Publish Date: Thu, 23 Mar 2023 (15:16 IST)
Updated Date: Thu, 23 Mar 2023 (13:59 IST)
ಮಹಾರಾಷ್ಟ್ರದಲ್ಲಿ ಕರ್ನಾಟಕ ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ಮತ್ತೆ ಅಪಮಾನವಾಗಿದೆ. ಮಹಾರಾಷ್ಟ್ರ ಪರಿಷತ್ ಕಲಾಪದಲ್ಲಿ ಸಿಎಂ ಬೊಮ್ಮಾಯಿಗೆ ಶಿವಸೇನೆ ಉದ್ಧವ್ ಠಾಕ್ರೆ ಬಣದ MLC ಡಾ. ಮನಿಷಾಅಪಮಾನ ಮಾಡಿದ್ದಾರೆ. ಕರ್ನಾಟಕ ಸರ್ಕಾರ ವಿರುದ್ಧ ನಾಲಿಗೆ ಹರಿಬಿಟ್ಟಿದ್ದಾರೆ. ಕರ್ನಾಟಕ ಸರ್ಕಾರ ಹಾಗೂ ಸಿಎಂ ಬೊಮ್ಮಾಯಿರಿಂದ ದಾದಾಗಿರಿ ಹೆಚ್ಚಿದೆ ಮರಾಠಿಗರ ಮೇಲೆ ದಬ್ಬಾಳಿಕೆ ನಡೆಸಲಾಗುತ್ತಿದೆ ಎನ್ನುವ ಮೂಲಕ ಹಗುರವಾಗಿ ಮಾತನಾಡಿದ್ದಾರೆ. ಕರ್ನಾಟಕದ ಗಡಿಭಾಗದಲ್ಲಿರುವ 865 ಹಳ್ಳಿಗಳಿಗೆ 54 ಕೋಟಿ ರೂ. ವೆಚ್ಚದಲ್ಲಿ ಮಹಾರಾಷ್ಟ್ರ ಸರ್ಕಾರ ಆರೋಗ್ಯ ವಿಮೆ ಯೋಜನೆ ಘೋಷಣೆ ಮಾಡಿದೆ. ಈ ಯೋಜನೆ ತಡೆಯಲು ಕ್ರಮ ಕೈಗೊಳ್ಳುತ್ತೇವೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಅವರು ಈ ಹಿಂದೆ ಹೇಳಿದ್ದರು. ಈ ಕುರಿತು ಮಹಾರಾಷ್ಟ್ರ ವಿಧಾನ ಪರಿಷತ್ ಕಲಾಪದಲ್ಲಿ ಚರ್ಚೆ ಮಾಡುವಾಗ ಶಿವಸೇನೆ ಉದ್ಧವ್ ಠಾಕ್ರೆ ಬಣದ MLC ಡಾ. ಮನಿಷಾ ಉದ್ಧಟತನ ಮೆರೆದಿದ್ದಾರೆ. ಕರ್ನಾಟಕ ಸಿಎಂ ಹಾಗೂ ಕರ್ನಾಟಕ ಸರ್ಕಾರದ ಬಗ್ಗೆ ಡಾ.ಮನಿಷಾ ಹಗುರವಾದ ಮಾತುಗಳನ್ನಾಡಿದ್ದಾರೆ.