Webdunia - Bharat's app for daily news and videos

Install App

ಲಾಠಿ ಚಾರ್ಜ್‌ನಲ್ಲಿ ಗಾಯಗೊಂಡವರಿಗಾಗಿ ಆತ್ಮಸ್ಥೈರ್ಯ ಅಭಿಯಾನ: ಪಂಚಮಸಾಲಿ ಪೀಠ ಸ್ವಾಮೀಜಿ

Sampriya
ಶನಿವಾರ, 21 ಡಿಸೆಂಬರ್ 2024 (17:42 IST)
Photo Courtesy X
ಬೆಳಗಾವಿ: 2ಎ ಮೀಸಲಾತಿಗಾಗಿ ನಡೆದ ಹೋರಾಟದಲ್ಲಿ ಪೊಲೀಸರ ಲಾಠಿ ಪ್ರಹಾರದಿಂದ ಗಾಯಗೊಂಡವರ ಮನೆಗೆ ತೆರಳಿ ಆತ್ಮಸ್ಥೈರ್ಯ ತುಂಬುವ ಅಭಿಯಾನವನ್ನು ಡಿ.23ರಂದು ಬೆಳಗಾವಿಯಲ್ಲಿ ಆರಂಭಿಸಲು ನಿರ್ಧರಿಸಲಾಗಿದೆ ಎಂದು ಕೂಡಲಸಂಗಮ ಲಿಂಗಾಯತ ಪಂಚಮಸಾಲಿ ಪೀಠದ ಬಸವ ಜಯಮೃತ್ಯಂಜಯ ಸ್ವಾಮೀಜಿ ತಿಳಿಸಿದರು.

ಲಾಠಿ ಚಾರ್ಜ್‌ ಘಟನೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಕ್ಷಮೆಯಾಚಿಸಬೇಕು, 12 ಮಂದಿದ ವಿರುದ್ಧ ದಾಖಲಿಸಿರುವ ಎಫ್‌ಐಆರ್‌ ಹಿಂಪಡೆಯಬೇಕು, ಲಾಠಿ ಚಾರ್ಜ್‌ ಮಾಡಿದ ಪೊಲೀಸ್‌ ಅಧಿಕಾರಿ ಅಮಾನತುಗೊಳಿಸಬೇಕು ಎಂಬ ಆಗ್ರಹಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮಣಿದಿಲ್ಲ ಎಂದು ದೂರಿದರು.

ಬೆಳಗಾವಿಯಿಂದ ಅಭಿಯಾನ ಆರಂಭಿಸಿ ವಿವಿಧ ಜಿಲ್ಲೆ, ತಾಲ್ಲೂಕುಗಳಲ್ಲಿ ಗಾಯಾಳುಗಳ ಮನೆಗೆ ಭೇಟಿ ನೀಡಿ ಆತ್ಮಸ್ಥೈರ್ಯ ತುಂಬಲಾಗುವುದು. ಸಮುದಾಯದವರಿಂದ ಧನ ಸಂಗ್ರಹಿಸಿ ಗಾಯಾಳುಗಳಿಗೆ ಆರ್ಥಿಕ ಸಹಾಯ ನೀಡಲಾಗುವುದು ಎಂದು ತಿಳಿಸಿದರು.

ಬೆಳಗಾವಿಯಲ್ಲಿ ವಿಕಾಸಸೌಧಕ್ಕೆ ಮುಂದಾದ ಹೋರಾಟಗಾರರಿಗೆ ಪೊಲೀಸರು ಮಾರಣಾಂತಿಕವಾಗಿ ಹೊಡೆದಿದ್ಧಾರೆ. ಕೆಲವರಿಗೆ ತಲೆಗೆ ಪೆಟ್ಟಾಗಿದೆ, ಕೈ ಮುರಿದಿದೆ. ಸಂಕ್ರಾಂತಿ ನಂತರ ಪ್ರತಿ ಹಳ್ಳಿಗೆ ಹೋಗಿ ಸಮುದಾಯದವರೊಂದಿಗೆ ಸಂವಾದ ನಡೆಸುತ್ತೇನೆ. ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನೀಡಲು ಸರ್ಕಾರ ತೋರಿದ ಅಲಕ್ಷ್ಯವನ್ನು ತಿಳಿಸುತ್ತೇನೆ ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Ramalinga Reddy: ಬಿಜೆಪಿಯವರ ಮೇಲೆ ಯಾಕೆ ಐಟಿ, ಇಡಿ ದಾಳಿ ಆಗಲ್ಲ: ರಾಮಲಿಂಗಾ ರೆಡ್ಡಿ

ಸಿಎಂ ಸಿದ್ದರಾಮಯ್ಯ ಔಟ್ ಗೋಯಿಂಗ್ ವ್ಯಕ್ತಿ: ಅವರ ಮಾನಸಿಕ ಸ್ಥಿತಿ ಸರಿಯಿಲ್ಲ ಎಂದ ಅಶೋಕ್‌

Pradeep Eshwar: ಚಕ್ರವರ್ತಿ ಸೂಲಿಬೆಲೆ ಎಲ್ಲ ನನ್ನ ಲೆವೆಲ್ ನಲ್ಲಿಲ್ಲ, ನನ್ನ ಲೆವೆಲ್ಲೇ ಬೇರೆ: ಪ್ರದೀಪ್ ಈಶ್ವರ್

Arecanut price today: ಅಡಿಕೆ, ಕಾಳುಮೆಣಸು ಇಂದಿನ ಮಾರುಕಟ್ಟೆ ದರ ಹೇಗಿದೆ

Gold Price today: ಚಿನ್ನ ಖರೀದಿದಾರರಿಗೆ ಇಂದು ಮತ್ತೆ ಶಾಕ್

ಮುಂದಿನ ಸುದ್ದಿ
Show comments