Webdunia - Bharat's app for daily news and videos

Install App

ಉಭಯ ರಾಜ್ಯಗಳಿಗೆ ತಜ್ಞರ ತಂಡ ಕಳುಹಿಸಲು ಮನವಿ: ಎಂ.ಬಿ.ಪಾಟೀಲ

Webdunia
ಶುಕ್ರವಾರ, 30 ಸೆಪ್ಟಂಬರ್ 2016 (11:26 IST)
ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಉಭಯ ರಾಜ್ಯಗಳಿಗೆ ತಜ್ಞರ ತಂಡ ಕಳುಹಿಸಿ ನೀರಿನ ಲಭ್ಯತೆ ಕುರಿತು ಪರಿಶೀಲನೆ ನಡೆಸುವಂತೆ ನ್ಯಾಯಾಲಯಕ್ಕೆ ಮನವಿ ಮಾಡಿಕೊಳ್ಳಲಾಗುತ್ತದೆ ಎಂದು ಜಲ ಸಂಪನ್ಮೂಲ ಸಚಿವ ಎಂ.ಬಿ.ಪಾಟೀಲ ಸ್ಪಷ್ಟಪಡಿಸಿದ್ದಾರೆ.
 
ನವದೆಹಲಿಯಲ್ಲಿ ಕರ್ನಾಟಕ ಪರ ವಕೀಲ ಫಾಲಿ ನಾರಿಮನ್ ಭೇಟಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಇಂದು ಸುಪ್ರೀಂಕೋರ್ಟ್‌ನಲ್ಲಿ ವಿಚಾರಣೆ ನಡೆಯಲಿದೆ. ರಾಜ್ಯದ ವಾಸ್ತವ ಸ್ಥಿತಿ ಕುರಿತು ನ್ಯಾಯಾಲಯದಲ್ಲಿ ಹೇಗೆ ವಾದಿಸಬೇಕು ಎನ್ನುವುದು ನಾರಿಮನ್ ವಿವೇಚನೆಗೆ ಬಿಟ್ಟಿದ್ದು ಎಂದು ಹೇಳಿದರು.
 
ಒಂದು ಕಡೆ ವಿಧಾನ ಮಂಡಲದ ವಿಶೇಷ ಅಧಿವೇಶನದಲ್ಲಿ ಕೈಗೊಂಡ ಒಮ್ಮತದ ನಿರ್ಣಯ ಹಾಗೂ ಇನ್ನೊಂದಡೆ ಸುಪ್ರೀಂ ಆದೇಶವಿದೆ. ಆದರೆ, ರಾಜ್ಯದ ಜಲಾಶಯದಲ್ಲಿ ಕುಡಿಯುವ ನೀರಿಗೂ ಅಭಾವವಿದೆ. ಕರ್ನಾಟಕ ರಾಜ್ಯ ಸಂಕಷ್ಟದ ಸ್ಥಿತಿ ಎದುರಿಸುತ್ತಿದೆ. ಈ ಸಮಯದಲ್ಲಿ ನಾವು ನೀರನ್ನು ಉಳಿಸಿಕೊಳ್ಳಬೇಕಾಗಿದೆ.
 
ವಿವಾದಕ್ಕೆ ಸಂಬಂಧಿಸಿದಂತೆ ಉಭಯ ರಾಜ್ಯಗಳಿಗೆ ತಜ್ಞರ ತಂಡ ಕಳುಹಿಸಿ ನೀರಿನ ಲಭ್ಯತೆ ಕುರಿತು ಪರಿಶೀಲನೆ ನಡೆಸುವಂತೆ ನ್ಯಾಯಾಲಯಕ್ಕೆ ಮನವಿ ಮಾಡಿಕೊಳ್ಳಲಾಗುತ್ತದೆ ಎಂದು ಜಲ ಸಂಪನ್ಮೂಲ ಸಚಿವ ಎಂ.ಬಿ.ಪಾಟೀಲ ತಿಳಿಸಿದ್ದಾರೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

2029 ರಲ್ಲಿ ಕೇಂದ್ರದಲ್ಲಿ ನಾವು ಬಂದಾಗ ಬಿಜೆಪಿಯವರನ್ನು ತಿಹಾರ್ ಜೈಲಿಗೆ ಹಾಕ್ತೀವಿ: ಪ್ರದೀಪ್ ಈಶ್ವರ್

ಸಂವಿಧಾನಕ್ಕೆ ಅಪಚಾರ ಮಾಡಿದ ಪಕ್ಷ ಎಂದರೆ ಕಾಂಗ್ರೆಸ್: ಛಲವಾದಿ ನಾರಾಯಣಸ್ವಾಮಿ

5 ವರ್ಷ ನಾನೇ ಸಿಎಂ ಎಂದ ಸಿದ್ದರಾಮಯ್ಯ: ಲೈಫ್ ಟೈಂ ನಾನೇ ಎನ್ನಿ ಎಂದ ಡಿಕೆಶಿ ಫ್ಯಾನ್ಸ್

ರಾಹುಲ್ ಗಾಂಧಿ ಭೇಟಿಗೆ ಮುನ್ನ ನಾನೇ ಸಿಎಂ ಎಂದು ಘರ್ಜಿಸಿದ ಸಿದ್ದರಾಮಯ್ಯ

ಆ್ಯಪ್ ಮೂಲಕ ಆನ್‌-ಡಿಮ್ಯಾಂಡ್ ಇಂಟ್ರಾಸಿಟಿ ಶಿಪ್ಪಿಂಗ್ ಸೇವೆ ಆರಂಭಿಸಿದ ಡೆಲಿವರಿ

ಮುಂದಿನ ಸುದ್ದಿ
Show comments