ಸಾಕ್ಷಿ ಕೇಳುವವರನ್ನು ಪಾಕ್‌ಗೆ ಕಳುಹಿಸಿ: ಕಾಂಗ್ರೆಸ್ ನಾಯಕರ ವಿರುದ್ಧ ಶೋಭಾ ಕರಂದ್ಲಾಜೆ ಆಕ್ರೋಶ

Sampriya
ಶನಿವಾರ, 17 ಮೇ 2025 (15:53 IST)
Photo Credit X
ಬೆಂಗಳೂರು: ಪಾಕಿಸ್ತಾನದ ವಿರುದ್ಧದ ಆಪರೇಷನ್ ಸಿಂಧೂರದ ಬಗ್ಗೆ ಪ್ರಶ್ನೆ ಮಾಡುವ ಕಾಂಗ್ರೆಸ್ ನಾಯಕರಿಗೆ ಸಿದ್ದರಾಮಯ್ಯ ಅವರು ಪಾಕಿಸ್ತಾನ ಪ್ರವಾಸ ಭಾಗ್ಯ ಕರುಣಿಸಲಿ. ಇದರಿಂದ ಕೈ ನಾಯಕರು ಪಾಕ್‌ಗೆ ತೆರಳಿ ಸಾಕ್ಷಿ ಸಂಗ್ರಹ ಮ ಮಾಡಿಕೊಂಡು ಬರಲಿ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಆಕ್ರೋಶ ಹೊರಹಾಕಿದರು.

ಕಾಂಗ್ರೆಸ್ ಶಾಸಕ ಕೊತ್ತನೂರು ಮಂಜುನಾಥ್, ಸಚಿವರಾದ ಪ್ರಿಯಾಂಕ್ ಖರ್ಗೆ, ಸಂತೋಷ್ ಲಾಡ್ ಹೇಳಿಕೆಗಳಿಗೆ ಬಿಜೆಪಿ ಕಚೇರಿಯಲ್ಲಿ ಪ್ರತಿಕ್ರಿಯೆ ನೀಡಿದ ಅವರು, ಪಾಕಿಸ್ತಾನ ವಿರುದ್ಧ ನಮ್ಮ ಸೈನಿಕರು ಹೋರಾಟ ಮಾಡಿದ್ದಾರೆ. ಇದರ ಬಗ್ಗೆ ಕಾಂಗ್ರೆಸ್ ನಿಲುವು ಏನು ಎಂದು ಕಾಂಗ್ರೆಸ್ ಹೈಕಮಾಂಡ್ ಸ್ಪಷ್ಟಪಡಿಸಬೇಕು. ಮಲ್ಲಿಕಾರ್ಜುನ ಖರ್ಗೆ ನಾವು ಬೆಂಬಲ ಕೊಡುತ್ತೇವೆ ಅಂದರು. ಸರ್ಕಾರದ ಎಲ್ಲಾ ನಿರ್ಧಾರಕ್ಕೆ ಸಹಕಾರ ಕೊಡುತ್ತೇವೆ ಅಂದರು. ಈಗ ಬೇರೆ ಬೇರೆ ರಾಜ್ಯದಲ್ಲಿ, ನಮ್ಮ ರಾಜ್ಯದಲ್ಲಿ ಕಾಂಗ್ರೆಸ್ ನಾಯಕರು ಬೇರೆ ಬೇರೆ ಹೇಳಿಕೆಗಳನ್ನ ಕೊಡುತ್ತಿದ್ದಾರೆ. ಈ ಹೇಳಿಕೆಗಳು ಹೈಕಮಾಂಡ್ ಸೂಚನೆ ಮೇರೆಗೆ ಬರುತ್ತಿದೆಯಾ ಎಂದು ಪ್ರಶ್ನೆ ಮಾಡಿದರು.

ಪಾಕಿಸ್ತಾನದಲ್ಲಿ ಅಡಗಿ ಕುಳಿತಿದ್ದ ಭಯೋತ್ಪಾದಕರ ತರಬೇತಿ ಕೇಂದ್ರಗಳನ್ನು ಭಾರತ ಸೇನೆ ಹೊಡೆದುರುಳಿಸಿದೆ.  ಅವರ ಕುಟುಂಬಕ್ಕೆ ಪಾಕ್‌ ಸರ್ಕಾರ ಹಣ ನೀಡಿದೆ. ಆದರೆ ಕಾಂಗ್ರೆಸ್ ಮಾತ್ರ ಸಾಕ್ಷಿ ಕೇಳುವ ಮೂಲಕ ನಮ್ಮ ಸೈನಿಕರನ್ನ ಅವಮಾನಿಸುತ್ತಿದೆ ಎಂದರು.  

ಹಿಂದೆ ಸರ್ಜಿಕಲ್ ಸ್ಟ್ರೈಕ್‌ಗೂ ಸಾಕ್ಷಿ ಕೇಳಿದ್ದರು. ಈಗ ಆಪರೇಷನ್ ಸಿಂಧೂರಕ್ಕೂ ಸಾಕ್ಷಿ ಕೇಳುತ್ತಿದ್ದಾರೆ. ಸಿದ್ದರಾಮಯ್ಯ ಅವರು ಕಾಂಗ್ರೆಸ್ ನಾಯಕರ ಬಾಯಿ ಮುಚ್ಚಿಸಬೇಕು. ಇಲ್ಲದೇ ಹೋದರೆ ಅವರ ನಾಯಕರಿಗೆ ಪಾಕಿಸ್ತಾನ ಪ್ರವಾಸ ಭಾಗ್ಯ ಕೊಡಿ. ಸಾಕ್ಷಿ ಕೇಳೋರನ್ನ ಪಾಕಿಸ್ತಾನಕ್ಕೆ ಕಳಿಸಿ. ಅನುಭವ ಪಡೆದು ಬರಲಿ ಎಂದು ಹರಿಹಾಯ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಶಬರಿಮಲೆ ಸುತ್ತಲಿನ ವಿವಾದ ಭಕ್ತರಿಗೆ ಯಾವುದೇ ಪರಿಣಾಮ ಬೀರಿಲ್ಲ: ಟಿಡಿಬಿ

ಪಾಕ್‌ನ ಮೂಲೆ ಮೂಲೆಗೂ ನುಗ್ಗುವ ಸಾಮರ್ಥ್ಯ ಭಾರತದ ಬ್ರಹ್ಮೋಸ್ ಕ್ಷಿಪಣಿಗಿದೆ: ರಾಜನಾಥ ಸಿಂಗ್

ಆರ್ ಎಸ್ಎಸ್ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಕ್ಕೆ ಸಸ್ಪೆಂಡ್: ಅಧಿಕಾರಿ ಬಗ್ಗೆ ತೇಜಸ್ವಿ ಸೂರ್ಯ ಬಿಗ್ ನಿರ್ಧಾರ

ನೊಬೆಲ್ ಪ್ರಶಸ್ತಿ ವಿಜೇತ ಚೀನಾದ ಶತಾಯುಷಿ ಚೆನ್ ನಿಂಗ್ ಯಾಂಗ್ ಇನ್ನಿಲ್ಲ

ಮತಕ್ಕಾಗಿ ಮುಸ್ಲಿಮರನ್ನು ನಿಂದಿಸುವ ಬಿಜೆಪಿ ನಾಯಕರಿಗೆ ಮುಸ್ಲಿಂ ಅಳಿಯನಿದ್ದಾನೆ: ಭೂಪೇಶ್‌ ಬಾಘೇಲ್‌

ಮುಂದಿನ ಸುದ್ದಿ
Show comments