Publish Date: Fri, 19 Oct 2018 (14:17 IST)
Updated Date: Fri, 19 Oct 2018 (14:20 IST)
ಬೆಂಗಳೂರು : ಜಲಸಂಪನ್ಮೂಲ ಸಚಿವ ಡಿ.ಕೆ. ಶಿವಕುಮಾರ್ ಪ್ರತ್ಯೇಕ ಲಿಂಗಾಯತ ಧರ್ಮಕ್ಕೆ ಕೈ ಹಾಕಿ ತಪ್ಪು ಮಾಡಿದೆವು ಎಂಬ ಹೇಳಿಕೆಗೆ ಪ್ರತಿಕ್ರಿಯಿಸಿದ ಚಿಕ್ಕಬಳ್ಳಾಪುರ ಕಾಂಗ್ರೆಸ್ ಶಾಸಕ ಸುಧಾಕರ್ ಅವರು ಸಿದ್ದರಾಮಯ್ಯ ಪರ ಬ್ಯಾಟ್ ಬೀಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅವರು, ‘ಸಮಾಜದಲ್ಲಿ ಜಾತಿ ರಹಿತ ವ್ಯವಸ್ಥೆಯನ್ನು ಸ್ಥಾಪಿಸಲು ಮುಂದಾದವರು ಬಸವಣ್ಣ, ಅದರಲ್ಲೂ ಹಿಂದೂ ಧಾರ್ಮಿಕ ಪದ್ಧತಿಗಳ ವಿರುದ್ಧ ಕೆಲ ತತ್ವ ಸಿದ್ಧಾಂತಗಳನ್ನು ಪ್ರಚಾರ ಮಾಡಿದವರು. ಸಿದ್ದರಾಮಯ್ಯ ಒಳ್ಳೆಯದನ್ನು ಮಾಡಿದ್ದಾರೆ’ ಎಂದು ತಿಳಿಸಿದ್ದಾರೆ.
ಕೇವಲ ಚುನಾವಣೆ ಸೋಲು ಯಾವ ಲೆಕ್ಕ? ತತ್ವ ಸಿದ್ದಾಂತಗಳನ್ನು ಪ್ರತಿಪಾದಿಸಿದ್ದ ಬಸವಣ್ಣನವರೇ ಹಿನ್ನಡೆ ಕಂಡಿದ್ದಾರೆ. ಕಾಯಕವೇ ಕೈಲಾಸ ಎಂದು ಡಾ.ಕೆ. ಸುಧಾಕರ್ ಸಿದ್ದರಾಮಯ್ಯ ಪರ ಟ್ವೀಟ್ ಮಾಡಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ
ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ.