Webdunia - Bharat's app for daily news and videos

Install App

ಧಾರವಾಹಿ ನೋಡಿ ಈ ಕೆಲಸ ಮಾಡಿದಳಾ ಬಾಲಕಿ?!

Webdunia
ಗುರುವಾರ, 30 ನವೆಂಬರ್ 2017 (10:13 IST)
ಬೆಂಗಳೂರು: ಧಾರವಾಹಿಗಳು ಜನರ ಮನಸ್ಸಿಗೆ ಎಷ್ಟು ಬೇಗ ತಲುಪುತ್ತದೆ ಮತ್ತು ಎಷ್ಟು ಪರಿಣಾಮಕಾರಿಯಾಗುತ್ತದೆ ಎನ್ನುವುದಕ್ಕೆ ಈ ಘಟನೆ ಒಂದು ಉದಾಹರಣೆ.

ಅದೇ ರೀತಿ ಉದಯ ಟಿವಿಯಲ್ಲಿ ಪ್ರಸಾರವಾಗುತ್ತಿರುವ ನಂದಿನಿ ಧಾರವಾಹಿ ನೋಡುತ್ತಿದ್ದ ಪರಿವಾರದ ಮಗುವೊಂದು ಧಾರವಾಹಿಯ ಪ್ರಭಾವದಿಂದ ಮೈಗೆ ಬೆಂಕಿ ಹಚ್ಚಿಕೊಂಡು ಸಾವಿಗೀಡಾದ ಶಂಕೆ ವ್ಯಕ್ತವಾಗಿದೆ.

ಧಾರವಾಹಿಯಲ್ಲಿ ಬರುವ ದೃಶ್ಯವನ್ನು ನೋಡಿ ಪ್ರೇರಣೆಗೊಂಡ 7 ವರ್ಷದ ಬಾಲಕಿ ಈ ಘೋರ ಕೃತ್ಯಕ್ಕೆ ಮುಂದಾಗಿರಬೇಕೆಂದು ಶಂಕಿಸಲಾಗಿದೆ. ನ.12 ರಂದೇ ಬಾಲಕಿ ಬೆಂಕಿ ಅನಾಹುತದಿಂದ ಸಾವಿಗೀಡಾಗಿದ್ದಳು. ಆದರೆ ಆಗ ಆಕಸ್ಮಿಕವಾಗಿ ಬೆಂಕಿ ತಗಲಿ ಬಾಲಕಿ ಸಾವನ್ನಪ್ಪಿರುವುದಾಗಿ ದೂರು ದಾಖಲಿಸಿದ್ದ ಪೋಷಕರು  ಇದೀಗ ತಮ್ಮ ಮಗಳ ಸಾವಿಗೆ ಧಾರವಾಹಿ ದೃಶ್ಯವೇ ಕಾರಣ ಎನ್ನುತ್ತಿದ್ದಾರೆ.

ಇಷ್ಟು ತಡವಾಗಿ ಇಂತಹದ್ದೊಂದು ಆರೋಪ ಮಾಡಲು ಕಾರಣವೇನೆಂದು ತಿಳಿದುಬಂದಿಲ್ಲ. ನೆರೆಹೊರೆಯವರ ಪ್ರಕಾರ ಮಗುವಿನ ಕುಟುಂಬದವರು ನಂದಿನಿ ಧಾರವಾಹಿ ನೋಡುತ್ತಿದ್ದರಂತೆ. ಆದರೆ ಅದುವೇ ಬಾಲಕಿಯ ಕೃತ್ಯಕ್ಕೆ ಪ್ರೇರಣೆಯಾಯಿತಾ ಎಂಬುದು ಇನ್ನೂ ಗೊಂದಲದಲ್ಲಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜಾ ರಘುವಂಶಿ ಪ್ರಕರಣ: ಸೋನಮ್ ಜತೆ ಸಂಪರ್ಕದಲ್ಲಿದ್ದ ಮತ್ತಿಬ್ಬರು ಅರೆಸ್ಟ್‌, ಇವರ ಪಾತ್ರವೇನು ಗೊತ್ತಾ

ದೊಡ್ಡ ದುರಂತ ಬೆನ್ನಲ್ಲೇ ಏರ್‌ ಇಂಡಿಯಾಗೆ ಬಾಂಬ್ ಬೆದರಿಕೆ: ನವದೆಹಲಿಗೆ ಹೊರಟಿದ್ದ ವಿಮಾನ ರಿಯಾದ್‌ನಲ್ಲಿ ತುರ್ತು ಭೂಸ್ಪರ್ಶ

ಬೃಹತ್‌ ರ‍್ಯಾಲಿ ವೇಳೆ ವೈಎಸ್‌ಆರ್‌ ಕಾಂಗ್ರೆಸ್‌ ಕಾರ್ಯಕರ್ತನ ಮೇಲೆ ಹರಿದ ಜಗನ್‌ಮೋಹನ್‌ ರೆಡ್ಡಿ ಕಾರು

ಇರಾನ್‌– ಇಸ್ರೇಲ್‌ ಸಂಘರ್ಷ ಶಮನಕ್ಕೆ ಮೋದಿ ರಂಗಪ್ರವೇಶ: ಭಾರತದ ಪ್ರಧಾನಿಗೆ ಧನ್ಯವಾದ ಹೇಳಿದ ಇರಾನ್

ಬಿ.ಆರ್ ಪಾಟೀಲ್ ಸತ್ಯವನ್ನೇ ಹೇಳಿದ್ದಾರೆ : ವಿಜಯೇಂದ್ರ

ಮುಂದಿನ ಸುದ್ದಿ
Show comments