Webdunia - Bharat's app for daily news and videos

Install App

ಕಾವೇರಿ ಸಭೆ: ಉಭಯ ರಾಜ್ಯಗಳಿಗೆ ತಜ್ಞರ ತಂಡ ಕಳುಹಿಸಲು ಸಿದ್ದರಾಮಯ್ಯ ಮನವಿ

Webdunia
ಗುರುವಾರ, 29 ಸೆಪ್ಟಂಬರ್ 2016 (17:21 IST)
ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಕೇಂದ್ರ ಮಧ್ಯಸ್ಥಿಕೆಯಲ್ಲಿ ನಡೆದ ಉಭಯ ರಾಜ್ಯಗಳ ಸಂಧಾನ ಸಭೆಯಲ್ಲಿ ಎರಡು ರಾಜ್ಯಗಳಿಗೂ ತಜ್ಞರ ತಂಡ ಕಳುಹಿಸಿ ನೀರಿನ ಲಭ್ಯತೆ ಕುರಿತು ಪರಿಶೀಲನೆ ನಡೆಸುವಂತೆ ಮನವಿ ಮಾಡಿಕೊಂಡಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. 
 
ಉಭಯ ರಾಜ್ಯಗಳ ಸಂಧಾನ ಸಭೆ ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಉಭಯ ರಾಜ್ಯಗಳಿಗೆ ತಜ್ಞರ ಸಮಿತಿ ಕಳುಹಿಸಿ ವರದಿ ನೀಡಲಿ. ತಜ್ಞರ ವರದಿಯ ಆಧಾರದ ಮೇಲೆ ಉಭಯ ರಾಜ್ಯಗಳ ವಾಸ್ತವ ಪರಿಸ್ಥಿತಿ ತಿಳಿಯುತ್ತದೆ. ಆದರೆ, ತಜ್ಞರ ಸಮಿತಿ ರಚಿಸಲು ತಮಿಳುನಾಡು ಒಪ್ಪುತ್ತಿಲ್ಲ. ಹಾಗೂ ಸುಪ್ರೀಂಕೋರ್ಟ್‌ನಲ್ಲೂ ನಾವು ಆಕ್ಷೇಪಣೆ ಸಲ್ಲಿಸುತ್ತೇವೆ ಎಂದು ಪಟ್ಟು ಹಿಡಿದಿದೆ ಎಂದರು.
 
ಕಾವೇರಿ ನದಿ ನೀರನ್ನು ಕೇವಲ ಕುಡಿಯಲು ಮಾತ್ರ ಬಳಸಿಕೊಳ್ಳಬೇಕು ಎಂದು ವಿಧಾನ ಮಂಡಲ ಅಧಿವೇಶನದಲ್ಲಿ ನಿರ್ಣಯ ಕೈಗೊಳ್ಳಲಾಗಿದೆ. ಯಾವುದೇ ಕಾರಣಕ್ಕೂ ತಮಿಳುನಾಡಿಗೆ ನೀರು ಹರಿಸದಂತೆ ಜೆಡಿಎಸ್ ವರಿಷ್ಠ ಎಚ್‌.ಡಿ.ದೇವೇಗೌಡರು ಸಹ ಸೂಚನೆ ನೀಡಿದ್ದಾರೆ. ವಿಧಾನ ಮಂಡಲದ ಸರ್ವಾನುಮತದ ನಿರ್ಣಯಕ್ಕೆ ನಾವು ಬದ್ಧವಾಗಿದ್ದೇವೆ ಎಂದು ಸ್ಪಷ್ಟಪಡಿಸಿದರು.
 
ನಾವು ಕುಡಿಯಲು ನೀರು ಕೇಳುತ್ತಿದ್ದೇವೆ. ಆದರೆ, ತಮಿಳುನಾಡು ಕುರುವೈ ಬೆಳೆ ಬೆಳೆಯಲು ನೀರು ಕೇಳುತ್ತಿದೆ. ಮೆಟ್ಟುರು ಜಲಾಶಯದಲ್ಲಿ 43 ಟಿಎಂಸಿ ನೀರು ಇದೆ. ತಮಿಳುನಾಡಿನಲ್ಲಿ ಅಕ್ಟೋಬರ್‌ನಿಂದ ಡಿಸೆಂಬರ್ ತಿಂಗಳವರೆಗೂ ಮಳೆಯಿಂದ ಹೆಚ್ಚುವರಿ 20 ಟಿಎಂಸಿ ನೀರು ಲಭ್ಯವಾಗುತ್ತೆ. ಅವರು 18.5 ಲಕ್ಷ ಹೆಕ್ಟರ್ ಪ್ರದೇಶದಲ್ಲಿ ಬೆಳೆ ಬೆಳೆಯುತ್ತಿದ್ದಾರೆ. ಆದರೆ, ನಾವು ಕೇವಲ 6.5 ಲಕ್ಷ ಹೆಕ್ಟರ್ ಪ್ರದೇಶದಲ್ಲಿ ಬೆಳೆ ಬೆಳೆಯುತ್ತಿದ್ದೇವೆ. ಈಗಾಗಲೇ ನಮ್ಮ ರೈತರು ಸಾಕಷ್ಟು ತ್ಯಾಗ ಮಾಡಿದ್ದಾರೆ ಎಂದು ವಿಷಾದ ವ್ಯಕ್ತಪಡಿಸಿದರು. 
 
ಸುಪ್ರೀಂ ಆದೇಶದಂತೆ 10 ದಿನಗಳ ಕಾಲ 15 ಟಿಎಂಸಿ ನೀರು ಬಿಡುಗಡೆ ಮಾಡಿದ್ದೇವೆ. ಇಗ ರಾಜ್ಯದ ವಾಸ್ತವ ಪರಿಸ್ಥಿತಿ ಹಾಗೂ ಸದನದ ನಿರ್ಣಯ ಕುರಿತು ಮನವರಿಕೆ ಮಾಡಿಕೊಟ್ಟಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments