Webdunia - Bharat's app for daily news and videos

Install App

ಕಬ್ಬನ್ ಪಾರ್ಕ್ ಗೆ ಹರಿಯುತ್ತಿದೆ ಕೊಳಚೆ ನೀರು….!

Webdunia
ಶುಕ್ರವಾರ, 26 ಮೇ 2023 (19:09 IST)
ಬೆಂಗಳೂರಿಗರ ನೆಚ್ಚಿನ ವಾಯುವಿಹಾರಿ ಸ್ಥಳ,ಹಸಿರು ಸೀರೆ ಉಟ್ಟು ಪ್ರಶಾಂತ ವಾತಾವರಣದೊಂದಿಗೆ ಮನಸ್ಸಿಗೆ ನೆಮ್ಮದಿ ನೀಡುವ ಸುಂದರ ತಾಣವಾಗಿರುವ ಕಬ್ಬನ್ ಉದ್ಯಾನವನಕ್ಕೆ ಕೊಳಚೆ ನೀರು ಹರಿದು ಬರುತ್ತಿದೆ. ಇದರಿಂದ ವಾಯುವಿಹಾರಿಗಳು ಮೂಗು ಮುಚ್ಚಿಕೊಂಡು ಹೆಜ್ಜೆ ಹಾಕುವ ಸ್ಥಿತಿ ನಿರ್ಮಾಣವಾಗಿದೆ. ಸದಾ ಜನಜಂಗುಳಿ, ಟ್ರಾಫಿಕ್, ಹಾರ್ನ್ ಸದ್ದಿನಿಂದ ಕೂಡಿದ್ದ ಸಿಲಿಕಾನ್ ಮಂದಿಗೆ ಪ್ರಶಾಂತತೆಯ ವಾತವರಣ ನೀಡುವ ಕಬ್ಬನ್ ಪಾರ್ಕ್ನ ಸೌಂದರ್ಯವನ್ನು ಅಲ್ಲಿನ ಪ್ರವಾಸಿಗರೆ ಹಾಳು ಮಾಡುವಂತೆ ಕಾಣುತ್ತಿದೆ. ಇನ್ನೂ ಕಬ್ಬನ್ ಪಾರ್ಕ್ ಒಳಗೆ ಇರುವ  ಸುಂದರ ಪ್ರದೇಶಗಳಿಗೆ ವಿವಿಧ ಕಡೆಯಿಂದ ಕೊಚ್ಚೆ ನೀರು ನುಗ್ಗಿದ್ದು ವಾಯುವಿಹಾರಿಗಳು ಮೂಗು ಮುಚ್ಚಿಕೊಂಡು ಹೆಜ್ಜೆ ಹಾಕುವ ಸ್ಥಿತಿ ನಿರ್ಮಾಣವಾಗಿದೆ. ಇಲ್ಲಿ ನಿರ್ಮಿಸಿರುವ ಕಲ್ಲಿನ ಸೇತುವೆಯಲ್ಲಿ ಪ್ಲಾಸ್ಟಿಕ್ ತ್ಯಾಜ್ಯ, ಬಾಟಲ್ ಸೇರಿ ಕಟ್ಟಿಕೊಂಡು ಈ ಪ್ರದೇಶವೆಲ್ಲ ಗೆಬ್ಬೆದ್ದು ನಾರುತ್ತಿದೆ. ಇದೇ ನೀರು ಬಿದಿರು ಮೆಳೆಯ ಮಾರ್ಗವಾಗಿ ಕಮಲದ ಕೊಳ ಕೆರೆ ತಲುಪುತ್ತಿದೆ ಕೊಳ ಕೊಚ್ಚೆ ನೀರಾಗಿ ಪರಿವರ್ತನೆ ಗೊಂಡಿದೆ.

24 ಕೋಟಿ ವೆಚ್ಚದಲ್ಲಿ ಕಬ್ಬನ್ ಪಾರ್ಕ್ ನಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳು ಕೈಗೊಳ್ಳಲಾಗಿದೆ. ಆದರೆ, ಈ ಕೊಳಚೆ ನೀರಿನ ಸಮಸ್ಯೆ ಮಾತ್ರ ಸರಿಪಡಿಸಿಲ್ಲ. ಬಿದಿರು ಮೆಳೆಯ ಸುತ್ತಮುತ್ತ ಕಟ್ಟಿಕೊಂಡಿರುವ ತ್ಯಾಜ್ಯ ನೀರಿನಿಂದ ಇಡೀ ಪರಿಸರ ದುರ್ನಾತದಿಂದ ಕೂಡಿದೆ ಎಂದು ವಾಯುವಿಹಾರಿಗಳು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ, ಸುಮಾರು ₹1.5 ಕೋಟಿ ವೆಚ್ಚದಲ್ಲಿ ಕಮಲದ ಕೊಳದ ಅಭಿವೃದ್ಧಿಯನ್ನು ಮಾಡಲಾಗಿದೆ ಆದರೆ, ಕೊಳದ ಹೂಳನ್ನೇ ತೆಗೆದಿಲ್ಲ. ಇದರ ಅಭಿವೃದ್ಧಿಯೂ ಆಗಿಲ್ಲ. ಜತೆಗೆ ಕೊಳಚೆ ನೀರು ಬರುತ್ತಿದ್ದು, ದುರ್ವಾಸನೆ ಬೀರುತ್ತಿದೆ. ವಾರಾಂತ್ಯದಲ್ಲಿ ನೂರಾರು ಜನ ಕುಟುಂಬ ಸಮೇತ ಆಗಮಿಸುತ್ತಿದ್ದು. ಪಾರ್ಕ್ ನಲ್ಲಿ ಕೊಳಚೆ ನೀರು ಹರಿಯುವುದರಿಂದ ಪಾರ್ಕ್ ನ ಸೌಂದರ್ಯಕ್ಕೆ ಕಪ್ಪು ಚುಕ್ಕೆಯಾಗಿದೆ.

ಪಾರ್ಕ್ ಗೆ ಬರುವ ಕೊಳಚೆ ನೀರಿನ ಬಗ್ಗೆ ಹಲವು ಬಾರಿ ಅಧಿಕಾರಿಗಳು ಗಮನಕ್ಕೆ ತಂದರೂ ಶಾಶ್ವತ ಪರಿಹಾರ ದೊರೆತ್ತಿಲ್ಲ,ಇನ್ನಾದರು ಸಂಭಂದ ಪಟ್ಟ ಅಧಿಕಾರಿಗಳೂ ಎಚ್ಚೆತ್ತುಕೊಂಡು ಪರಿಹಾರ ಕಲ್ಪಿಸುತ್ತಾರ ಅನ್ನೋದನ್ನ ಕಾದು ನೋಡಬೇಕಿದೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold price today: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

Viral video: ಕಾಲ್ತುಳಿತವಾದಾಗ ಹೇಗೆ ನಮ್ಮನ್ನು ರಕ್ಷಿಸಿಕೊಳ್ಳಬೇಕು, ವೈರಲ್ ವಿಡಿಯೋ ನೋಡಿ

Chinnaswamy stampede: ಸೆಕ್ಯುರಿಟಿ ಕೊಡಕ್ಕಾಗಲ್ಲ, ಡಿಸಿಪಿ ಪತ್ರ ವೈರಲ್: ನಾನವನಲ್ಲ ಅಂತಿದ್ದ ಸರ್ಕಾರಕ್ಕೆ ಮುಜುಗರ

Indore murder: ಹನಿಮೂನ್ ನಲ್ಲೇ ಗಂಡನಿಗೆ ಚಟ್ಟ ಕಟ್ಟಿದಳು: ಇಂಧೋರ್ ನಲ್ಲಿ ಪತ್ನಿಯ ಚಿಲ್ಲಿಂಗ್ ಮರ್ಡರ್ ಕತೆ

Siddaramaiah: ಕಮಿಷನರ್ ಭದ್ರತೆ ಕೊಡ್ಬೇಕಿತ್ತು, ನಂದೇನು ತಪ್ಪಿದೆ ಎಂದ ಸಿಎಂ: ಆರ್ಡರ್ ಕೊಟ್ಟಿದ್ದು ನೀವಲ್ವಾ ಎಂದ ಪಬ್ಲಿಕ್

ಮುಂದಿನ ಸುದ್ದಿ
Show comments