Webdunia - Bharat's app for daily news and videos

Install App

ಕಾಮುಕನ ಕಿರುಕುಳದಿಂದ ಗರ್ಭಿಣಿಯಾದ ಯುವತಿ: ಬೆದರಿಕೆಗೆ ಅಂಜಿ ಆತ್ಮಹತ್ಯೆ!

Webdunia
ಸೋಮವಾರ, 2 ಆಗಸ್ಟ್ 2021 (17:58 IST)
ತಂದೆ ತಾಯಿಯ ಜೊತೆಯಲ್ಲಿ ಕೂಲಿ ಕೆಲಸ ಮಾಡುತ್ತಾ ಜೀವನ ಸಾಗಿಸುತ್ತಿದ್ದ ಮಹಿಳೆ ಈಕೆ, 25 ವಯಸ್ಸಾದರೂ ಮದುವೆಯಾಗಿರಲಿಲ್ಲ, ಊರಿನ ಕಾಮುಕನೊಬ್ಬನಿಗೆ ಈಕೆಯ ಮೇಲೆ ಕಣ್ಣುಬಿದ್ದು ಪ್ರತಿನಿತ್ಯ ಲೈಂಗಿಕ ಕಿರುಕುಳ ನೀಡುತ್ತಿದ್ದ, ಗರ್ಭದಾರಣೆಯಾದಗ ಗರ್ಭಪಾತ ಮಾಡಿಸಿಕೋ, ಇಲ್ಲದಿದ್ದರೆ ವಿಷ ಕುಡಿಸಿ ಕೊಲ್ಲುತ್ತೇನೆ ಎಂದು ಎದುರಿಸಿದ್ದ, ಆದ್ದರಿಂದ ಆತಂಕಗೊಂಡ ಮಹಿಳೆ ತಾನೇ ವಿಷ ಕುಡಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
ರಾಯಚೂರು ತಾಲ್ಲೂಕಿನ ತಿಮ್ಮಾಪುರ ಗ್ರಾಮದ ನಿವಾಸಿ ರಮೇಶ್ ಲೈಂಗಿಕ ದೌರ್ಜನಕ್ಕೆ ಮಹಿಳೆ ಬಲಿಯಾಗಿದ್ದಾಳೆ. ಮದುವೆಯಾಗದೆ ತಂದೆ ತಾಯಿ ಜೊತೆಯಲ್ಲಿ ಕೂಲಿ ಕೆಲಸ ಮಾಡುತ್ತ ಜೀವನ ಸಾಗಿಸುತ್ತಿದ್ದ ಶಾಂತಮ್ಮಳಿಗೆ ಹಗಲು ರಾತ್ರಿ ಎನ್ನದೆ ಲೈಂಗಿಕ ಕಿರುಕುಳ ನೀಡುತ್ತಲೇ ಇದ್ದ, ಕೆಲವೊಮ್ಮೆ ರಾತ್ರಿ ವೇಳೆಯಲ್ಲಿ ಮನೆಗೆ ಬಂದು ಮಗಳಿಗೆ ಕಿರುಕುಳ ನೀಡುತ್ತಿದ್ದ, ಹಿಡಿಯಲು ಹೋದಾಗ ಕೆಲವೊಮ್ಮೆ ತಪ್ಪಿಸಿಕೊಂಡು ಪರಾರಿಯಾಗಿದ್ದ ಎಂದು ಹೆತ್ತವರು ಪೊಲೀಸ್ ಠಾಣೆಗೆ ಸಲ್ಲಿಸಿದ ದೂರಿನಲ್ಲಿ ಆರೋಪಿಸಿದ್ದಾರೆ.
ಕಳೆದ  ವರ್ಷಗಳಿಂದ ಈಕೆಯನ್ನು ಲೈಂಗಿಕವಾಗಿ ಬಳಸಿಕೊಂಡಿದ್ದಾನೆ. ಯಾವಾಗ ಈಕೆ ಗರ್ಭಿಣಿ ಎಂದು ತಿಳಿದ ಮೇಲೆ, ಈಕೆಯ ಮೇಲೆ ರೇಗಾಡಿ ಗರ್ಭಪಾತ ಮಾಡಿಸಿಕೊಳ್ಳಲು ಎಂದು ಆಗ್ರಹಿಸಿದ್ದಾನೆ. ಗರ್ಭಪಾತ ಮಾಡಿಸಿಕೊಳ್ಳದಿದ್ದರೆ ವಿಷ ಕುಡಿಸಿ ಸಾಯಿಸುವುದಾಗಿ ಹೆದರಿಸಿದ್ದಾರೆ. 
ಇದರಿಂದ ಆತಂಕಕ್ಕೆ ಒಳಗಾದ ಮಹಿಳೆ ಜೂನ್ 29ರಂದು ವಿಷ ಕುಡಿದಿದ್ದಾಳೆ, 3 ದಿನಗಳ ಕಾಲ ಜೀವನ್ಮರಣ ಹೋರಾಟ ನಡೆಸಿ ಕೊನೆಗೆ ಇಂದು ಮೃತಪಟ್ಟಿದ್ದಾಳೆ. ಇಂದು ನಗರದ ಮಹಿಳಾ ಪೊಲೀಸ್ ಠಾಣೆಗೆ ಕುಟುಂಬಸ್ಥರೆಲ್ಲ ಹೋಗಿ ತಾಯಿಯಿಂದ ಪ್ರಕರಣ ದಾಖಲಿಸಿ, ಡಿಎನ್ ಎ ಪರೀಕ್ಷೆ ನಡೆಸಿ ಆತನ ಮೇಲೆ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದ್ದಾರೆ.
suicide

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜ್ಯ ಕೃಷಿ ಬಿಕ್ಕಟ್ಟಿನಲ್ಲಿರುವಾಗ ವಿಧಾನಸಭೆ ಅಧಿವೇಶನದಲ್ಲಿ ರಮ್ಮಿ ಆಡುತ್ತಾ ಕೂತಾ ಸಚಿವ ಮಾಣಿಕ್ರಾವ್ ಕೊಕಾಟೆ

ಇವನು ಮನುಷ್ಯನ, ಮಗುವಿಗೆ ನಾಯಿ ಕಚ್ಚುತ್ತಿದ್ದರು ಅದನ್ನು ನೋಡಿ ನಗುತ್ತಾ ಕೂತಾ ಮಾಲೀಕ, Viral Video

ನಾನು ಸಚಿವನಾಗಿ, ಉಪ ಮುಖ್ಯಮಂತ್ರಿಯಾಗಿ ನಿಮ್ಮ ಮುಂದೆ ಬಂದಿಲ್ಲ: ಡಿಕೆ ಶಿವಕುಮಾರ್ ಹಿಂಗದಿದ್ಯಾಕೆ

ಒಂದೇ ಯುವತಿಯನ್ನು ಮದುವೆಯಾದ ಸಹೋದರರು, ಇದೇ ರೀತಿ ಹಿಮಾಚಲ ಪ್ರದೇಶದಲ್ಲಿ 6 ವರ್ಷದಲ್ಲಿ 5 ಮದುವೆ

ವಿಪಕ್ಷಗಳ ಬೇಡಿಕೆಯಂತೆ ಲೋಕಸಭೆಯಲ್ಲಿ ಆಪರೇಷನ್ ಸಿಂಧೂರ್, ಪಹಲ್ಗಾಮ್ ದಾಳಿ ಬಗ್ಗೆ ಚರ್ಚೆ

ಮುಂದಿನ ಸುದ್ದಿ