Webdunia - Bharat's app for daily news and videos

Install App

ನೆರೆಗೆ ಹಾಳಾದ ಜಮೀನಲ್ಲೇ ಸೀಗೆ ಹುಣ್ಣಿಮೆ ಆಚರಣೆ: ಹಬ್ಬದ ದಿನ ಕಣ್ಣೀರು ಹಾಕಿದ ಅನ್ನದಾತ

Webdunia
ಶುಕ್ರವಾರ, 11 ಅಕ್ಟೋಬರ್ 2019 (17:08 IST)
ಪ್ರವಾಹದಿಂದ ಬೆಳೆ, ಬದುಕು ಕಳೆದುಕೊಂಡ ರೈತಾಪಿ ವರ್ಗ ಅಳಿದುಳಿದ ಜಮೀನಿನ ಬೆಳೆಯಲ್ಲೇ ಸೀಗೆ ಹುಣ್ಣಿಮೆ ಆಚರಿಸಿದ್ದು, ಜಮೀನಿನ ಪರಿಸ್ಥಿತಿ ಕಂಡು ಹಬ್ಬದಲ್ಲೂ ಕಣ್ಣೀರು ಹಾಕಿದ್ದಾರೆ.

ಧಾರವಾಡ ಜಿಲ್ಲೆಯ ಕೆಲಭಾಗಗಳಲ್ಲಿ ರೈತ ಸಮೂಹ ಸೀಗೆ ಹುಣ್ಣಿಮೆಯನ್ನು ಶ್ರದ್ಧಾ-ಭಕ್ತಿಗಳೊಂದಿಗೆ ಸಂಭ್ರಮದಿಂದ ಆಚರಿಸಿತು. ಈ ಬಾರಿ ಮಳೆಯಿಂದಾಗಿ ರೈತ ಸಮೂಹ ತೀವ್ರ ಸಂಕಷ್ಟದಲ್ಲಿದೆ. ಆದರೂ ಕೂಡ ಸಂಪ್ರದಾಯವನ್ನು ಕೈಬಿಡಬಾರದೆಂಬ ಉದ್ದೇಶದಿಂದ ರೈತರು ಭೂದೇವಿಯ ಆರಾಧನೆಯಲ್ಲಿ ನಿರತವಾಗಿ ವಿಶೇಷವಾಗಿ ಗಮನ ಸೆಳೆದರು.

 ವಿಜಯದಶಮಿಯ ಬಳಿಕ ಬರುವ ಸೀಗೆ ಹುಣ್ಣಿಮೆಗೆ ಗ್ರಾಮೀಣ ಭಾಗದಲ್ಲಿ ವಿಶೇಷ ಮಹತ್ವ ನೀಡಲಾಗುತ್ತದೆ. ಬೆಳಗ್ಗೆ ಮನೆಯಲ್ಲಿ 5 ಬಗೆಯ ಕಾಳುಗಳನ್ನು ಕುದಿಸಿ ಅವುಗಳನ್ನು ಹೊಲದ ಸುತ್ತಲೂ ಚರಗ ರೂಪದಲ್ಲಿ ಚೆಲ್ಲುವ ಸಂಪ್ರದಾಯವಿದೆ.

ಹೀಗೆ ಚರಗ ಚೆಲ್ಲುವುದರಿಂದ ಫಸಲು ಸಮದ್ಧವಾಗಿರಲಿದೆ ಎನ್ನುವ ನಂಬಿಕೆ ಜನಪದದಲ್ಲಿದೆ.  ಜಾನುವಾರುಗಳ ಮೈತೊಳೆದು ಸಿಂಗರಿಸುವುದು ಸಂಪ್ರದಾಯವಾಗಿದೆ. ಹೊಲಗಳಲ್ಲಿ ಪೂಜೆ ಮಾಡಿ ಚರಗಾ ಚಲ್ಲಿದರೇ ಕೆಲವು ಕುಟುಂಬಗಳು ಚಕ್ಕಡಿ ಕಟ್ಟಿಕೊಂಡು ಕುಟುಂಬ ಸದಸ್ಯರ ಜೊತೆಗೆ ತಮ್ಮ ಕೃಷಿ ಭೂಮಿಗೆ ತೆರಳಿದ್ರು. ಬೆಳೆದು ನಿಂತಿರುವ ಫಸಲಿಗೆ ಪೂಜೆ ಸಲ್ಲಿಸಿ, ಧನ್ಯತಾ ಭಾವದಲ್ಲಿ ತೇಲಿದರು.

ಪ್ರವಾಹದಿಂದ ನೀರುಪಾಲಾದ ಬೆಳೆಯನ್ನು ಕಂಡು ಕೆಲವು ರೈತರು ಹಬ್ಬದ ಸಂಭ್ರಮದಲ್ಲೂ ಕಣ್ಣೀರು ಹಾಕಿದ್ದಾರೆ.

 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments