Webdunia - Bharat's app for daily news and videos

Install App

ಡಿಸಿ ಕಚೇರಿಗೆ ಜನರೇ ಬರಬಾರದು ಎಂದ ಜಿಲ್ಲಾಧಿಕಾರಿ

Webdunia
ಶುಕ್ರವಾರ, 10 ಏಪ್ರಿಲ್ 2020 (13:55 IST)
ಜನರು ಡಿಸಿ ಕಚೇರಿಗೆ ಅನಗತ್ಯವಾಗಿ ಬರಲೇಬಾರದು ಎಂದು ಜಿಲ್ಲಾಧಿಕಾರಿ ಖಡಕ್ ಎಚ್ಚರಿಕೆ ನೀಡಿದ್ದಾರೆ.

ಕೋವಿಡ್ -19 ಹಿನ್ನೆಲೆಯಲ್ಲಿ ಉಡುಪಿ ಜಿಲ್ಲೆಯಾದ್ಯಂತ ಸಾರ್ವಜನಿಕರು ಹೊರಗಡೆ ಸಂಚರಿಸುವುದುನ್ನು ನಿಷೇಧಿಸಲಾಗಿದೆ. ಆದರೆ ಸಣ್ಣಪುಟ್ಟ ಕಾರಣಕ್ಕೆ ಅನುಮತಿ ಪತ್ರ ಕೋರಿ ಜಿಲ್ಲೆಯಲ್ಲಿ ನಿಷೇದಾಜ್ಞೆ ಜಾರಿಯಲ್ಲಿದ್ದರೂ ಪ್ರತಿದಿನ ಜಿಲ್ಲಾಧಿಕಾರಿ ಕಚೇರಿಗೆ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಬರುತ್ತಿರುವುದು ಸರ್ಕಾರದ ಅದೇಶದ ಉಲ್ಲಂಘನೆಯಾಗಿದೆ.

 ಆದ್ದರಿಂದ ಸಾರ್ವಜನಿಕರು ಉಡುಪಿ ಜಿಲ್ಲಾಧಿಕಾರಿ ಕಚೇರಿಯ ಮುಂಭಾಗದಲ್ಲಿ ಅನಾವಶ್ಯಕವಾಗಿ ಅನುಮತಿ ಪಡೆಯಲು ಏಪ್ರಿಲ್ 14 ರ ವರೆಗೆ ಬರುವುದನ್ನು ನಿಷೇಧಿಸಲಾಗಿದೆ. ತುರ್ತು ವೈದ್ಯಕೀಯ ಚಿಕಿತ್ಸೆ ನೆಲೆಯಲ್ಲಿ, ಬೇರೆ ಜಿಲ್ಲೆಯ ಆಸ್ಪತ್ರೆಗಳಿಗೆ ತೆರಳಲು, ವೈದ್ಯಕೀಯ ದೃಢಿಕೃತಪತ್ರದೊಂದಿಗೆ ಸಾರ್ವಜನಿಕರಿಗೆ ಅನುಮತಿ ಪಡೆಯಲು ಮಾತ್ರ ಅವಕಾಶ ನೀಡಲಾಗಿದೆ. ಇದರ ಹೊರತು ಬೇರೆ ಯಾವುದೇ ಅನುಮತಿಗಾಗಿ ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿದಂತೆ ಜಿಲ್ಲಾಧಿಕಾರಿ ಜಿ.ಜಗದೀಶ್ ತಿಳಿಸಿದ್ದಾರೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments