Select Your Language

Notifications

webdunia
webdunia
webdunia
webdunia

ಲೋಕಸಭೆ ಹಿನ್ನಡೆಗೆ ಹಿರಿಯ ನಾಯಕ ಕೆಂಡ; ಕಾಂಗ್ರೆಸ್ ನಲ್ಲಿ ಹೆಚ್ಚಿದ ತಳಮಳ

ಲೋಕಸಭೆ ಹಿನ್ನಡೆಗೆ ಹಿರಿಯ ನಾಯಕ ಕೆಂಡ; ಕಾಂಗ್ರೆಸ್ ನಲ್ಲಿ ಹೆಚ್ಚಿದ ತಳಮಳ
ಬೆಂಗಳೂರು , ಮಂಗಳವಾರ, 4 ಜೂನ್ 2019 (19:18 IST)
ಲೋಕಸಭೆ ಚುನಾವಣೆಯಲ್ಲಿ ತೀವ್ರ ಹಿನ್ನಡೆಯಾದ ನಂತರ ಕಾಂಗ್ರೆಸ್ ವಿರುದ್ಧ ಪಕ್ಷದ ಹಿರಿಯ ನಾಯಕರು ಅಸಮಾಧಾನ ಹೊರಹಾಕುವುದು ಹೆಚ್ಚಾಗಿದೆ.

ಇದೀಗ ಇವರ ಸಾಲಿಗೆ ಮಾಜಿ ಸಚಿವ ರಾಮಲಿಂಗರೆಡ್ಡಿ ಕೂಡ ಸೇರ್ಪಡೆಯಾಗಿದ್ದಾರೆ. ಕಾಂಗ್ರೆಸ್ ಮತ್ತೊಬ್ಬ ಹಿರಿಯ ನಾಯಕನಿಂದ ಪಕ್ಷ ಹಾಗೂ ಸರ್ಕಾರದ ವಿರುದ್ಧ ಸರಣಿ ಟ್ವೀಟ್ ಮೂಲಕ ಅಸಮಾಧಾನ ವ್ಯಕ್ತವಾಗಿದ್ದು, ದೂರದೃಷ್ಟಿ ಕೊರತೆ ಹಾಗೂ ಪಕ್ಷದಲ್ಲಿ ಹಿರಿಯರನ್ನು ಕಡೆಗಣಿಸಿದ್ದು, ತೀವ್ರ ಹಿನ್ನಡೆಗೆ ಕಾರಣ ಎಂದು ಬಣ್ಣಿಸಿದ್ದಾರೆ. ಜತೆಗೆ ಸಚಿವರ ವೈಫಲ್ಯ ಕೂಡ ಹಿನ್ನಡೆಗೆ ಕಾರಣ ಎನ್ನುವ ಮೂಲಕ ತಮಗಾದ ಅನ್ಯಾಯಕ್ಕೆ ಪ್ರತಿಕಾರ ತೀರಿಸಿಕೊಂಡಿದ್ದಾರೆ.

ರಾಮಲಿಂಗರೆಡ್ಡಿ ಟ್ವೀಟ್ಬಾಣ: ರಾಮಲಿಂಗರೆಡ್ಡಿ ತಮ್ಮ ಟ್ವೀಟ್ ಮೂಲಕ ವ್ಯಕ್ತಪಡಿಸಿದ್ದು ಅವರು, “ರಾಜ್ಯ ಸರ್ಕಾರದಲ್ಲಿ ಕಾಂಗ್ರೆಸ್ ಪಕ್ಷದ ಹಿರಿಯರ ಕಡೆಗಣನೆ ಹಾಗೂ ಕೆಲವು ಕಾಂಗ್ರೆಸ್ ಸಚಿವರ ಸಂಘಟನಾ ದೂರದೃಷ್ಟಿತ್ವ ಕೊರತೆಯಿಂದಾಗಿ ಪಕ್ಷವು ಲೋಕಸಭಾ ಚುನಾವಣೆಯಲ್ಲಿ ಹೀನಾಯ ಸೋಲು ಅನುಭವಿಸಬೇಕಾಯಿತು. ಹಿರಿಯರು ನೀಡಿದ ಸಲಹೆಗಳನ್ನು ಪರಿಗಣಿಸದೇ ಇರುವುದು, ಕೆಲವು ಸಚಿವರ ಕಾರ್ಯಕ್ಷಮತೆಯೂ ಸಹ ಪಕ್ಷಕ್ಕೆ ಹಿನ್ನಡೆಯಾಗಲು ಪ್ರಮುಖ ಕಾರಣವಾಯಿತು’ ಎಂದಿದ್ದಾರೆ.



Share this Story:

Follow Webdunia kannada

ಮುಂದಿನ ಸುದ್ದಿ

ತ್ರಿಭಾಷಾ ನೀತಿಗೆ ಕುಂ.ವೀ ವಿರೋಧ