Webdunia - Bharat's app for daily news and videos

Install App

ಪ್ರತ್ಯೇಕ ಲಿಂಗಾಯುತ ಧರ್ಮ: ಸಿಎಂ ಸಿದ್ದರಾಮಯ್ಯಗೆ ಮಾತೆ ಮಹಾದೇವಿ ಡೆಡ್‌ಲೈನ್

Webdunia
ಭಾನುವಾರ, 19 ನವೆಂಬರ್ 2017 (17:06 IST)
ರಾಜ್ಯ ಸರಕಾರ ಡಿಸೆಂಬರ್ 15 ರೊಳಗಾಗಿ ಪ್ರತ್ಯೇಕ ಲಿಂಗಾಯುತ ಧರ್ಮ ಕುರಿತಂತೆ ಸಿಎಂ ಸಿದ್ದರಾಮ್ಯ ಕೇಂದ್ರ ಸರಕಾರಕ್ಕೆ ಶಿಫಾರಸು ಮಾಡಬೇಕು ಎಂದು ಮಾತೆ ಮಹಾದೇವಿ ಸರಕಾರಕ್ಕೆ ಡೆಡ್‌ಲೈನ್ ನೀಡಿದ್ದಾರೆ. 
 
ಭಾನುವಾರ ಬೆಂಗಳೂರಿನ ರಾಷ್ಟ್ರೀಯ ಕಾಲೇಜಿನಲ್ಲಿ ಬೃಹತ್ ರ್ಯಾಲಿಯೊಂದನ್ನು ಉದ್ದೇಶಿಸಿ ಮಾತನಾಡಿದ ಮಾತೆ ಮಹಾದೇವಿ, ಲಿಂಗಾಯತರು ಮತ್ತು ವೀರಶೈವರು ಒಂದಾಗಿ ಬರಲು ಸಿದ್ಧರಾಮಯ್ಯ ಕಾಯುತ್ತಿದ್ದಾರೆ. ಆದರೆ ಅದು ಎಂದಿಗೂ ಸಂಭವಿಸುವುದಿಲ್ಲ. "ವೀರಶೈವರು ಮತ್ತು ಲಿಂಗಾಯತರು ಭಿನ್ನವಾಗಿರುವುದರಿಂದ ನಾವು ಎಂದಿಗೂ ಒಪ್ಪಿಕೊಳ್ಳಲಾಗದು, ಕನಿಷ್ಠ ಪಕ್ಷ ಮುಖ್ಯಮಂತ್ರಿ ಸಿಎಂ ಸಿದ್ದರಾಮಯ್ಯ ಬಹುತೇಕ ಲಿಂಗಾಯತರ ಅಭಿಪ್ರಾಯವನ್ನು ಪರಿಗಣಿಸಬೇಕು ಎಂದು ಮನವಿ ಮಾಡಿದ್ದಾರೆ. 
 
ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತ್ಯೇಕ ಧರ್ಮ ಲಿಂಗಾಯುತರ ಮನವಿಯನ್ನು ಡಿಸೆಂಬರ್ 15ರೊಳಗಾಗಿ ಕೇಂದ್ರ ಸರಕಾರಕ್ಕೆ ರವಾನಿಸಬೇಕು ಎಂದರು.
 
ಚುನಾವಣಾ ದಿನಾಂಕಗಳನ್ನು ಘೋಷಿಸುವ ಮೊದಲು ರಾಜ್ಯದಲ್ಲಿ ನೀತಿ ಸಂಹಿತೆ ಜಾರಿಗೆ ಬರುವ ಮುನ್ನ ಮುಖ್ಯಮಂತ್ರಿಗಳು ನಮ್ಮ ಬೇಡಿಕೆಗಳನ್ನು ಕೇಂದ್ರಕ್ಕೆ ಕಳುಹಿಸಬೇಕು. ವೀರಶೈವರು ಶೈವೈಟ್ ವಂಶದವರು, ಆದರೆ ಲಿಂಗಾಯತ ವಚನಗಳಿಂದ ಹುಟ್ಟಿದ್ದು, ದೇವಸ್ಥಾನಗಳಲ್ಲಿ ಶಿವಲಿಂಗಕ್ಕೆ ನಾವು ಪೂಜಿಸುವುದಿಲ್ಲ. ನಮ್ಮ ಧರ್ಮ ವಿಶ್ವವೇ ಗುರುತಿಸುವಂತಾಗಬೇಕು ಎಂದು ಅಭಿಪ್ರಾಯಪಟ್ಟರು. 
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments