Select Your Language

Notifications

webdunia
webdunia
webdunia
webdunia

ಅಧಿಕಾರಿಯಿಂದ ಸಹದ್ಯೋಗಿಗೆ ಲೈಂಗಿಕ ಕಿರುಕುಳ: ಆತ್ಮಹತ್ಯೆಗೆ ಯತ್ನಿಸಿದ ಸಂತ್ರಸ್ತೆ

ಅಧಿಕಾರಿಯಿಂದ ಸಹದ್ಯೋಗಿಗೆ ಲೈಂಗಿಕ ಕಿರುಕುಳ: ಆತ್ಮಹತ್ಯೆಗೆ ಯತ್ನಿಸಿದ ಸಂತ್ರಸ್ತೆ
ಬೆಳಗಾವಿ , ಗುರುವಾರ, 29 ಜನವರಿ 2015 (15:58 IST)
ದಿನನಿತ್ಯ ಲೈಂಗಿಕ ಕಿರುಕುಳ ನೀಡುತ್ತಿದ್ದ ಆರೋಪಿಗೆ ಬಂಧಿಸಿಯೂ ಕೂಡ ಆತನಿಗೆ ಯಾವುದೇ ರೀತಿಯ ಶಿಕ್ಷೆಯಾಗಿಲ್ಲ ಎಂದು ಮನನೊಂದ ಹೆಸ್ಕಾಂನ ಮಹಿಳಾ ಎಂಜಿನಿಯರ್ ಓರ್ವರು ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಗರದಲ್ಲಿ ಇಂದು ನಡೆದಿದೆ. 
 
ಕಿರುಕುಳ ನೀಡಿ ಪೊಲೀಸ್ ಬಂಧನಕ್ಕೆ ಒಳಗಾಗಿ ಹೊರ ಬಂದಿದ್ದ ಆರೋಪಿನ್ನು ತುಕಾರಾಂ ಮಜ್ಜಿಗೆ ಎನ್ನಲಾಗಿದ್ದು, ಹೆಸ್ಕಾಂನ ಹಿರಿಯ ಅಧಿಕಾರಿ ಎನ್ನಲಾಗಿದೆ. ಕಾರ್ಯ ನಿರ್ವಹಿಸುತ್ತಿದ್ದ ವೇಳೆಯಲ್ಲಿ ಮಜ್ಜಿಗೆ, ದೈಹಿಕವಾಗಿ ಹಾಗೂ ಮಾನಸಿಕವಾಗಿ ಲೈಂಗಿಕ ಕಿರುಕುಳ ನೀಡುತ್ತಿದ್ದ ಎಂದು ಆರೋಪಿಸಿರುವ ಸಂತ್ರಸ್ತೆ, ಆರೋಪಿ ವಿರುದ್ಧ ಇಲ್ಲಿನ ಸ್ಥಳೀಯ ಪೊಲೀಸ್ ಠಾಣೆ ಮಾಳ ಮಾರುತಿ ಎಂಬಲ್ಲಿ ದೂರು ದಾಖಲಿಸಿದ್ದರು. ಆದರೆ ಆರೋಪಿಯನ್ನು ಬಂಧಿಸಿದ್ದ ಪೊಲೀಸರು ಯಾವುದೇ ಕ್ರಮ ಕೈಗೊಳ್ಳದೆ ಹೊರ ಬಿಟ್ಟಿದ್ದರು. ಇದರಿಂದ ಮನನೊಂದಿದ್ದ ಮಹಿಳೆ ಇಂದು ವಿಷ ಸೇವಿಸುವ ಮೂಲಕ ಆತ್ಮಹತ್ಯೆಗೆ ಯತ್ನಿಸಿದ್ದಾಳೆ ಎಂದು ತಿಳಿದು ಬಂದಿದೆ. 
 
ಆತ್ಮಹತ್ಯೆಯಿಂದ ಪಾರಾಗಿರುವ ಸಂತ್ರಸ್ತ ಮಹಿಳೆಯನ್ನು ಇಲ್ಲಿನ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ ಎಂದು ವೈದ್ಯರು ತಿಳಿಸಿದ್ದಾರೆ. ಇನ್ನು ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಮುಂದುವರಿಸಿದ್ದಾರೆ. 

Share this Story:

Follow Webdunia kannada