Webdunia - Bharat's app for daily news and videos

Install App

ಯಾವುದೇ ಕಾರಣಕ್ಕೂ ಚುನಾವಣೆಯಿಂದ ಹಿಂದೆ ಸರಿಯಲ್ಲ.- ಬಿಜೆಪಿ ನಾಯಕರಿಗೆ ಶರತ್ ಬಚ್ಚೇಗೌಡ ಸವಾಲು

Webdunia
ಗುರುವಾರ, 31 ಅಕ್ಟೋಬರ್ 2019 (11:35 IST)
ಹೊಸಕೋಟೆ: ನಾನು ಯಾವ ಒತ್ತಡಕ್ಕೂ ಜಗ್ಗುವುದಿಲ್ಲ ಬಗ್ಗೊದಿಲ್ಲ ಬಿಜೆಪಿ ನಾಯಕರಿಗೆ ಶರತ್ ಬಚ್ಚೇಗೌಡ ಪರೋಕ್ಷವಾಗಿ ಎಚ್ಚರಿಕೆ ನೀಡಿದ್ದಾರೆ.




ನಂಗೆ ಮೋಸ ಆಗ್ತಿದೆ ಅಂತಾ ಯಾರ್ಯಾರೋ ಕಣ್ಣೀರು ಹಾಕಿದ್ದಾರಂತೆ. ಅವರಿಗೆಲ್ಲಾ ಏನು ಮೋಸ ಆಗಿದೆಯೋ ನನಗೆ ಗೊತ್ತಿಲ್ಲ. ಹೊಸಕೋಟೆ ಇತಿಹಾಸದಲ್ಲೇ ಇಲ್ಲಿಯವರೆಗೂ ಬೈ ಎಲೆಕ್ಷನ್ ನಡೆದಿಲ್ಲ. ಶರತ್ ಮೃದು ಸ್ವಭಾವದವನು, ಸಾಫ್ಟ್ ಆಗಿರ್ತಾನೆ . ಒತ್ತಡ, ಭಯಕ್ಕೆ ಮಣಿದು ಚುನಾವಣೆಯಿಂದ ಹಿಂದೆ ಸರಿಯುತ್ತಾನೆ ಹೀಗೆಲ್ಲಾ ನನ್ನ ಬಗ್ಗೆ ಕೆಲ ಜನರು ಅಪಪ್ರಚಾರ ಮಾಡುತ್ತಿದ್ದಾರೆ. ಆದ್ರೆ ಯಾವುದೇ ಕಾರಣಕ್ಕೂ ಚುನಾವಣೆಯಿಂದ ಹಿಂದೆ ಸರಿಯಲ್ಲ. ತಾಲೂಕಿನ ಸ್ವಾಭಿಮಾನಕ್ಕಾಗಿ, ಜನಕ್ಕೆ ನೀಡಿರೋ ಮಾತಿಗಾಗಿ ಚುನಾವಣೆಯಿಂದ ನಾನು ಹಿಂದೆ ಸರಿಯೋ ಪ್ರಶ್ನೆಯೇ ಇಲ್ಲ ಎಂದು ಶರತ್ ಬಚ್ಚೇಗೌಡ ಸ್ಪಷ್ಟವಾಗಿ ಹೇಳಿದ್ದಾರೆ.


ಬಚ್ಚೇಗೌಡರು ನಾನು ತಂದೆ ಮಕ್ಕಳಾದ್ರೂ ನಾವು ಒಟ್ಟಾಗಿ ಇರ್ತಿಲ್ಲ. ತಂದೆ ಬಚ್ಚೇಗೌಡರಿಗೆ ತೊಂದರೆ ಮಾಡ್ತಾರೆಂದು ಪ್ರಚಾರ ಮಾಡಿದ್ದಾರೆ. ನಾನು ಚುನಾವಣೆಗೆ ನಿಂತ್ರೆ ತಂದೆಗೆ ತೊಂದರೆಯಾಗುತ್ತೆ ಅಂತಿದ್ದಾರೆ. ತಂದೆಗೆ ತೊಂದರೆಯಾಗಬಾರದು ಅಂತ ಮನೆ ಬಿಟ್ಟು ಬಂದಿದ್ದೀನಿ. ಚುನಾವಣಾ ಪ್ರಚಾರಕ್ಕೆ ತಂದೆ ಬರದ ಕಾರಣ ನೀವೇ ನನ್ನ ತಂದೆ ತಾಯಿಯಾಗಿ ಪ್ರಚಾರ ಮಾಡಿ ಬೆಂಬಲ ನೀಡಿ ಎಂದು ಅವರು ಕಾರ್ಯಕರ್ತರಲ್ಲಿ ಮನವಿ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments