Publish Date: Tue, 18 Dec 2018 (15:22 IST)
Updated Date: Tue, 18 Dec 2018 (15:24 IST)
ಹೇಮಾವತಿ ಮೈನರ್ ನಾಲೆ ಒಡೆದು ಕೃಷಿ ಭೂಮಿಗೆ ಅಪಾರ ಪ್ರಮಾಣದಲ್ಲಿ ನೀರು ನುಗ್ಗಿದೆ.
ನೂರಾರು ಎಕರೆ ಬೆಳೆ ಹಾನಿಯಾಗಿದ್ದು, ರೈತರಿಗೆ ಲಕ್ಷಾಂತರ ರೂ. ನಷ್ಟ ಸಂಭವಿಸಿದೆ. ಮಂಡ್ಯ ಜಿಲ್ಲೆಯ ಮಾರ್ಗೋನಹಳ್ಳಿ ಬಳಿಯ ಹೇಮಾವತಿ ನಾಲೆ ಒಡೆದಿದೆ.
ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆಯ ಮಾರ್ಗೋನಹಳ್ಳಿ ಬಳಿ ನೀರಲ್ಲಿ ಮುಳುಗಿದ ಕಟಾವಿಗೆ ಬಂದಿದ್ದ ನೂರಾರು ಎಕರೆ ಭತ್ತದ ಗದ್ದೆಯಿಂದಾಗಿ ಬೆಳೆಗಾರರು ಸಂಕಷ್ಟಕ್ಕೆ ಈಡಾಗುವಂತೆ ಆಗಿದೆ.
ಒಡೆದ ನಾಲೆಯನ್ನು ಸರಿಪಡಿಸಲು ನೀರಾವರಿ ಇಲಾಖೆಯ ಅಧಿಕಾರಿಗಳು ಮುಂದಾಗಿದ್ದಾರೆ. ವ್ಯರ್ಥವಾಗಿ ರಸ್ತೆಯಲ್ಲಿ ಹರಿಯುತ್ತಿರುವ ಕಾಲುವೆ ನೀರನ್ನು ಸ್ಥಗಿತಗೊಳಿಸಲು ಯತ್ನಿಸಲಾಗುತ್ತಿದೆ. ಮಾರ್ಗೋನಹಳ್ಳಿಯ ಶನೇಶ್ವರ ದೇವಸ್ಥಾನಕ್ಕೂ ನಾಲೆಯ ನೀರು ನುಗ್ಗಿದೆ.