Webdunia - Bharat's app for daily news and videos

Install App

ಹಿಂದುಳಿದ ವರ್ಗಗಳಿಗೆ ಪ್ರತ್ಯೇಕ ಆಯೋಗ ರಚನೆ: ಸಿಎಂ

Webdunia
ಮಂಗಳವಾರ, 10 ಮೇ 2022 (07:47 IST)
ಬೆಂಗಳೂರು : ಹಿಂದುಳಿದ ವರ್ಗಗಳಿಗೆ ಸೂಕ್ತ ರಾಜಕೀಯ ಪ್ರಾತಿನಿಧ್ಯ ನೀಡಲು ನ್ಯಾಯಮೂರ್ತಿ ಭಕ್ತವತ್ಸಲ ಅವರ ಅಧ್ಯಕ್ಷತೆಯಲ್ಲಿ ಪ್ರತ್ಯೇಕ ಆಯೋಗ ರಚಿಸಲಾಗಿದೆ.

ಈ ಮೂಲಕ ಹಿಂದುಳಿದ ವರ್ಗಗಳಿಗೆ ಶಕ್ತಿ ತುಂಬಿ ನ್ಯಾಯ ಒದಗಿಸುವ ಕೆಲಸ ಮಾಡಲಾಗುತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಶ್ರೀ ಗಾಯತ್ರಿಪೀಠ ಮಹಾಸಂಸ್ಥಾನದಲ್ಲಿ ಆಯೋಜಿಸಿದ್ದ ಶ್ರೀ ದಯಾನಂದಪುರಿ ಸ್ವಾಮೀಜಿ ಅವರ 33ನೇ ಪೀಠಾರೋಹಣ ವಾರ್ಷಿಕೋತ್ಸವ ಹಾಗೂ ಜನಜಾಗೃತಿ ಸಮಾವೇಶವನ್ನುದ್ದೇಶಿ ಮಾತನಾಡಿದ ಅವರು, ಹಿಂದುಳಿದ ವರ್ಗಗಳಿಗೆ ರಾಜಕೀಯ ಪ್ರಾತಿನಿಧ್ಯ ನೀಡಲು ಪ್ರತ್ಯೇಕ ಆಯೋಗ ರಚಿಸಲಾಗಿದೆ.

ಶಿಕ್ಷಣ, ಉದ್ಯೋಗ ಮತ್ತು ಸಬಲೀಕರಣ ಅಂಶಗಳ ಆಧಾರದ ಮೇಲೆ ಸಮುದಾಯದ ಅಭಿವೃದ್ಧಿ ಕೈಗೊಳ್ಳಲಾಗುತ್ತದೆ ಎಂದು ಭರವಸೆ ನೀಡಿದರು. 

ಸಮಾಜದ ಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ಅಭಿವೃದ್ಧಿಯಾದಾಗ ಮಾತ್ರ ಆ ಸಮುದಾಯ ವಿಕಾಸಗೊಳ್ಳುತ್ತದೆ. ಅದಕ್ಕಾಗಿಯೇ ನೇಕಾರ ಸಮ್ಮಾನ ಯೋಜನೆಯಡಿ ನೀಡಲಾಗುವ ಆರ್ಥಿಕ ನೆರವನ್ನು 5,000 ರೂ.ಗಳಿಗೆ ಹೆಚ್ಚಿಸಲಾಗಿದೆ.

ಸಹಕಾರ ಬ್ಯಾಂಕ್ ಹಾಗೂ ಶೆಡ್ಯೂಲ್ ಬ್ಯಾಂಕಿನಲ್ಲಿ ಪಡೆಯುವ ಸಾಲದ ಬಡ್ಡಿದರವನ್ನು ಶೇ.8 ರಿಂದ ಶೇ.2-3ಕ್ಕೆ ಇಳಿಸಿ ಸಾಲ ನೀಡುವ ಯೋಜನೆಯನ್ನು ಜಾರಿಗೆ ತರಲಾಗಿದೆ ಎಂದು ಹೇಳಿದರು.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಚೇಷ್ಟೆ ಮಾಡಲು ಬಂದ ಕೋತಿ.. ಮೊಬೈಲ್ ನೋಡಿ ಫುಲ್ ಕಳೆದುಹೋಯ್ತು… ಫನ್ನಿ Video

ಪ್ರಜ್ವಲ್ ರೇವಣ್ಣಗೆ ಜೈಲಲ್ಲಿ ಮೊಬೈಲ್, ಒಬ್ಬ ಸಹಾಯಕ.. ಏನಿದು ವೈಭೋಗ Video

ಅಮ್ಮ ಚಾಕಲೇಟ್ ಕದೀತಾಳೆ… ಅಮ್ಮನ ಮೇಲೆ ಕಂಪ್ಲೇಂಟ್ ಮಾಡಲು ಪೊಲೀಸ್ ಠಾಣೆ ಮೆಟ್ಟಿಲೇರಿದ 3 ರ ಪೋರ Video

ಕಾಡಿನ ರಸ್ತೆಯಲ್ಲಿ ಸ್ಕೂಟಿ ನಿಲ್ಲಿಸಿದ್ದ ಮಹಿಳೆ ಎರಡೆರಡು ಚಿರತೆ ಒಟ್ಟಿಗೆ ದಾಳಿ ಮಾಡಿದಾಗ ಅವುಗಳಿಗೇ ಶಾಕ್ ಕೊಟ್ಟಿದ್ದೇಗೆ Video

ಕರ್ನಾಟಕ ಬಂದ್ ಗೆ ನೀರಸ ಪ್ರತಿಕ್ರಿಯೆ: ತಮಿಳುನಾಡಿಗೆ ಬಸ್ ಸ್ಥಗಿತ

ಮುಂದಿನ ಸುದ್ದಿ
Show comments