ಧಾರವಾಡದ ಬಿಜೆಪಿ ಸಂಸದ ಪ್ರಹ್ಲಾದ್ ಜೋಷಿ ಮತ್ತು ಬಿಜೆಪಿ ಮುಖಂಡ ಜಗದೀಶ್ ಶೆಟ್ಟರ್ ಧಾರವಾಡ ಡಿಸಿ ಕಚೇರಿಗೆ ನುಗ್ಗಲು ಯತ್ನಿಸಿದಾಗ ಪೊಲೀಸರು ವಶಕ್ಕೆ ತೆಗೆದುಕೊಂಡರು. ಹುಬ್ಬಳ್ಳಿ ಜಿಪಂ ಬಿಜೆಪಿ ಅಭ್ಯರ್ಥಿ ಯೋಗೀಶ್ ಗೌಡ ಅವರ ಬಿಡುಗಡೆಗೆ ಯತ್ನಿಸಿ ಜಗದೀಶ್ ಶೆಟ್ಟರ್ ಮತ್ತು ಪ್ರಹ್ಲಾದ್ ಜೋಷಿ ನೇತೃತ್ವದಲ್ಲಿ ಪ್ರತಿಭಟನೆ ನಡೆಸುತ್ತಿದ್ದರು.
ಈ ಸಂದರ್ಭದಲ್ಲಿ ಶೆಟ್ಟರ್ ಮತ್ತು ಜೋಷಿ ಡಿಸಿ ಕಚೇರಿಗೆ ನುಗ್ಗಲು ಯತ್ನಿಸಿದಾಗ ಪೊಲೀಸರು ಅವರನ್ನು ಮುಂಜಾಗ್ರತಾ ಕ್ರಮವಾಗಿ ಬಂಧಿಸಿ ಕರೆದೊಯ್ದರು. ಉದ್ರಿಕ್ತ ಪ್ರತಿಭಟನೆಕಾರರು ಪೊಲೀಸ್ ವಾಹನದ ಗಾಜುಗಳನ್ನು ಪುಡಿಪುಡಿ ಮಾಡಿದ್ದು, ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಹರಸಾಹಸ ಮಾಡಿದರು.
ಪೊಲೀಸ್ ಅಧಿಕಾರಿಯ ಕರ್ತವ್ಯಕ್ಕೆ ಅಡ್ಡಿ ಪಡಿಸಿದ್ದಾರೆ ಎಂಬ ಆರೋಪದ ಮೇಲೆ ತಾಲೂಕಿನ ಹೆಬ್ಬಳ್ಳಿ ಜಿಪಂ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಯೋಗೀಶ್ ಗೌಡ ಅವರನ್ನು ಬಂಧಿಸಿ 15 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿತ್ತು.