Webdunia - Bharat's app for daily news and videos

Install App

ಲೈಂಗಿಕ ಕಿರುಕುಳ ಆರೋಪ: ಬಿಜೆಪಿ ಸಂಸದ ಬ್ರಿಜ್ ಭೂಷಣ್‌ ಬದಲಿಗೆ ಮಗನಿಗೆ ಟಿಕೆಟ್ ಸಾಧ್ಯತೆ

Sampriya
ಗುರುವಾರ, 2 ಮೇ 2024 (14:22 IST)
Photo Courtesy X
ಉತ್ತರಪ್ರದೇಶ: ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿರುವ ಆರೋಪ ಹೊತ್ತಿರುವ ಬಿಜೆಪಿ ಸಂಸದ ಮತ್ತು ಡಬ್ಲ್ಯುಎಫ್‌ಐ ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರಿಗೆ ಈ ಬಾರಿ ಬಿಜೆಪಿ ಟಿಕೆಟ್ ಕೈತಪ್ಪುವ ಸಾಧ್ಯತೆಯಿದೆ. ಬಿಜೆಪಿಯು ಇದೀಗ ಅವರ ಮಗ ಕರಣ್ ಭೂಷಣ್ ಸಿಂಗ್ ಅವರನ್ನು ಕ್ಷೇತ್ರದಿಂದ ಕಣಕ್ಕಿಳಿಸುವ ಲೆಕ್ಕಚಾರವನ್ನು ಹಾಕಿಕೊಂಡಿದೆ.

ಕರಣ್ ಪ್ರಸ್ತುತ ಉತ್ತರ ಪ್ರದೇಶ ಕುಸ್ತಿ ಸಂಸ್ಥೆಯ ಅಧ್ಯಕ್ಷರಾಗಿದ್ದಾರೆ. ಈ ನಿರ್ಧಾರದ ಬಗ್ಗೆ ಬಿಜೆಪಿ ನಾಯಕತ್ವವು ಬ್ರಿಜ್ ಭೂಷಣ್ ಅವರಿಗೆ ತಿಳಿಸಿದೆ ಎಂದು ಮೂಲಗಳು ತಿಳಿಸಿವೆ.

ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರು ಕೈಸರ್‌ಗಂಜ್‌ನ ಹಾಲಿ ಸಂಸದರಾಗಿದ್ದಾರೆ.  ಭಾರತೀಯ ಜನತಾ ಪಕ್ಷ (ಬಿಜೆಪಿ) ಮಹಿಳಾ ಕುಸ್ತಿಪಟುಗಳಿಂದ ಲೈಂಗಿಕ ಕಿರುಕುಳದ ಆರೋಪ ಹೊತ್ತಿರುವ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರನ್ನು ಕೈಬಿಡುವ ಸಾಧ್ಯತೆಯಿದೆ.

ಸುಮಾರು ಒಂದು ದಶಕದ ಕಾಲ ಭಾರತದ ಕುಸ್ತಿ ಒಕ್ಕೂಟದ ಅಧ್ಯಕ್ಷರಾಗಿದ್ದ ಬ್ರಿಜ್ ಭೂಷಣ್ ಅವರು ಆರು ಮಹಿಳಾ ಕುಸ್ತಿಪಟುಗಳಿಂದ ಲೈಂಗಿಕ ಕಿರುಕುಳದ ಆರೋಪವನ್ನು ಎದುರಿಸುತ್ತಿದ್ದಾರೆ. ಬ್ರಿಜ್ ಭೂಷಣ್ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಭಾರತದ ಅಗ್ರ ಕುಸ್ತಿಪಟುಗಳಾದ ಸಾಕ್ಷಿ ಮಲಿಕ್ ಮತ್ತು ಬಜರಂಗ್ ಪುನಿಯಾರಿಂದ ಬೃಹತ್ ಪ್ರತಿಭಟನೆ ನಡೆಯಿತು.

2019 ರ ಲೋಕಸಭಾ ಚುನಾವಣೆಯಲ್ಲಿ, ಬ್ರಿಜ್ ಭೂಷಣ್ ಕೈಸರ್‌ಗಂಜ್‌ನಿಂದ ಎರಡು ಲಕ್ಷ ಮತಗಳಿಂದ ಗೆದ್ದರು. ಈ ಹಿಂದೆ ಕೈಸರ್‌ಗಂಜ್ ಕ್ಷೇತ್ರದಲ್ಲಿ ಬಿಜೆಪಿಗೆ ಸ್ಪರ್ಧೆ ಇಲ್ಲ ಎಂದು ಹೇಳಿದ್ದರು. ಕಳೆದ ಬಾರಿ 2 ಲಕ್ಷಕ್ಕೂ ಹೆಚ್ಚು ಮತಗಳಿಂದ ಗೆದ್ದಿದ್ದೆ, ಈ ಬಾರಿ 5 ಲಕ್ಷ ಮತಗಳನ್ನು ಕೊಡುವಂತೆ ಕಾರ್ಯಕರ್ತರು ಕರೆ ನೀಡಿದ್ದಾರೆ ಎಂದರು.

ಕಳೆದ ಚುನಾವಣೆಯಲ್ಲಿ ಬ್ರಿಜ್ ಭೂಷಣ್ ಅವರು ಬಿಎಸ್‌ಪಿಯ ಚಂದ್ರದೇವ್ ರಾಮ್ ಯಾದವ್ ಅವರನ್ನು 2.5 ಲಕ್ಷ ಮತಗಳಿಂದ ಸೋಲಿಸಿದ್ದರು. ಅವರು ಮೂರು ಬಾರಿ - 2009, 2014 ಮತ್ತು 2019 ರಲ್ಲಿ ಸ್ಥಾನವನ್ನು ಗೆದ್ದಿದ್ದಾರೆ. 2009 ರ ಮೊದಲು, ಸಮಾಜವಾದಿ ಪಕ್ಷದ ಬೇಣಿ ಪ್ರಸಾದ್ ವರ್ಮಾ ಅವರು 1996 ರಿಂದ 2009 ರವರೆಗೆ ಕೈಸರ್ಗಂಜ್ ಸ್ಥಾನವನ್ನು ಹೊಂದಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೋದಿ ದೊಡ್ಡ ಮತಗಳ್ಳ, ಅವರನ್ನು ಓಡಿಸಬೇಕು ಎಂದ ಮಲ್ಲಿಕಾರ್ಜುನ ಖರ್ಗೆ: ನೆಟ್ಟಿಗರ ಪ್ರತಿಕ್ರಿಯೆ ನೋಡಿ

ಹಣೆಗೆ ಕುಂಕುಮ, ನಾಮ: ಎನ್ ಡಿಎ ಉಪರಾಷ್ಟ್ರಪತಿ ಸಿಪಿ ರಾಧಾಕೃಷ್ಣನ್ ನಿಜಕ್ಕೂ ಯಾರು

Karnataka Rains: ರಾಜ್ಯಾದ್ಯಂತ ಈ ದಿನದವರೆಗೂ ಇರಲಿದೆ ಭಾರೀ ಮಳೆ

ಭಾರೀ ಮಳೆ ಮುನ್ಸೂಚನೆ: ನಾಳೆ ಈ ಭಾಗದ ಶಾಲಾ ಮಕ್ಕಳಿಗೆ ರಜೆ ಘೋಷಣೆ

ಅಯೋಗ್ಯನ ಮಾತು ಕೇಳಿ ಧರ್ಮಸ್ಥಳದ ಪ್ರಕರಣ ಎಸ್‌ಐಟಿಗೆ ವಹಿಸಿದ್ದಾರೆ: ಪ್ರಹ್ಲಾದ ಜೋಶಿ

ಮುಂದಿನ ಸುದ್ದಿ