Webdunia - Bharat's app for daily news and videos

Install App

ಎಸಿಪಿ ಚಂದನ್‌ರಿಂದ ಲೈಂಗಿಕ ದೌರ್ಜನ್ಯ: ಠಾಣೆಯ ಸಿಸಿಟಿವಿ ದೃಶ್ಯ ನೀಡುವರೆಗೂ ಆಹೋರಾತ್ರಿ ಧರಣಿ

Sampriya
ಮಂಗಳವಾರ, 3 ಸೆಪ್ಟಂಬರ್ 2024 (18:02 IST)
Photo Courtesy X
ಬೆಂಗಳೂರು; ಎಸಿಪಿ ಚಂದನ್ ಕುಮಾರ್ ನನ್ನ ಮೇಲೆ ಹಲ್ಲೆ ಮಾಡಿ, ಲೈಂಗಿಕ ದೌರ್ಜನ್ಯ ನಡೆಸಿಲ್ಲ ಎನ್ನುವುದಾದರೆ ಸಿಸಿಟಿವಿ ದೃಶ್ಯಾವಳಿ ನೀಡಲು ಭಯವೇಕೆ. ಸಿಸಿಟಿವಿ ದೃಶ್ಯ ನೀಡುವವರೆಗೂ ಆಹೋರಾತ್ರಿ ಧರಣಿ ಮಾಡುತ್ತೇನೆಂದು  ಹಿಂದೂ ಮುಖಂಡ ಪುನೀತ್ ಕೆರೆಹಳ್ಳಿ ಎಚ್ಚರಿಕೆ ನೀಡಿದ್ದಾರೆ.

ರೇಣುಕಾಸ್ವಾಮಿ ಪ್ರಕರಣದಲ್ಲಿ ನಟ ದರ್ಶನ್ ಅವರನ್ನು ಅರೆಸ್ಟ್ ಮಾಡಿ ಹೀರೋ ಆಗಿದ್ದ ಎಸಿಪಿ ಚಂದನ್ ಕುಮಾರ್ ಮೇಲೆ ಹಿಂದೂ ಮುಖಂಡ ಪುನೀತ್ ಕೆರೆಹಳ್ಳಿ ಆಕ್ರೋಶ ಹೊರಹಾಕಿದ್ದಾರೆ.

ನಾಯಿ ಮಾಂಸ ಮಾರಾಟ ಆರೋಪ ಸಂಬಂಧ ಪುನೀತ್ ಕೆರೆಹಳ್ಳಿ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದರು. ಈ ಸಂದರ್ಭದಲ್ಲಿ ಠಾಣೆಯಲ್ಲಿ ನನ್ನ ಮೇಲೆ ಎಸಿಪಿ ಚಂದನ್ ಕುಮಾರ್ ಅವಾಚ್ಯ ಶಬ್ಧಗಳಿಂದ ನಿಂದಿಸಿ, ಬೆತ್ತಲೆಗೊಳಿಸಿ ಹಲ್ಲೆ ಮಾಡಿದ್ದಾರೆ ಎಂದು ಪುನೀತ್ ಕೆರೆಹಳ್ಳಿ ಆರೋಪಿಸಿದ್ದರು.

ಇದೀಗ ಈ ಪ್ರಕರಣ ಸಂಬಂಧ ಪುನೀತ್ ಅವರು ಠಾಣೆಯ ಅಂದಿನ ಸಿಸಿಟಿವಿ ಫೂಟೇಜ್‌ ಅನ್ನು ನೀಡುವಂತೆ ಮಾಹಿತಿ ಹಕ್ಕಿನಡಿಯಲ್ಲಿ ಕೇಳಿಕೊಂಡಿದ್ದಾರೆ.  ಆದರೆ ಇದೀಗ 25 ದಿನಗಳ ನಂತರ ನಮ್ಮ ವ್ಯಾಪ್ತಿಗೆ ಬರುವುದಿಲ್ಲ, ಸಹಾಯಕ ಆಯುಕ್ತರು ಬ್ಯಾಟರಾಯನಪುರ ಅವರ ಕಛೇರಿಗೆ RTI ಅರ್ಜಿ ಹಾಕಿ ಪಡೆಯುವಂತೆ ತಿಳಿಸಿದ್ದಾರೆ . ಈ ಮೂಲಕ ವಿಡಿಯೋ ಡಿಲೀಟ್ ಮಾಡುವ ಕುತಂತ್ರ ನಡೆಯುತ್ತಿದೆ ಎಂದು ಪುನೀತ್ ಅವರು ಗಂಭೀರ ಆರೋಪ ಮಾಡಿದ್ದಾರೆ.

ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಬರೆದುಕೊಂಡಿರುವ ಅವರು, ಎಸಿಪಿ ಚಂದನ್ ಕುಮಾರ್ ದಿನಾಂಕ 26/07/2024 ರಂದು ರಾತ್ರಿ ನನ್ನ ಮೇಲೆ ಹಲ್ಲೆ ಮಾಡಿ ನನ್ನ ಬಟ್ಟೆ ಬಿಚ್ಚಿಸಿ ಲೈಂಗಿಕ ದೌರ್ಜನ್ಯ ನಡೆಸಿದ ಕಾಟನ್ ಪೇಟೆ ಪೊಲೀಸ್ ಠಾಣ ಕೊಠಡಿಯಲ್ಲಿ C C ಕ್ಯಾಮರಾವಿದ್ದು ಅದರ CC TV ದೃಶ್ಯಗಳನ್ನು ಮಾಹಿತಿ ಹಕ್ಕಿನಲ್ಲಿ ಕೇಳಿದರೆ ಬೇಕೆಂದೆ 25 ದಿನಗಳ ವರೆಗೂ ಸಮಯ ವ್ಯರ್ಥ ಮಾಡಿ ಈಗ ಅದು ನಮ್ಮ ವ್ಯಾಪ್ತಿಗೆ ಬರುವುದಿಲ್ಲ ಸಹಾಯಕ ಆಯುಕ್ತರು ಬ್ಯಾಟರಾಯನಪುರ ಅವರ ಕಛೇರಿಗೆ RTI ಅರ್ಜಿ ಹಾಕಿ ಪಡೆಯುವಂತೆ ತಿಳಿಸಿದ್ದಾರೆ.
ಇದು ಬೇಕೆಂದೆ ತಡ ಮಾಡುತಿದ್ದು ವಿಡಿಯೋ ಡಿಲೀಟ್ ಮಾಡುವ ಕುತಂತ್ರವಾಗಿದೆ
ತಪ್ಪು ಮಾಡಿಲ್ಲ ಎನ್ನುವುದಾದರೆ C C Tv ದೃಶ್ಯವಳಿ ನೀಡಲು ಭಯವೇಕೆ
ಅದ್ದರಿಂದ ನಾನು CCTV ದೃಶ್ಯ ನೀಡುವವರೆಗೂ ಆಹೋರಾತ್ರಿ ಧರಣಿ ಮಾಡಬೇಕು ಎಂದು ತೀರ್ಮಾನಿಸಿದ್ದೇನೆ<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ