Webdunia - Bharat's app for daily news and videos

Install App

ಸೀಮಂತ ನಡೆಯಬೇಕಿದ್ದ ಮನೆಯಲ್ಲಿ ಸೂತಕದ ಛಾಯೆ; ಅಪ್ಪ, ಏಳು ಅಪ್ಪ, ಮಾತಾಡು ಅಪ್ಪ”

Webdunia
ಭಾನುವಾರ, 30 ಜೂನ್ 2019 (15:44 IST)
“ಅಪ್ಪ, ಏಳು ಅಪ್ಪ, ಮಾತಾಡು ಅಪ್ಪ” ಮಕ್ಕಳ ಈ ಆಕ್ರಂದನ ಮನಕಲಕುತ್ತಿತ್ತು. ಈ ದೃಶ್ಯ ಎಂಥವರ ಕಣ್ಣಾಲಿಗಳನ್ನು ಒದ್ದೆಯಾಗುವಂತೆ ಮಾಡಿತು.

ಕಲಬುರಗಿ ಜಿಲ್ಲೆಯ ಕಮಲಾಪುರ ತಾಲೂಕಿನ ಮರಗುತ್ತಿ ಗ್ರಾಮ ಇಂತಹ ಘಟನೆಗೆ ಸಾಕ್ಷಿಯಾಯಿತು. ಹುತಾತ್ಮ ಯೋಧ ಮಹಾದೇವ ಪೊಲೀಸ್ ಪಾಟೀಲ್ ಅವರ ಮಕ್ಕಳ ರೋಧನ ಹೇಳತೀರದಾಗಿತ್ತು. ಸಂದೀಪ್ ಪಾಟೀಲ್,  ಜ್ಯೋತಿ ಹಾಗೂ ಕುಲದೀಪ್ ಪಾಟೀಲ್ ಅವರ ಪಾಲಿಗೆ ನಮ್ಮ ಅಪ್ಪ ಇನ್ನೂ ಬದುಕಿದ್ದಾರೆ ಎಂಬಂತಿದ್ದರು. 

ಅಪ್ಪ, ಏಳು ಅಪ್ಪ, ಮಾತಾಡು ಅಪ್ಪ ಅಂತ ನಿರಂತರವಾಗಿ ತಮ್ಮ ನೋವನ್ನು ಹೊರಚೆಲ್ಲುತ್ತಿದ್ದರು. ಹುತಾತ್ಮ ಯೋಧನ ಧರ್ಮಪತ್ನಿ ಮಲ್ಲಮ್ಮ ಅವರ ಗೋಳು ಕೂಡ ಇದೇ ರೀತಿಯದ್ದು.

ಯಾಕಂದ್ರೆ, ಮಗಳು ಜ್ಯೋತಿಯ ಸೀಮಂತ ಕಾರ್ಯಕ್ರಮ ಜುಲೈ 1ನೇ ತಾರೀಖು ಸೋಮವಾರ ಸ್ವಗ್ರಾಮದ ಮನೆಯಲ್ಲಿ ನಡೆಸಲು ಸಿದ್ಧತೆ ನಡೆದಿತ್ತು. ಮಗಳ ಸಂಭ್ರಮದಲ್ಲಿ ಜೊತೆಗೂಡಲು, ರಜೆ ಪಡೆಯುವುದಕ್ಕಾಗಿ ಸಿಆರ್‍ಪಿಎಫ್ ಕಚೇರಿಗೆ ಬೈಕ್‍ನಲ್ಲಿ ತೆರಳುತ್ತಿದ್ದಾಗ ನಕ್ಸಲ್ ದಾಳಿಯಲ್ಲಿ ಮಹಾದೇವ ಪಾಟೀಲ ಪ್ರಾಣತೆತ್ತಿದ್ದಾರೆ. ಆ ವಿಧಿ ಸಂಭ್ರಮ-ಸಡಗರ ಕಿತ್ತುಕೊಂಡು ಸೂತಕದ ಛಾಯೆ ಮೂಡಿಸಿದೆ ಎಂದು ಹುತಾತ್ಮ ಯೋಧನ ಅಣ್ಣ ಬಿಕ್ಕುತ್ತಾ ಕಣ್ಣೀರಾದ್ರು.

199ನೇ ಬಟಾಲಿಯನ್ ಸಿಆರ್‍ಫಿಎಫ್ ಯೋಧ ಮಹಾದೇವ ಅವರು ಛತ್ತೀಸ್‍ಗಢದಲ್ಲಿ ಸೇವೆ ಸಲ್ಲಿಸುತ್ತಿದ್ರೂ, ಮಕ್ಕಳು – ಮಡದಿಯರೆಲ್ಲಾ ಹೈದ್ರಾಬಾದ್‍ನಲ್ಲಿ ಪೊಲೀಸ್ ವಸತಿ ಗೃಹದಲ್ಲಿ ನೆಲೆಸಿದ್ದಾರೆ. ಸೀಮಂತ ಕಾರ್ಯಕ್ರಮದಲ್ಲಿ ಭಾಗಿಯಾಗಬೇಕಾದೋರು ಈಗ ದುಃಖದ ಕಡಲಲ್ಲಿ ಮುಳಿಗಿದ್ದಾರೆ. ಆದರೆ, ದೇಶಕ್ಕಾಗಿ ಪ್ರಾಣಕೊಟ್ಟಿದ್ದಾರೆ ಹೆಮ್ಮೆ, ಮುಂದಿನ ದಿನಗಳಲ್ಲಿ ಕುಟುಂಬದ ದುಃಖ ಮರೆಸೋದಂತೂ ಸತ್ಯ.

ಮಹಾದೇವ ಹುತಾತ್ಮರಾಗಿರಬಹುದು, ಆದರೆ, ಅವರ ದೇಶ ಸೇವೆ ನಾಡಿನ ಯುವಕರೂ ಸೇರಿದಂತೆ ಎಲ್ಲರಿಗೂ ಸ್ಫೂರ್ತಿಯಾಗಿದೆ. “ಮಹಾದೇವ ಅಮರ್ ರಹೇ, ಅಮರ್ ರಹೇ” ಎಂದು ಶಾಲಾ ಮಕ್ಕಳು ರಾಷ್ಟ್ರ ಧ್ವಜ ಹಿಡಿದು ಕೂಗುತ್ತಿದ್ದ ಘೋಷಣೆ ಇಡೀ ಪರಿಸರದಲ್ಲಿ ಮಾರ್ಧನಿಸುತ್ತಿದ್ದುದು ಇದಕ್ಕೆ ಸಾಕ್ಷಿ. ಪಂಚಭೂತಗಳಲ್ಲಿ ಯೋಧ ಲೀನವಾದರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಯಾದಗಿರಿ: ಕಾಂಗ್ರೆಸ್ ಕಚೇರಿಗೆ ಬೆಂಕಿಯಿಟ್ಟ ದುರುಳರು, ಎಸಿ, ಸೋಫಾ ಬೆಂಕಿಗಾಹುತಿ

ಮನೆ ಬಿಟ್ಟು ಹೋದ ಮಗಳು: ಮನನೊಂದ ಕುಟುಂಬದಿಂದ ಮೂವರು ಆತ್ಮಹತ್ಯೆಗೆ ಶರಣು

ಮನೆಗೆ ಕರೆದುಕೊಂಡು ಹೋಗ್ತೇನೆಂದು ಅಪ್ರಾಪ್ತೆ ಮೇಲೆ ರೇಪ್‌: ಮೇಕಳಿಯ ಹಠಯೋಗಿ ಲೋಕೇಶ್ವರ ಸ್ವಾಮೀಜಿ ಅರೆಸ್ಟ್‌

ಭಯಪಡುವ ಅಗತ್ಯವಿಲ್ಲ: ರಾಜ್ಯದಲ್ಲಿ ಕೋವಿಡ್ ಪ್ರಕರಣಗಳ ಕುರಿತು ಹರಿಯಾಣ ಆರೋಗ್ಯ ಸಚಿವರ ಮಾತು

Covid 19: ಕರ್ನಾಟಕದಲ್ಲಿ ಕೊರೋನಾ ಕೇಸ್ ಹೆಚ್ಚ: ಆರೋಗ್ಯ ಸಚಿವರ ಸೂಚನೆ ಗಮನಿಸಿ

ಮುಂದಿನ ಸುದ್ದಿ
Show comments