Select Your Language

Notifications

webdunia
webdunia
webdunia
webdunia

ಸಿಲಿಕಾನ್ ಸಿಟಿಯನ್ನು ಕ್ರೈಂ ಸಿಟಿಯನ್ನಾಗಿಸಿದ ರಾಜ್ಯ ಸರ್ಕಾರ- ಶೆಟ್ಟರ್

ಸಿಲಿಕಾನ್ ಸಿಟಿಯನ್ನು ಕ್ರೈಂ ಸಿಟಿಯನ್ನಾಗಿಸಿದ ರಾಜ್ಯ ಸರ್ಕಾರ- ಶೆಟ್ಟರ್
ಬೆಂಗಳೂರು , ಮಂಗಳವಾರ, 9 ಜನವರಿ 2018 (16:05 IST)

ರಾಜ್ಯಸರ್ಕಾರದ ಆಡಳಿತದ ವೈಫಲ್ಯದಿಂದ ಉದ್ಯಾನನಗರಿ, ಸಿಲಿಕಾನ್ ಸಿಟಿಯಾಗಿದ್ದ ಬೆಂಗಳೂರು ಕ್ರೈಂ ಸಿಟಿಯಾಗಿ ಮಾರ್ಪಟ್ಟಿದೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಜಗದೀಶ್ ಶೆಟ್ಟರ್ ಆಪಾದಿಸಿದ್ದಾರೆ.

ಎನ್ಸಿಆರ್ಬಿ ಪ್ರಕಾರ ಅಪಹರಣ, ರೇಪ್ ಪ್ರಕರಣಗಳಲ್ಲಿ ಬೆಂಗಳೂರು ರಾಷ್ಟ್ರದಲ್ಲೇ ಮೂರನೇ ಸ್ಥಾನದಲ್ಲಿದೆ. ಕೊಲೆ ಪ್ರಕರಣಗಳಲ್ಲಿ ದೇಶದಲ್ಲೇ 2ನೆ ಸ್ಥಾನ ಪಡೆದಿದೆ. ಅತಿಹೆಚ್ಚು ಅಪರಾಧ ಪ್ರಕರಣಗಳು ಬೆಂಗಳೂರಲ್ಲಿ ದಾಖಲಾಗುತ್ತಿವೆ ಎಂದು ತಿಳಿಸಿದ್ದಾರೆ.

ಕರಾವಳಿಯಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ. ರಾಜ್ಯಸರ್ಕಾರ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುವಲ್ಲಿ ವಿಫಲವಾಗಿದ್ದು, ಗುಪ್ತಚರ ಇಲಾಖೆಯ ವೈಫಲ್ಯ ಎದ್ದು ಕಾಣುತ್ತಿದೆ ಎಂದು ಟೀಕಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.


Share this Story:

Follow Webdunia kannada

ಮುಂದಿನ ಸುದ್ದಿ

ಏಯ್ ಅಧ್ಯಕ್ಷಾ, ಏಯ್ ಚಮಚಾ ನಿಂತ್ಕೊಳ್ಳೋ: ಪರಮೇಶ್ವರ್‌ಗೆ ಅವಾಜ್ ಹಾಕಿದ ವೈಜಿನಾಥ್ ಪಾಟೀಲ್