Webdunia - Bharat's app for daily news and videos

Install App

ಇವರೇನು ಕಾಂಗ್ರೆಸ್ ಪಕ್ಷ ಕಟ್ಟುತ್ತಿದ್ದಾರಾ, ಕೆಡುವುತ್ತಿದ್ದಾರಾ?: ಎಚ್.ವಿಶ್ವನಾಥ್ ಪ್ರಶ್ನೆ

Webdunia
ಶನಿವಾರ, 25 ಮಾರ್ಚ್ 2017 (13:51 IST)
ಉಪಚುನಾವಣೆ ಸಂದರ್ಭದಲ್ಲಿ ಮೈಸೂರು ನಗರ ಕಾಂಗ್ರೆಸ್ ಅಧ್ಯಕ್ಷರನ್ನು ಬದಲಿಸಿದ್ದು ಯಾಕೆ? ಬದಲಾವಣೆ ಸರಿ ಕಾಣುತ್ತಿಲ್ಲ. ಇವರೇನು ಕಾಂಗ್ರೆಸ್ ಕಟ್ಟುತ್ತಿದ್ದಾರಾ ಕೆಡುವುತ್ತಿದ್ದಾರಾ? ಎಂದು ಮಾಜಿ ಸಂಸದ ಎಚ್.ವಿಶ್ವನಾಥ್ ಕೆಪಿಸಿಸಿಗೆ ನೇರ ಪ್ರಶ್ನೆ ಹಾಕಿದ್ದಾರೆ.
 
ಅವರು ನನ್ನ ಪರವಾಗಿದ್ದಾರೆ ಎಂದು ಪಕ್ಷದಿಂದ ತೆಗೆದಿರಬಹುದು. ಆಸ್ತಿ ಕಬಳಿಕೆಗೆ ವಿರೋಧವಾಗಿದ್ದಾರೆ ಎಂದು ಅವರನ್ನು ಬದಲಿಸಿರಬಹುದು ಎಂದು ವಾಗ್ದಾಳಿ ನಡೆಸಿದ್ದಾರೆ.
 
ನೀವು ಸರಕಾರವನ್ನು ಹೇಗೆ ಬೇಕಾದರೂ ಹಾಳು ಮಾಡಿ ಆದರೆ, 130 ವರ್ಷದ ಕಾಂಗ್ರೆಸ್ ಪಕ್ಷದ ಭವಿಷ್ಯವನ್ನು ಹಾಳು ಮಾಡಬೇಡಿ ಎಂದು ಸಿಎಂ ಸಿದ್ದರಾಮಯ್ಯರಲ್ಲಿ ಮನವಿ ಮಾಡುತ್ತೇನೆ ಎಂದು ತಿಳಿಸಿದ್ದಾರೆ.
 
ಮೈಸೂರು-ಚಾಮರಾಜನಗರದಲ್ಲಿ ಕಾಂಗ್ರೆಸ್ ಸಂಬಂಧ ಏನೇ ಆದರೂ ಸಿಎಂ ಗಮನಕ್ಕೆ ಬರುತ್ತದೆ. ಮೈಸೂರು ಸಿಎಂ ತವರು ಕ್ಷೇತ್ರವಾಗಿದ್ದರಿಂದ ಹೈಕಮಾಂಡ್ ತಲೆಹಾಕಲ್ಲ.
 
ದೆಹಲಿಯಲ್ಲಿ ಕರ್ನಾಟಕದ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರಿದ್ದಾರೆ. ದುರ್ದೈವ ಅವರು ಸಿಎಂ ಸಿದ್ದರಾಮಯ್ಯಗೆ ಹೆದರುವಂತೆ ಕಾಣುತ್ತದೆ.  ಕರ್ನಾಟಕದಲ್ಲಿ ಅನೇ ಆದರೂ ಯಾರೂ ಮಾತನಾಡುವುದಿಲ್ಲ. ಕಾಂಗ್ರೆಸ್ ನಾಯಕರೇ ನೀವು ಹೋದರೂ ಪಕ್ಷ ಉಳಿಯುತ್ತದೆ ಎಂದು ಎಚ್.ವಿಶ್ವನಾಥ್ ತಿರುಗೇಟು ನೀಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಭಾರತದ 52ನೇ ಸಿಜೆಐ ಆಗಿ ನೇಮಕಗೊಂಡ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಹಿನ್ನಲೆ ಇಲ್ಲಿದೆ

Prajwal Revanna: ವಕೀಲರನ್ನೂ ನೇಮಿಸಿಕೊಂಡಿಲ್ಲ: ಪ್ರಜ್ವಲ್ ರೇವಣ್ಣ ಪರಿಸ್ಥಿತಿ ಏನಾಗಿದೆ ನೋಡಿ

PM Modi: ಉಗ್ರರ ದಮನಕ್ಕೆ ಸೇನೆಗೆ ಸಂಪೂರ್ಣ ಪವರ್ ಕೊಟ್ಟ ಪ್ರಧಾನಿ ಮೋದಿ

K Annamalai: ಮೋದಿ, ಅಮಿತ್ ಶಾ ಹೆಸರಲ್ಲಿ ಅಮೆರಿಕದಲ್ಲಿ ಅಣ್ಣಾಮಲೈ ವಿಶೇಷ ಪೂಜೆ

ಉಗ್ರರ ಹಿಮ್ಮೆಟ್ಟಿಸಲು ಐಕ್ಯತೆ ಅವಶ್ಯಕ: ಮಾಜಿ ಪ್ರಧಾನಿ ದೇವೇಗೌಡ

ಮುಂದಿನ ಸುದ್ದಿ
Show comments