Select Your Language

Notifications

webdunia
webdunia
webdunia
webdunia

ಶಂಕರ್ ಬಿದರಿ ನಾಳೆ ಬಿಜೆಪಿ ಮಡಿಲಿಗೆ, ಗೂಳಿಹಟ್ಟಿ ಕಾಂಗ್ರೆಸ್‌ ಸೇರುವ ಸಾಧ್ಯತೆ

ಶಂಕರ್ ಬಿದರಿ ನಾಳೆ ಬಿಜೆಪಿ ಮಡಿಲಿಗೆ,  ಗೂಳಿಹಟ್ಟಿ ಕಾಂಗ್ರೆಸ್‌ ಸೇರುವ ಸಾಧ್ಯತೆ
ಬೆಂಗಳೂರು , ಮಂಗಳವಾರ, 19 ಆಗಸ್ಟ್ 2014 (17:24 IST)
ನಿವೃತ್ತ ಡಿಜಿಪಿ ಶಂಕರ್ ಬಿದರಿ ನಾಳೆ ಬಿಜೆಪಿಗೆ ಸೇರ್ಪಡೆಯಾಗಲಿದ್ದಾರೆ. ಬಿಜೆಪಿಯ ಬೆಂಗಳೂರು ಕಚೇರಿಯಲ್ಲಿ ಪ್ರಹ್ಲಾದ್ ಜೋಷಿ ನೇತೃತ್ವದಲ್ಲಿ ಶಂಕರ್ ಬಿದರಿ ಸೇರ್ಪಡೆಯಾಗಲಿದ್ದಾರೆ.

ಶಂಕರ್ ಬಿದರಿ ಅವರು ಕಾಂಗ್ರೆಸ್ ಮತ್ತು ಸಮಾಜವಾದಿ ಪಕ್ಷದಲ್ಲಿ ಸೂಕ್ತ ಸ್ಥಾನಮಾನ ಸಿಕ್ಕದಿದ್ದರಿಂದ ಅವುಗಳನ್ನು ತೊರೆದು ತಮ್ಮದೇ ಜನಶಕ್ತಿ ಪಕ್ಷವನ್ನು ಸ್ಥಾಪಿಸಿದ್ದರು. ಆದರೆ ಈಗ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗಲಿರುವ ಮೂಲಕ ರಾಜಕೀಯದಲ್ಲಿ ಮಹತ್ವದ ಹೆಜ್ಜೆ ಇರಿಸಿದ್ದಾರೆ. 
 
ಈ ನಡುವೆ  ಶಿಕಾರಿಪುರ ವಿಧಾನಸಭೆ ಕ್ಷೇತ್ರದ ಕಣದಿಂದ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದ ಗೂಳಿಹಟ್ಟಿ ಶೇಖರ್ ಹಿಂದೆ ಸರಿದಿದ್ದಾರೆ. ತಾವು ಚುನಾವಣೆ ನಂತರ ಕಾಂಗ್ರೆಸ್ ಪಕ್ಷಕ್ಕೆ ಸೇರುವುದು ಖಚಿತ ಎಂದು ಗೂಳಿಹಟ್ಟಿ ಶೇಖರ್ ಇಂಗಿತ ನೀಡಿದ್ದಾರೆ. ತಾವು ರಾಜಕೀಯವಾಗಿ ತಪ್ಪು ನಿರ್ಧಾರ ಕೈಗೊಂಡಿದ್ದು ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಬೆಂಬಲ ನೀಡುತ್ತೇನೆ ಎಂದು ಶಿವಮೊಗ್ಗದಲ್ಲಿ ಗೂಳಿಹಟ್ಟಿ ಶೇಖರ್ ಹೇಳಿದ್ದಾರೆ. 

Share this Story:

Follow Webdunia kannada