Webdunia - Bharat's app for daily news and videos

Install App

ಶೀಲಹಳ್ಳಿ ಸೇತುವೆ ಮುಳುಗಡೆ

Webdunia
ಶುಕ್ರವಾರ, 23 ಜುಲೈ 2021 (19:02 IST)
ರಾಯಚೂರು ಜಿಲ್ಲೆಯಲ್ಲಿ ಪ್ರವಾಹ ಭೀತಿ ಶುರುವಾಗಿದ್ದು, ಶೀಲಹಳ್ಳಿ‌ ಬ್ರಿಡ್ಜ್ ಮುಳಗಡೆಯಾಗಿದೆ. ನಾರಾಯಣಪುರ(ಬಸವಸಾಗರ) ಜಲಾಶಯದಿಂದ ಹೆಚ್ಚುವರಿ ಲಕ್ಷಾಂತರ ಕ್ಯೂಸೆಕ್ಸ್ ನೀರನ್ನ ಕೃಷ್ಣ ನದಿಗೆ ಹರಿದು ಬೀಡಲಾಗಿದೆ. ಇಂದು ಜಲಾಶಯದಿಂದ ೨೯ ಕ್ರಾಸ್ ಗಳಿಂದ ೧.೯೮ ಲಕ್ಷ ಕ್ಯೂಸೆಕ್ಸ್ ನೀರಿನ್ನ ನದಿಗೆ ಹರಿದು ಬಿಡಲಾಗಿದೆ. ಇದರಿಂದಾಗಿ ಜಿಲ್ಲೆಯ ಲಿಂಗಸೂಗೂರು ತಾಲೂಕಿನ ಶೀಲಹಳ್ಳಿ ಬ್ರಿಡ್ಜ್ ಜಲಾವೃತ್ತಗೊಂಡು ಸಂಚಾರ ಸ್ಥಗೀತವಾಗಿದ್ದು, ನಾನಾ ನಡುಗಡ್ಡೆ ಪ್ರದೇಶಗಳಿಗೆ ಸಂಪರ್ಕ ಕಡಿತವಾಗಿದೆ. 
ನಡುಗಡ್ಡೆ ಗ್ರಾಮಗಳಾದ ಕಡದರಗಡ್ಡಿ, ಯರಗೋಡಿ, ಯಳಗುಂದಿ, ಹಂಚಿನಾಳ ಸೇರಿದಂತೆ ನಡುಗಡ್ಡೆ ಪ್ರದೇಶಗಳ ನಿವಾಸಿಗಳಿಗೆ ಜನತೆ ಬಾಹ್ಯ ಸಂಪರ್ಕ ಕಳೆದುಕೊಂಡಿದ್ದಾರೆ. ಕೃಷಿ ಚಟುವಟಿಕೆ, ತೋಟಗಾರಿಕೆ ಕೆಲಸಕ್ಕೆ ಹೋಗುವ ಕೂಲಿಕಾರ್ಮಿಕರು ಸೇತುವೆ ಮುಳುಗಡೆ ಆಗಿದ್ದರಿಂದ ಮನೆಯತ್ತ ವಾಪಸ್ ತೆರಳಿದರು. ಮುಂಜಾಗ್ರತ ಕ್ರಮವಾಗಿ ಪೊಲೀಸ್ ಇಲಾಖೆ  ಸೇತುವೆ ಬಳಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಕಲ್ಪಿಸಿ, ಸಂಚಾರವನ್ನ ಬಂದ್ ಗೊಳಿಸಲಾಗಿದೆ. ಕೃಷ್ಣಾ ನದಿ ತೀರದಲ್ಲಿ ಬರುವ ಜಿಲ್ಲೆಯ ಲಿಂಗಸೂಗೂರು, ದೇವದುರ್ಗ, ರಾಯಚೂರು ತಾಲೂಕಿನ ಗ್ರಾಮಗಳಿಗೆ ನದಿಯ ತೀರಕ್ಕೆ ಜನ-ಜಾನುವಾರು ತೆರಳದಂತೆ ಜಿಲ್ಲಾಡಳಿತ ಸಂದೇಶ ನಡೆಸಿದ್ದು, ‌ಪ್ರವಾಹವನ್ನು‌ ನಿಭಾಯಿಸಲು ಅಧಿಕಾರಿಗಳನ್ನ‌, ಸಿಬ್ಬಂದಿಗಳು ನಿಯೋಜನೆ ಮಾಡಲಾಗಿದೆ. ಸದ್ಯ ೧.೯೮ ಲಕ್ಷ ಕ್ಯೂಸೆಕ್ಸ್ ನೀರು ಬಿಟ್ಟಿದ್ದು, ಇನ್ನೂ ಹೆಚ್ಚಳವಾದರೆ ದೇವದುರ್ಗ ತಾಲೂಕಿನ ಹೂವಿನಹೆಡಗಿ ಬ್ರಿಡ್ಜ್ ಮುಳುಗುವ ಸಾಧ್ಯತೆಯಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments