ಶೆಟ್ಟರ್ ಅರ್ಥ ಮಾಡಿಕೊಳ್ಳಲು ಆಗಲಿಲ್ಲ, ಫೇಲ್ ಆದೆ : ಪ್ರಹ್ಲಾದ್ ಜೋಶಿ

Webdunia
ಗುರುವಾರ, 27 ಏಪ್ರಿಲ್ 2023 (10:14 IST)
ಬೆಂಗಳೂರು : ಜಗದೀಶ್ ಶೆಟ್ಟರ್ ಅವರನ್ನು ಅರ್ಥ ಮಾಡಿಕೊಳ್ಳಲು ಸಾಧ್ಯವಾಗಲಿಲ್ಲ. ನಾನು ಕರ್ನಾಟಕದ ರಾಜಕಾರಣಕ್ಕೆ ಬರುವುದಿಲ್ಲ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಖಾತೆಯ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ.
 
ಪಬ್ಲಿಕ್ ಟಿವಿ ಮುಖ್ಯಸ್ಥ ಎಚ್ಆರ್ ರಂಗನಾಥ್ ಜೊತೆ ಸಂದರ್ಶನದಲ್ಲಿ ಮಾತನಾಡಿದ ಅವರು, ನಾನು ಪ್ರಧಾನಿ ನರೇಂದ್ರ ಮೋದಿ ಕೆಳಗೆ ಕೆಲಸ ಮಾಡುವುದಕ್ಕೆ ಖುಷಿ ಇದೆ. ಯಾವುದೇ ಕಾರಣಕ್ಕೂ ರಾಜ್ಯ ರಾಜಕೀಯಕ್ಕೆ ಬರುವುದಿಲ್ಲ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಮಿತ್ರ ಶೆಟ್ಟರ್ ಅವರನ್ನು ಮನವೊಲಿಸಲು ಯಾಕೆ ಸಾಧ್ಯವಾಗಿಲ್ಲ ಎಂಬ ಪ್ರಶ್ನೆಗೆ, ನಾವು ಬಹಳಷ್ಟು ಪ್ರಯತ್ನ ಪಟ್ಟೆವು. ಆದರೆ ಅವರು ಈ ಬಾರಿ ಚುನಾವಣೆಗೆ ನಿಲ್ಲಲೇಬೇಕು ಎಂದು ಹಠ ಹಿಡಿದಿದ್ದರು. ಯಾಕೆ ಅಷ್ಟೊಂದು ಹಠ ಹಿಡಿದಿದ್ದಾರೆ ಎಂಬುದನ್ನು ತಿಳಿಯಲು ನನಗೆ ಸಾಧ್ಯವಾಗಲಿಲ್ಲ ಎಂದು ಉತ್ತರಿಸಿದರು. 

ಶೆಟ್ಟರ್ ಈಗಲೂ ನನ್ನ ಒಳ್ಳೆಯ ಸ್ನೇಹಿತ. ರಾಜಕೀಯವಾಗಿ ಗೆಳೆಯನನ್ನು ಕಳೆದುಕೊಂಡಿದ್ದೇನೆ. ಆದರೆ ಒಂದು ದಿನ ಶೆಟ್ಟರ್ ತಮ್ಮ ನಿರ್ಧಾರಕ್ಕೆ ಪಶ್ಚಾತ್ತಾಪ ಪಡುತ್ತಾರೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಹೋದ್ಯೋಗಿಯೊಂದಿಗಿನ ಆಫೇರ್‌ನಿಂದ 150 ಕೋಟಿ ಸಂಬಳದ ಕೆಲಸ ಕಳೆದುಕೊಂಡ ವ್ಯಕ್ತಿ

ಡಿಕೆಶಿ ಶಕ್ತಿಪ್ರದರ್ಶನದ ಬೆನ್ನಲ್ಲೇ ನನ್ನದು ಕಾಂಗ್ರೆಸ್ ಬಣ ಎಂದ ರಾಮಲಿಂಗಾ ರೆಡ್ಡಿ

Bengaluru Rains: ಬೆಂಗಳೂರಿನಲ್ಲಿ ದಿಡೀರ್ ಭಾರೀ ಮಳೆ

ಕೃಷಿ ಸಚಿವರು ಡೆಲ್ಲಿಗೆ ಬೇರೆ ಕೆಲಸಕ್ಕೆ ಹೋಗಿದ್ದಾರೆ ಬಿಡಯ್ಯಾ: ಮಾಧ್ಯಮಗಳ ಮೇಲೆ ಗರಂ ಆದ ಸಿಎಂ

ದೆಹಲಿಗೆ ಹೋದ ಶಾಸಕರಿಗೆ ಖುದ್ದು ಫೋನ್ ಮಾಡಿದ ಸಿಎಂ ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments