ಐ ಎಲ್ ಯು ಎಂದು ವಿದ್ಯಾರ್ಥಿನಿಗೆ ಎಸ್ಎಂಎಸ್ ಕಳಿಸಿದ ಶಿಕ್ಷಕ: ಪಾಲಕರಿಗೆ ವಿಷಯ ಗೊತ್ತಾದಾಗ ಪರಾರಿ

Webdunia
ಶುಕ್ರವಾರ, 21 ಸೆಪ್ಟಂಬರ್ 2018 (16:45 IST)
ಶಿಕ್ಷಕನೊಬ್ಬ ಶಾಲಾ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿರುವ ಜೊತೆಗೆ ಅಸಭ್ಯವಾಗಿ ಮೆಸೇಜ್ ಮಾಡಿ ಪರಾರಿ ಆಗಿರುವ ಘಟನೆ ನಡೆದಿದೆ.

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ಪಟ್ಟಣದಲ್ಲಿ ಈ ಘಟನೆ ನಡೆದಿದೆ. ಸರಕಾರಿ ಪದವಿಪೂರ್ವ ಕಾಲೇಜಿನ ಹೈಸ್ಕೂಲ್ ವಿಭಾಗದ ಹತ್ತನೇಯ ತರಗತಿಯಲ್ಲಿ ಅಧ್ಯಯನ ಮಾಡುತ್ತಿದ್ದ ವಿದ್ಯಾರ್ಥಿನಿಗೆ ಪ್ರತಿನಿತ್ಯ ಲೈಂಗಿಕ ಕಿರುಕಳ ನೀಡುತ್ತಿರುವ ಜೊತೆಗೆ ಮೊಬೈಲ್ ನಲ್ಲಿ ಐ ಲವ್ ಯು, ಕಾಲ್ ಮಿ, ಪ್ಲೀಜ್, ಅಪ್ಪು ಪ್ಲೀಜ್ ಮಾತಾಡ್ಬೇಕು ಎಂದು ಶಿಕ್ಷಕನೊಬ್ಬ ಎಸ್ ಎಮ್ ಎಸ್ ಕಳಿಸಿದ್ದಾನೆ. ಮಲ್ಲಪ್ಪ ಬಸವರಾಜ್ ಡಂಗಿ ಎಂಬ ಶಿಕ್ಷಕ ಇಂತಹ ಕೃತ್ಯ ಎಸಗಿದ್ದು, ಪಾಲಕರಿಗೆ ವಿಷಯ ತಿಳಿದ ತಕ್ಷಣ ಶಾಲೆಗೆ ಬಂದಿದ್ದಾರೆ. ಇನ್ನು ಶಿಕ್ಷಕನಿಗೆ ಸಾರ್ವಜನಿಕ ಸಮ್ಮುಖದಲ್ಲಿ ಥಳಿಸಬೇಕು ಎನ್ನುವಾಗಲೇ ಶಿಕ್ಷಕ ಡಂಗಿ ಅಲ್ಲಿಂದ ಪರಾರಿಯಾಗಿದ್ದಾನೆ.

ಸ್ಥಳೀಯರು ಶಾಲೆಯ ಮುಖ್ಯೋಪಾಧ್ಯಾಯರಿಗೆ ಈ ವಿಷಯ ತಿಳಿಸಿದ್ದಾರೆ. ಕೂಡಲೇ ಶಿಕ್ಷಕನ ವಿರುದ್ಧ ಕ್ರಮಕ್ಕಾಗಿ ಡಿಡಿಪಿಐ  ಗಮನಕ್ಕೆ ತಂದು ಶಿಕ್ಷಕ ಸೇವೆಯಿಂದ ಅಮಾನತ್ತು ಮಾಡಬೇಕು  ಆಗ್ರಹಿಸಿದ್ದಾರೆ.
ಇನ್ನು ಮುಖ್ಯೋಪಾಧ್ಯಾಯರು ಮೇಲಾಧಿಕಾರಿಗಳ ಗಮನಕ್ಕೆ ತಂದು ಸೂಕ್ತ ಕ್ರಮ ತೆಗೆದುಕೊಳ್ಳುವುದಾಗಿ ಭರವಸೆ ನೀಡಿದ ನಂತರ ಸ್ಥಳೀಯರು ಶಾಂತರಾಗಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹದಗೆಟ್ಟ ಆರ್ಥಿಕ ಸ್ಥಿತಿಗತಿಯನ್ನು ಸರಿಮಾಡಲು ಡಿಕೆ ಶಿವಕುಮಾರ್‌ಗೆ ಒಳ್ಳೆಯ ಅವಕಾಶ: ಅರವಿಂದ್‌ ಬೆಲ್ಲದ್‌

ಶಾಸಕಾಂಗ ಪಕ್ಷದ ನಾಯಕರಾಗಿ ಡಿಕೆ ಶಿವಕುಮಾರ್ ಆಯ್ಕೆ: ಶಾಸಕಾಂಗ ಸಭೆಯ ಡೀಟೈಲ್ಸ್ ಇಲ್ಲಿದೆ

ಗ್ಯಾರಂಟಿ ಫಲಾನುಭವಿಗಳ ಹೆಸರು ಏಕಾಏಕಿ ತೆಗೆದು ಕಿರುಕುಳ ಕೊಡುವುದೇಕೆ: ಡಾ ಸಿಎನ್ ಅಶ್ವತ್ಥ್ ನಾರಾಯಣ ಪ್ರಶ್ನೆ

ಡಿಕೆ ಶಿವಕುಮಾರ್ ಸಿಎಂ ಆದ ಮೇಲೆ ಭಿನ್ನಾಭಿಪ್ರಾಯವಾಗಬಾರದು ಎಂದು ಕಾಂಗ್ರೆಸ್ ಮಾಸ್ಟರ್ ಪ್ಲ್ಯಾನ್

ರಾಜ್ಯದಲ್ಲಿ ಗರಿಗೆದರಿದ ರಾಜಕೀಯ ಚಟುವಟಿಕೆ: ಗವರ್ನರ್‌ ಭೇಟಿ ಮಾಡಿದ ಭಾವಿ ಸಿಎಂ ಡಿ.ಕೆ. ಶಿವಕುಮಾರ್

ಮುಂದಿನ ಸುದ್ದಿ