ಸಿಲಿಕಾನ್ ಸಿಟಿಯಲ್ಲಿ ಕಾಮುಕರ ಕೃತ್ಯ ಸಿಸಿಟಿವಿಯಲ್ಲಿ ಸೆರೆ

geetha
ಗುರುವಾರ, 18 ಜನವರಿ 2024 (16:00 IST)
ಬೆಂಗಳೂರು-ರಾಜಧಾನಿಯಲ್ಲಿ ಕಾಮುಕರು ಹೆಣ್ಮಕ್ಕಳ್ಳನ್ನ ಟಚ್ ಮಾಡಿ ವಿಕೃತ ಸುಖ ಪಡೆಯುತ್ತಿದ್ದಾರೆ.ಹೋಟೆಲ್ ಬಳಿ ಯುವತಿಗೆ ಬೇಕು ಬೇಕಂತಲೇ ಟಚ್ ಮಾಡಿ ಲೈಂಗಿಕ ಕಿರುಕುಳ ಕೊಡಲಾಗಿದೆ.ಕಾಮುಕನ ಕೃತ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.ವಿಜಯನಗರದ ನಮ್ಮೂರ ಹೊಟೇಲ್  ಬಳಿ ಘಟನೆ ನಡೆದಿದೆ.
 
ಯುವತಿಯನ್ನ ಟಚ್ ಮಾಡೋ ಮೊದಲು ಮೂವರಿಂದ ಪ್ಲಾನ್ ನಡೆದಿದೆ.ಒಬ್ಬ ಟಚ್ ಮಾಡೋ ಉದ್ದೇಶದಿಂದ ಹೋಗ್ತಾನೆ,ಮತ್ತಿಬ್ಬರು ವಾಚ್ ಮಾಡ್ತಾರೆ.ಸಿಸಿಟಿವಿಯಲ್ಲಿ ಸಂಪೂರ್ಣ ದೃಶ್ಯ ಸೆರೆಯಾಗಿದೆ.ಹೊಟೇಲ್ ಗೆ ಬಂದ ಯುವತಿಯನ್ನು ಟಚ್ ಮಾಡಿ ಗಲಾಟೆ ಮಾಡಿದ್ದಾರೆ.ಬೇಕು ಬೇಕಂತಲೇ ಟಚ್ ಮಾಡಿ ಯುವಕರು ಪುಂಡಾಟ ಮೆರೆದಿದ್ದಾರೆ.ಘಟನೆ ಸಂಬಂಧ ವಿಜಯನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಿ ಪೊಲೀಸರು ಆರೋಪಿಗಾಗಿ  ಹುಡುಕಾಟ ನಡೆಸಿದ್ದಾರೆ.ಹೋಟೆಲ್ ಕ್ಯಾಶಿಯರ್ ಸುಕನ್ಯಾ ಕೊಟ್ಟ ದೂರಿನ ಮೇರೆಗೆ ಎಫ್ಐಆರ್ ದಾಖಲಾಗಿದೆ.
 
ವಿಜಯನಗರ ಆರ್ ಪಿ ಸಿ ಲೇಔಟ್ ನಲ್ಲಿರುವ ನಮ್ಮೂರ ಹೋಟೆಲ್ ನಲ್ಲಿ 2023 ಡಿಸಂಬರ್ 30 ರ ಸಂಜೆ 7.30 ಕ್ಕೆ ಘಟನೆ ನಡೆದಿದೆ.ತಡವಾಗಿ ಅಂದರೆ 2024 ರ ಜನವರಿ 10 ರಂದು ಎಫ್ಐಆರ್ ದಾಖಲಾಗಿದೆ.ಹೋಟೆಲ್ ಗೆ ಬಂದ ಮೂವರು ಹುಡುಗರಾಗಿದ್ದು,ದೋಸೆ ತಿನ್ನುತ್ತ ಅಲ್ಲೇ ನಿಂತು ಹರಟೆ ಹೊಡೆದಿದ್ದಾರೆಈ‌ ವೇಳೆ ಹೋಟೆಲ್ ಗೆ ಭೇಟಿ ನೀಡಿದ್ದ ಯುವತಿ ಜೊತೆಗೆ ಅನುಚಿತ ವರ್ತನೆ ತೋರಿದ್ದಾರೆ.ಓರ್ವ ಯುವತಿಯ ಹಿಂಬದಿಗೆ ಕೈ ನಿಂದ ಹೊಡೆದು ಅನುಚಿತ ವರ್ತನೆ ತೋರಿದ್ರೆ,ಉಳಿದಿಬ್ಬರು ಅದನ್ನು ನೋಡಿ ಖುಷಿ ಪಡುತ್ತಿದ್ರು.ಈ ವೇಳೆ ಯುವಕರ ಜೊತೆಗೆ ಸಂತ್ರಸ್ಥ ಯುವತಿ ಕೂಗಾಟ ನಡರಸಿದ್ದಾರೆ.ಈ ವೇಳೆ ಸ್ಥಳೀಯರು ಜಮಾಯಿಸಿದ್ದಾರೆ.ಸ್ಥಳೀಯರು ಸೇರ್ತಿದ್ದಂತೆ ಮೂವರು ಪರಾರಿಯಾಗಿದ್ದಾರೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸೂರಜ್‌ ಬೆನ್ನಲ್ಲೇ ಪ್ರಜ್ವಲ್ ರೇವಣ್ಣಗೂ ಬಿಗ್‌ಶಾಕ್: ಶಿಕ್ಷೆ ಅಮಾನತು ಕೋರಿ ಸಲ್ಲಿಸಿದ್ದ ಅರ್ಜಿ ವಜಾ

ರಷ್ಯಾ ಅಧ್ಯಕ್ಷ ಪುಟಿನ್ ಭೇಟಿಗೆ ಬಂದೋಬಸ್ತ್ ನಡುವೆ ದೆಹಲಿಯ ಎರಡು ಕಾಲೇಜಿಗೆ ಬಾಂಬ್ ಬೆದರಿಕೆ

ಭಿನ್ನಾಭಿಪ್ರಾಯ ಬಗೆಹರಿದಿದೆ: ಸಿಎಂ ಕುರ್ಚಿ ಗುದ್ದಾಟಕ್ಕೆ ಪರಮೇಶ್ವರ್ ಪ್ರತಿಕ್ರಿಯೆ

ಯಾವತ್ತಾದ್ರೂ ಬಿಟ್ಟು ಕೊಡಲೇ ಬೇಕಾಲ್ವ, ಸಿಎಂ ಆಪ್ತ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ

ಈ ತಿಂಗಳೊಳಗೆ ಸಿದ್ದರಾಮಯ್ಯ ರಾಜೀನಾಮೆ ನೀಡುವುದು ಪಕ್ಕಾ: ಗೋವಿಂದ ಕಾರಜೋಳ

ಮುಂದಿನ ಸುದ್ದಿ