Publish Date: Sun, 12 Jan 2020 (21:48 IST)
Updated Date: Sun, 12 Jan 2020 (21:50 IST)
ಕಾಲೇಜ್ ವಿದ್ಯಾರ್ಥಿನಿಯೊಬ್ಬಳು ಡೆತ್ ನೋಟ್ ಬರೆದಿಟ್ಟು ಮಾಡಬಾರದ ಕೆಟ್ಟ ಕೆಲಸ ಮಾಡಿದ್ದಾಳೆ.
ಕಲಬುರಗಿ ನಗರದ ಬ್ರಹ್ಮಪುರದ ವೆಂಕವ್ವನ ಮಾರ್ಕೆಟ್ ಹತ್ತಿರದ ಮನೆಯೊಂದರಲ್ಲಿ ವಿದ್ಯಾರ್ಥಿನಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾಳೆ.
20 ವರ್ಷದ ಬಿಎಸ್ಸಿ ಎರಡನೇ ವರ್ಷದಲ್ಲಿ ಓದುತ್ತಿದ್ದ ಯುವತಿ ಶ್ವೇತಾ ರಾಜೇಂದ್ರ ಮಂಗಾಣೆ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
ನನ್ನ ಸಾವಿಗೆ ನಾನೇ ಕಾರಣ. ಜೀವನದಲ್ಲಿ ಜಿಗುಪ್ಸೆ ಆಗಿದೆ. ಹೀಗಾಗಿ ನೊಂದು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವೆ ಅಂತಾ ಡೆತ್ ನೋಟ್ ಬರೆದಿಟ್ಟಿದ್ದಾಳೆ ಅಂತ ಪೊಲೀಸರು ತಿಳಿಸಿದ್ದಾರೆ. ರಾಘವೇಂದ್ರ ನಗರ ಠಾಣೆಯಲ್ಲಿ ಕೇಸ್ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.