Webdunia - Bharat's app for daily news and videos

Install App

ರಾಜ್ಯಗಳಿಗೆ ಆಕ್ರಮವಾಗಿ ಲಾರಿಯಲ್ಲಿ ಗಾಂಜಾ ಮಾರಾಟ

Webdunia
ಭಾನುವಾರ, 29 ಆಗಸ್ಟ್ 2021 (19:41 IST)
ಬೆಂಗಳೂರು: 
 
ಹೈದರಾಬಾದ್ ಮೂಲಕ ಮಹಾರಾಷ್ಟ್ರ ಸೇರಿದಂತೆ ವಿವಿಧ ರಾಜ್ಯಗಳಿಗೆ ಅಕ್ರಮವಾಗಿ ಲಾರಿಯಲ್ಲಿ ಕೋಟ್ಯಂತರ ರೂ. ಮೌಲ್ಯದ ಹೈಟೆಕ್ ಗಾಂಜಾ ಸಾಗಿಸುತ್ತಿದ್ದ ಮಹಾರಾಷ್ಟ್ರ ಮೂಲದ ಮೂವರು ಅಂತಾರಾಜ್ಯ ಆರೋಪಿಗಳನ್ನು ಎನ್‌ಸಿಬಿ(ಮಾದಕವಸ್ತು ನಿಯಂತ್ರಣ ದಳ) ಬೆಂಗಳೂರು ವಲಯದ ಅಧಿಕಾರಿಗಳು ಬಂಧಿಸಿದ್ದಾರೆ.
 
ಮಹಾರಾಷ್ಟ್ರದ ಲಾತೂರ್ ಮೂಲದ ಶಿಂಧೆ, ಕಾಂಬ್ಲೆ ಹಾಗೂ ಜೋಗ್ದಂದ್ ಬಂಧಿತ ಆರೋಪಿಗಳು. ಬಂಧಿತರಿಂದ ಸುಮಾರು 21 ಕೋಟಿ ರೂ. ಮೌಲ್ಯದ 3,400 ಕೆ.ಜಿ ಹೈಟೆಕ್ ಗಾಂಜಾ ಹಾಗೂ ಲಾರಿಯನ್ನು ವಶಕ್ಕೆೆ ಪಡೆಯಲಾಗಿದೆ.
ಕಳೆದ ಜೂನ್‌ನಲ್ಲಿ ಕಾರ್ಯಾಚರಣೆ ನಡೆಸಿದ ಎನ್‌ಸಿಬಿ, 15 ಕೋಟಿ ರೂ. ಮೌಲ್ಯದ 2 ಸಾವಿರ ಕೆ.ಜಿ. ತೂಕದ ಗಾಂಜಾ ವಶಕ್ಕೆ ಪಡೆದು, ಮಹಾರಾಷ್ಟ್ರ ಮೂಲದ ನಾಲ್ವರು ಆರೋಪಿಗಳನ್ನು ಬಂಧಿಸಿತ್ತು. ಇದೀಗ 21 ಕೋಟಿ ರೂ. ಮೌಲ್ಯದ 3,400 ಕೆ.ಜಿ ಮೌಲ್ಯದ ಗಾಂಜಾ ವಶಕ್ಕೆ ಪಡೆದಿರುವುದು ಎನ್‌ಸಿಬಿ ಇತಿಹಾಸದಲ್ಲಿ ಅತಿ ದೊಡ್ಡ ಕಾರ್ಯಾಚರಣೆಯಾಗಿದೆ.
 
ಆರೋಪಿಗಳು, ಮಹಾರಾಷ್ಟ್ರ ಮಾತ್ರವಲ್ಲದೆ, ಓಡಿಶಾ, ಪಶ್ಚಿಮ ಬಂಗಾಳ, ಗುಜರಾತ್, ರಾಜಸ್ಥಾಾನ ಸೇರಿದಂತೆ ಶ್ರೀಲಂಕಾಕ್ಕೂ ಅಕ್ರಮವಾಗಿ ಗಾಂಜಾ ಸರಬರಾಜು ಮಾರಾಟ ಮಾಡುತ್ತಿದ್ದರು. ವಿವಿಧ ರಾಜ್ಯಗಳಲ್ಲಿ ನಡೆಯುವ ಪಾರ್ಟಿಗಳು ಹಾಗೂ ಕಾಲೇಜು ವಿದ್ಯಾರ್ಥಿಗಳನ್ನು ಗುರಿಯಾಗಿಸಿಕೊಂಡು ಮಾರಾಟ ಮಾಡುತ್ತಿಿರುವುದು ವಿಚಾರಣೆ ವೇಳೆ ತಿಳಿದು ಬಂದಿದೆ.
 
ಆರೋಪಿಗಳಿಂದ ಸುಳಿವು:
ತೆಲಂಗಾಣ, ಆಂಧ್ರಪ್ರದೇಶಗಳಲ್ಲಿ ಗಾಂಜಾ ಮಾರಾಟ ಚಟುವಟಿಕೆ ಹೆಚ್ಚಳವಾದ ಹಿನ್ನೆೆಲೆಯಲ್ಲಿ ಎನ್‌ಸಿಬಿ ಅಧಿಕಾರಿಗಳು ಕಾರ್ಯಪ್ರವೃತ್ತರಾಗಿದ್ದರು. ಈ ಹಿಂದೆ ಮಾದಕ ವಸ್ತು ಡ್ರಗ್ಸ್ ಪ್ರಕರಣದಲ್ಲಿ ಬಂಧಿತ ಆರೋಪಿಗಳು ನೀಡಿದ ಸುಳಿವಿನ ಮೇರೆಗೆ ತನಿಖೆ ಚುರುಕುಗೊಳಿಸಿದ್ದರು. ಅದರಂತೆ, ಖಚಿತ ಮಾಹಿತಿ ಮೇರೆಗೆ ಹೈದರಾಬಾದ್ ಹೊರವರ್ತುಲದಲ್ಲಿ ಮಹಾರಾಷ್ಟ್ರಕ್ಕೆ ತೆರಳುತ್ತಿದ್ದ ಲಾರಿಯನ್ನು ತಡೆದು ಪರಿಶೀಲಿಸಿದಾಗ ಅಕ್ರಮವಾಗಿ ಮಾದಕವಸ್ತು ಸಾಗಾಟ ಮಾಡುತ್ತಿರುವುದು ಬೆಳಕಿಗೆ ಬಂದಿದೆ.
 
ಸಸಿಗಳ ಬುಡದಲ್ಲಿನ ಮಣ್ಣಿನಲ್ಲಿ ಗಾಂಜಾ:
ಆರೋಪಿಗಳು, ಯಾರಿಗೂ ಅನುಮಾನ ಬಾರದಿರಲು ಸಸಿಗಳ ಬುಡದಲ್ಲಿನ ಮಣ್ಣಿನ ಜೊತೆ ಪ್ಲಾಸ್ಟಿಕ್‌ನಿಂದ ಗಾಂಜಾ ಸುತ್ತಿಿ ಮಣ್ಣು ಮುಚ್ಚಿದ್ದರು. ಅಲ್ಲದೆ, 141 ಗೋಣಿಚೀಲದಲ್ಲಿ ಗಾಂಜಾ ಪ್ಯಾಕೆಟ್‌ಗಳನ್ನು ಇಟ್ಟು ಅದರೊಳಗೆ ಮಣ್ಣು ತುಂಬಿದ್ದರು. ಹೀಗೆ, ವಶಪಡಿಸಿಕೊಂಡಿರುವ ಲಾರಿಯು ಮಹಾರಾಷ್ಟ್ರದಲ್ಲಿ ನೋಂದಣಿಯಾಗಿದೆ. ಆರೋಪಿಗಳು, ಪುಣೆ, ಥಾಣೆ, ಮುಂಬೈ ಸೇರಿದಂತೆ ವಿವಿಧ ರಾಜ್ಯಗಳಲ್ಲಿ ಅಕ್ರಮವಾಗಿ ಗಾಂಜಾ ಸಾಗಾಟ ಮಾಡುತ್ತಿದ್ದರು ಎಂದು ಎನ್‌ಸಿಬಿ ಅಧಿಕಾರಿಗಳು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಂವಿಧಾನದ ಬಗ್ಗೆ ಆರ್ ಎಸ್ಎಸ್ ನ ದತ್ತಾತ್ರೇಯ ಹೊಸಬಾಳೆ ಮಾತು ಒಪ್ಪಲ್ಲ: ಎಚ್ಎಂ ರೇವಣ್ಣ

ರಮೇಶ್ ಜಾರಕಿಹೊಳಿ ಸಿಡಿ ಮಾಡಿದವರು ಯಾರೆಂದು ಹೇಳಿದ ಬಸನಗೌಡ ಪಾಟೀಲ್ ಯತ್ನಾಳ್

ಹಿಂದುಳಿದ ವರ್ಗಗಳ ಕಡೆಗಣನೆಯಿಂದ ಅಧಿಕಾರ ಕಳಕೊಂಡ ಕಾಂಗ್ರೆಸ್: ಭೂಪೇಂದ್ರ ಯಾದವ್

ಸುಹಾಸ್ ಶೆಟ್ಟಿ ಕೇಸ್: ಹಿಂದೂ ಸಂಘಟನೆಗಳ ಅನುಮಾನ ನಿಜವಾಯ್ತು

ಜೆಲ್ಲಿ ಚಾಕಲೇಟ್ ಸೇವಿಸುವ ಮುನ್ನ ಹುಷಾರ್

ಮುಂದಿನ ಸುದ್ದಿ