Webdunia - Bharat's app for daily news and videos

Install App

ಶಕ್ತಿ ಯೋಜನೆ ಟಿಕೆಟ್ ನೋಡಿ ಮಹಿಳೆಯರಿಗೆ ಶಾಕ್

Webdunia
ಬುಧವಾರ, 30 ಆಗಸ್ಟ್ 2023 (18:54 IST)
ಮಹಿಳೆಯರಿಗೆ ಶಕ್ತಿ ತುಂಬವ ನೆಟ್ಟಿನಲ್ಲಿ ಕಾಂಗ್ರೆಸ್ ಸರ್ಕಾರವು ಶಕ್ತಿ ಯೋಜನೆ ಅಡಿಯಲ್ಲಿ ರಾಜ್ಯದ ಎಲ್ಲಾ ಮಹಿಳೆಯರಿಗೆ ಸರ್ಕಾರಿ ಬಸ್ ನಲ್ಲಿ ಉಚಿತ ಪ್ರಯಾಣ ಘೋಷಣೆ ಮಾಡಿತ್ತು. ಶಕ್ತಿ ಯೋಜನೆಗೆ ಮಹಿಳೆಯರಿಂದ ಎಲ್ಲೆಡೆ ಒಳ್ಳೆಯ ರೆಸ್ಪಾನ್ಸ್ ಸಿಕ್ರೆ, ಇನ್ನು ಹಲವರು ಇದಕ್ಕೆ ತೀವ್ರವಾಗಿ ವಿರೋಧ ವ್ಯಕ್ತಪಡಿಸಿದ್ದರು. ಶಕ್ತಿ ಯೋಜನೆಯಿಂದಾಗಿ ಮಹಿಳೆಯರು ಸರ್ಕಾರಿ ಬಸ್ ಗಳತ್ತ ಮುಖ ಮಾಡಿರುವುದರಿಂದ ಬಸ್ ಗಳ ಕೊರತೆಯಿಂದಾಗಿ ಬಸ್ ಗಳು ತುಂಬಿತುಳುಕುತ್ತವೆ. ಹೀಗಾಗಿ ವೃದ್ಧರು ಮಕ್ಕಳು ಸೇರಿದಂತೆ ಅನೇಕರಿಗೆ ಬಸ್ಗಳಲ್ಲಿ ಸೀಟ್ ಇಲ್ಲದೆ ಬಸ್ ನ ಡೋರ್ ಗಳಲ್ಲಿ ನೇತಾಡಿಕೊಂಡು ಹೋಗುವ ಪರಿಸ್ಥಿತಿ ಎದುರಾಗಿದ್ದು, ಶಕ್ತಿ ಯೋಜನೆ ಬಳಿಕ ಬಸ್ ನಿಂದ್ ಬಿದ್ದು ಹಲವರು ಮೃತಪಟ್ಟಂತಹ ಘಟನೆಗಳು ನಡೆದಿವೆ. ಹೀಗಾಗಿನೇ ಕಳೆದ ತಿಂಗಳು ಲಾ ಕಾಲೇಜ್ ವಿದ್ಯಾರ್ಥಿಗಳು ಶಕ್ತಿ ಯೋಜನೆಯನ್ನ ರದ್ದು ಮಾಡುವಂತೆ ಹೈಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದರು.

ಕೋವಿಡ್ ಬಳಿಕ ಶಕ್ತಿಗೆ ಯೋಜನೆಯಿಂದ ಸಾರಿಗೆ ಇಲಾಖೆಗೂ ಶಕ್ತಿ ಬಂದಂತಾಗಿದೆ. ಆದರೆ ಲಾ ಕಾಲೇಜ್ ವಿದ್ಯಾರ್ಥಿಗಳು ಶಕ್ತಿ ಯೋಜನೆಯನ್ನು ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ್ರು, ಇದರ ಬೆನ್ನಲೆ ಶಕ್ತಿ ಯೋಜನೆಗೆ ಬ್ರೇಕ್ ಬೀಳಲಿದೆ ಎಂಬ ಗಾಳಿ ಸುದ್ದಿ ಕೇಳಿಬಂದಿತ್ತು. ಇನ್ನು ಈ ಬಗ್ಗೆ ಮಹಿಳೆಯರು ಕೂಡ ಸಾಕಷ್ಟು ಗೊಂದಲಕೀಡಾಗಿದ್ರು, ಇದರ ಬಗ್ಗೆ ಕುಡ್ದು ಸಿಎಂ ಸಿದ್ದರಾಮಯ್ಯ, ಹಾಗೂ ಡಿಸಿಎಂ ಡಿಕೆ ಶಿವಕುಮಾರ್, ಪ್ರತಿಕ್ರಿಯೆ ನೀಡಿದ್ದು ಯಾವುದೇ ಕಾರಣಕ್ಕೂ ಶಕ್ತಿ ಯೋಜನೆ ನಿಲ್ಲಿಸುವ ಮಾತೇ ಇಲ್ಲ ಎಂದು ಹೇಳುವ ಮೂಲಕ ಎಲ್ಲಾ ಗೊಂದಲಗಳಿಗೂ ತೇರೆ ಎಳೆದಿದ್ದರು. ಆದರೆ ಇದೀಗ ಶಕ್ತಿ ಯೋಜನೆಗೆ ಮತ್ತೆ ಕಂಟಕ ಎದುರಾಗಿದ್ದು, ಕಳೆದ ತಿಂಗಳು ಲಾ ಕಾಲೇಜ್ ವಿದ್ಯಾರ್ಥಿಗಳು ಶಕ್ತಿ ಯೋಜನೆ ನಿಲ್ಲಿಸುವಂತೆ ಕೋರಿ ಸಲ್ಲಿಸಿದ ಅರ್ಜಿಯನ್ನು  ಇದೆ ಸಪ್ಟಂಬರ್ 9ರಂದು ಹೈಕೋರ್ಟ್ ನಲ್ಲಿ ವಿಚಾರಣೆ ನಡೆಯಲಿದೆ. ಇನ್ನೂ ಸಾರಿಗೆ ಇಲಾಖೆ 9 ನೇ ತಾರೀಕಿಗೆ ಹೈಕೋರ್ಟ್ ನಲ್ಲಿ ನಡೆಯುವ ವಿಚಾರದ ಬಗ್ಗೆ ಪ್ರಯಾಣಿಕರಿಗೆ ನೀಡುವ ಟಿಕೆಟ್ಗಳ ಮೇಲೆ ಪ್ರಿಂಟ್ ಹಾಕಿದ್ದು ಪ್ರಯಾಣಿಕರಲ್ಲಿ ಸಾಕಷ್ಟು ಗೊಂದಲ ಎಡೆಮಾಡಿದೆ. ಇನ್ನು ಟಿಕೆಟ್ ಮೇಲೆ ಏನು ಬರೆದಿದ್ದಾರೆ ಅಂತ ನೋಡೋದಾದ್ರೆ ಸಪ್ಟಂಬರ್ 9ನೇ ತಾರೀಕಿಗೆ ರಾಷ್ಟ್ರೀಯ ಲೋಕ ಅದಾಲತ್ ನಲ್ಲಿ ವ್ಯಾಜ್ಯ ಇತ್ಯಾರ್ಥ ಪಡಿಸಿಕೊಳ್ಳಿ’  ಎಂಬ ಬರವಣಿಗೆ ಬರೆಯುವ ಮೂಲಕ ಸಾರಿಗೆ ಇಲಾಖೆ ಪ್ರಯಾಣಿಕರಲಿ ಅರಿವು ಮೂಡಿಸುವ ಕೆಲಸ ಮಾಡುತ್ತಿದೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹಿಂದೂಗಳಿಗೆ ಯಾತಕ್ಕೋಸ್ಕರ ಅಪಮಾನ ಮಾಡುತ್ತಿದ್ದೀರಿ ಸಿದ್ದರಾಮಯ್ಯನೋರೇ: ವಿಜಯೇಂದ್ರ

DK Shivakumar: ಕೇಂದ್ರ ಚಿನ್ನದ ಬೆಲೆ ಏರಿಕೆ ಮಾಡಿ ಮಹಿಳೆಯರು ಮಾಂಗಲ್ಯ ಕಟ್ಟಿಕೊಳ್ಳಲಾಗದ ಪರಿಸ್ಥಿತಿಯಾಗಿದೆ: ಡಿಕೆ ಶಿವಕುಮಾರ್

ಸಿಎಂ ಕುರ್ಚಿ ಗುದ್ದಾಟದ ನಡುವೆಯೂ ಗುಟ್ಟಾಗಿ ಮಾತುಕತೆ ನಡೆಸಿದ ಸಿಎಂ ಸಿದ್ದರಾಮಯ್ಯ, ಡಿಕೆ ಶಿವಕುಮಾರ್‌

ಸಿಂಹದ ಹಾಗೇ ನಾಯಿಗಳನ್ನು ಸಾಕಿಕೊಂಡಿರುವ ಶ್ವಾನಪ್ರೇಮಿ ಸತೀಶ್‌ಗೆ ಇಡಿ ಶಾಕ್‌, ತನಿಖೆಯಲ್ಲಿ ಗೊತ್ತಾಯ್ತು ಅಸಲಿಯತ್ತು

Karnataka: ಪೋಷಕರ ಸಂದರ್ಶನ ಮಾಡುವಂತಿಲ್ಲ, ಹೆಚ್ಚು ಫೀಸ್ ಕೇಳೋ ಹಾಗಿಲ್ಲ: ಖಾಸಗಿ ಶಾಲೆಗಳಿಗೆ ಹೊಸ ರೂಲ್ಸ್ ಇಲ್ಲಿದೆ

ಮುಂದಿನ ಸುದ್ದಿ
Show comments