Publish Date: Sat, 20 Oct 2018 (16:46 IST)
Updated Date: Sat, 20 Oct 2018 (16:48 IST)
ಲಿಂಗಾಯತ ಪ್ರತ್ಯೇಕ ಧರ್ಮಕ್ಕೆ ಸಂಬಂಧಿಸಿದಂತೆ ಈ ಹಿಂದಿನ ಕಾಂಗ್ರೆಸ್ ಸರಕಾರದ ಸಚಿವ ಸಂಪುಟದಲ್ಲಿ ತೆಗೆದುಕೊಂಡ ತೀರ್ಮಾನ ಸರ್ವಾನುಮತದ ಹಾಗೂ ಸಾಮೂಹಿಕ ತೀರ್ಮಾನವಾಗಿತ್ತು ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಲಿಂಗಾಯತ ಪ್ರತ್ಯೇಕ ಧರ್ಮಕ್ಕೆ ಸಂಬಂಧಿಸಿದಂತೆ ಸಚಿವ ಡಿ.ಕೆ.ಶಿವಕುಮಾರ್ ಕ್ಷಮೆಯಾಚನೆ ಮಾಡಿರುವ ಕುರಿತು ಪ್ರತಿಕ್ರಿಯೆ ನೀಡಿರುವ ಅವರು, ಸಚಿವ ಸಂಪುಟದಲ್ಲಿ ಎಲ್ಲರೂ ಒಟ್ಟಾಗಿ ತೆಗೆದುಕೊಂಡ ತೀರ್ಮಾನ ಇದು.
ಸಚಿವ ಡಿ.ಕೆ.ಶಿವಕುಮಾರ್ ಯಾವ ಹಿನ್ನೆಲೆಯಲ್ಲಿ ಅಥವಾ ಅರ್ಥದಲ್ಲಿ ಹೇಳಿಕೆ ನೀಡಿದ್ದಾರೋ ಗೊತ್ತಿಲ್ಲ ಎಂದರು.
ಪ್ರತ್ಯೇಕ ಧರ್ಮದ ಕುರಿತು ಸಚಿವ ಸಂಪುಟದಲ್ಲಿ ಚರ್ಚಿಸಿ, ತೀರ್ಮಾನ ಮಾಡಲಾಗಿತ್ತು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆ ನೀಡಿದ್ದಾರೆ.