿಬ್ಬಂದಿಯನ್ನು ವಶಕ್ಕೆ ಪಡೆದು, ಅವರ ಹೇಳಿಕೆ ಆಧರಿಸಿ ಪ್ರಕರಣ ದಾಖಲಿಸಿಕೊಳ್ಳಲಾಗಿತ್ತು. ಆರಂಭದಲ್ಲಿ ಮೃತನ ಹೆಸರು ಗೊತ್ತಾಗಿರಲಿಲ್ಲ. ತನಿಖೆ ಕೈಗೊಂಡಾಗ, ಅಬಿನಾಶ್ ಹೆಸರು ತಿಳಿಯಿತು' ಎಂದೂ ಪೊಲೀಸರು ತಿಳಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬ್ರೆಜಿಲ್ ಮಾಡೆಲ್ ನಿಂದ ವೋಟ್ ಎಂದ ರಾಹುಲ್ ಗಾಂಧಿ: ಇಟೆಲಿ ಮಹಿಳೆಯೂ ಮಾಡಿಲ್ವಾ ಎಂದ ಬಿಜೆಪಿ

ಬಿಹಾರದಲ್ಲಿ ಮೊದಲ ಹಂತದ ಮತದಾನ ಶುರು: ಪ್ರಧಾನಿ ಮೋದಿ ಮಾಡಿದ ಮನವಿಯೇನು

Karnataka Weather: ರಾಜ್ಯದಲ್ಲಿ ಇನ್ನೆಷ್ಟು ದಿನ ಮಳೆ ಇಲ್ಲಿದೆ ವಿವರ

ಅನ್ನದಾತರ ಜೊತೆ ಜನ್ಮದಿನ ಯಾವತ್ತೂ ಮರೆಯಲಾರೆ: ವಿಜಯೇಂದ್ರ

ತಮ್ಮ ಪಕ್ಷದಲ್ಲೇ ಬೇರೆಯವರಿಗೆ ಅವಕಾಶ ಕೊಡದ ಗಾಂಧಿ ಕುಟುಂಬದವರು ಸೇನೆ ಬಗ್ಗೆ ಮಾತನಾಡ್ತಾರೆ: ಬಿಜೆಪಿ ವ್ಯಂಗ್ಯ

ಮುಂದಿನ ಸುದ್ದಿ
Show comments