Publish Date: Tue, 30 Jul 2019 (10:46 IST)
Updated Date: Tue, 30 Jul 2019 (10:48 IST)
ಮಂಗಳೂರು : ಮಾಜಿ ಸಚಿವ ಎಸ್ ಎಂ ಕೃಷ್ಣ ಅಳಿಯ ವಿ.ಜಿ ಸಿದ್ದಾರ್ಥ್ ಅವರು ನಾಪತ್ತೆಯಾದ ಹಿನ್ನಲೆಯಲ್ಲಿ ಎಸ್ ಎಂ ಕೃಷ್ಣ ಅವರ ನಿವಾಸಕ್ಕೆ ಹಲವು ಗಣ್ಯರು ಭೇಟಿ ನೀಡುತ್ತಿದ್ದಾರೆ.
ಇಂದು ಬೆಂಗಳೂರಿನ ಸದಾಶಿವನಗರದಲ್ಲಿರುವ ಎಸ್ ಎಂ ಕೃಷ್ಣ ಅವರ ನಿವಾಸಕ್ಕೆ ಭೇಟಿ ನೀಡಿರುವ ಮಾಜಿ ಸಿಎಂ ಕುಮಾರಸ್ವಾಮಿ ಅವರು ಸಿದ್ದಾರ್ಥ್ ಕುಟುಂಬಸ್ಥರಿಗೆ ಧೈರ್ಯ ತುಂಬಿದ್ದಾರೆ.
ಈಗಾಗಲೇ ಸಿಎಂ ಯಡಿಯೂರಪ್ಪ ಹಾಗೂ ನಟ ಪುನೀತ್ ರಾಜ್ ಕುಮಾರ, ರಾಘವೇಂದ್ರ ರಾಜ್ ಕುಮಾರ್ ಅವರು ಎಸ್ ಎಂ ಕೃಷ್ಣ ಅವರ ನಿವಾಸಕ್ಕೆ ಭೇಟಿ ನೀಡಿ ಕುಟುಂಬಸ್ಥರಿಗೆ ಧೈರ್ಯ ತುಂಬಿದ್ದಾರೆ ಎನ್ನಲಾಗಿದೆ.