ನಾಚಿಕೆ ಮಾನ ಮರ್ಯಾದೆ ಇದ್ಯಾ : ಈಶ್ವರಪ್ಪ

Webdunia
ಶನಿವಾರ, 30 ಜುಲೈ 2022 (13:23 IST)
ಶಿವಮೊಗ್ಗ : ಸಿದ್ದರಾಮಯ್ಯ ಅವರಿಗೆ ನಾಚಿಕೆ ಮಾನ, ಮರ್ಯಾದೆ ಇದೆಯಾ ಎಂದು ಹೇಳುವ ಮೂಲಕ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ವಾಗ್ದಾಳಿ ನಡೆಸಿದ್ದಾರೆ.

ಪರಿಹಾರದ ಬಿಕ್ಕಟ್ಟು ಗಲಭೆಗೆ ಕಾರಣವೆಂಬ ಸಿದ್ದರಾಮಯ್ಯನವರ ಹೇಳಿಕೆ ಕುರಿತಂತೆ ಶಿವಮೊಗ್ಗದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಮ್ಮ ರಾಜ್ಯಕ್ಕೆ ಇಂತಹ ಕೆಟ್ಟ ಮುಖ್ಯಮಂತ್ರಿ ಅವರನ್ನು ಕೊಟ್ಟಿದ್ದೇವಲ್ಲ ಅಂತ ಬಹಳ ಬೇಸರ ಆಯಿತು.

ಸಿದ್ದರಾಮಯ್ಯ ಅವರಿಗೆ ನಾಚಿಕೆ ಮಾನ ಮರ್ಯಾದೆ ಇದೆಯಾ? ಪಾಕಿಸ್ತಾನ ಮಾಡಿದ ದಾಳಿಗೆ ಸರ್ಜಿಕಲ್ ಸ್ಟ್ರೈಕ್ ಮಾಡಿ ಭಾರತದ ಸುದ್ದಿಗೆ ಬರದ ರೀತಿ ಮಾಡಿದ್ದು ಮೋದಿ. ದೇಶದ ಮೇಲೆ ಆಘಾತವಾದಾಗ, ವಿಕೋಪವಾದಾಗ ಆರ್ಎಸ್ಎಸ್ ಸ್ವಯಂ ಸೇವಕರು ಶ್ರಮ ಪಟ್ಟಿದ್ದಾರೆ.

ಸ್ವಯಂ ಸೇವಕರ ಬಗ್ಗೆ ಸಿದ್ದರಾಮಯ್ಯ ಅವರಿಗೆ ಏನು ಗೊತ್ತಿಲ್ಲ. ಆರ್ಎಸ್ಎಸ್ ಪಾದದ ಧೂಳಿಗೂ ಸಿದ್ದರಾಮಯ್ಯ ಸಮವಿಲ್ಲ. ದೇಶದ ಜನರ ಕ್ಷಮೆ ಕೇಳಬೇಕು. ರಾಷ್ಟ್ರದ್ರೋಹಿಗಳಿಗೆ ಇದುವರೆಗೂ ರಕ್ಷಣೆ ಕೊಡುತ್ತಾ ಬಂದಿರುವುದು ನೀವು ಎಂದು ಆಕ್ರೋಶ ಹೊರಹಾಕಿದ್ದಾರೆ.

ಒಂದೆರಡು ದಿನ ಆರ್ಎಸ್ಎಸ್ ಶಾಖೆಗೆ ಬನ್ನಿ. ನಾನೇ ನಿಮ್ಮನ್ನು ಶಾಖೆಗೆ ಕರೆದುಕೊಂಡು ಹೋಗುತ್ತೇನೆ. ಅಲ್ಲಿನ ಚಟುವಟಿಕೆ ತಿಳಿದುಕೊಳ್ಳಿ. ಆರ್ಎಸ್ಎಸ್ ಬಗ್ಗೆ ಮಾತನಾಡಿರುವ ನಿಮ್ಮ ನಾಲಿಗೆಯನ್ನು ಮೊದಲು ತೊಳೆದುಕೊಳ್ಳಿ. ನೀವು ಡಿಕೆಶಿ ಸೇರಿಕೊಂಡು ಜಾತೀಯತೆ ತೇಪೆ ಹಚ್ಚಿ ಬಿಟ್ಟಿದ್ದೀರಾ.

ನಿಮ್ಮ ರಾಜಕೀಯ ತೆವಲುಗಳಿಗೆ ಜಾತಿಯನ್ನು ತಂದಿಟ್ಟಿದ್ದೀರಿ. ಕುಡುಕರು ಮಾತನಾಡಿದ ರೀತಿ ಮಾತನಾಡುವುದು ಸರಿಯಲ್ಲ. ಶಾಖೆಗೆ ಬಂದು ಅಲ್ಲಿ ಇಂತಹ ತಪ್ಪಿದೆ. ಅಂತಹ ತಪ್ಪಿದೆ ಅಂದರೆ ನಾನು ಆಗ ಕೇಳುತ್ತೇನೆ ಎಂದು ತಿರುಗೇಟು ನೀಡಿದ್ದಾರೆ. 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಿಹಾರ: ಹಿಜಾಬ್ ಧರಿಸಿ ಬಂದ್ರೆ ಇನ್ಮುಂದೆ ಆಭರಣದ ಅಂಗಡಿಗೆ ಎಂಟ್ರಿಯಿಲ್ಲ, ಯಾಕೆ ಗೊತ್ತಾ

ಕಾಂಗ್ರೆಸ್ ‌ಏಜೆಂಟ್ ರೀತಿ ಪೊಲೀಸರು ಕೆಲಸ ಮಾಡ್ತಿದ್ದಾರೆ: ವಿಜಯೇಂದ್ರ ಕಿಡಿ

ದಿಡೀರನೇ ಇಸ್ರೇಲ್ ಪ್ರಧಾನಿ ನೆತನ್ಯಾಹು ಜತೆ ಮಾತುಕತೆ ನಡೆಸಿದ ಪಿಎಂ ನರೇಂದ್ರ ಮೋದಿ

ಸ್ಥಳೀಯ ಸಂಸ್ಥೆ ಚುನಾವಣೆ ಗೆಲುವು ನಮ್ಮ ಮೊದಲ ಗುರಿ: ಬಿಎಸ್ ಯಡಿಯೂರಪ್ಪ

ಬೆಳಗಾವಿಯಲ್ಲಿ ಇದೆಂಥಾ ದುರಂತ, ಬಾಯ್ಲರ್ ಸ್ಫೋಟಗೊಂಡು ಇಬ್ಬರು ಸಾವು, 6ಮಂದಿ ಗಂಭೀರ

ಮುಂದಿನ ಸುದ್ದಿ
Show comments