Webdunia - Bharat's app for daily news and videos

Install App

ತೃತೀಯರಂಗ ನಾಯಕತ್ವಕ್ಕೆ ಯಾರೂ ಒಪ್ಪಿಕೊಳ್ಳುವುದಿಲ್ಲ ಎಂದ ಶೆಟ್ಟರ್

Webdunia
ಸೋಮವಾರ, 23 ಜುಲೈ 2018 (15:13 IST)
ತೃತೀಯರಂಗದಲ್ಲಿ ಅವರಲ್ಲೇ ಒಗ್ಗಟ್ಟಿಲ್ಲ. ತೃತೀಯರಂಗ ನಾಯಕತ್ವಕ್ಕೆಯಾರೂ ಒಪ್ಪಿಕೊಳ್ಳುವುದಿಲ್ಲ. ಮತ್ತೊಮ್ಮೆ ನರೇಂದ್ರ ಮೋದಿಯವರೇ ಪ್ರಧಾನಿಯಾಗುವುದು ಖಚಿತ ಎಂದು ಬಿಜೆಪಿಯ ಮುಖಂಡ ಹಾಗೂ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಹೇಳಿದ್ದಾರೆ.

ರಾಹುಲ್ ಗಾಂಧಿಯವರನ್ನು ಪ್ರಧಾನ ಮಂತ್ರಿಯಾಗಿ ಮಾಡಲು ಸಾಧ್ಯವಿಲ್ಲ. ರಾಹುಲ್ ಅವರನ್ನ ಪ್ರಧಾನಿಯಾಗಿ ಮಾಡಲಿದ್ದೇವೆ ಎಂದು ಬಹಿರಂಗವಾಗಿ ಸ್ಪಷ್ಟಪಡಿಸಲಿ ಎಂದು ಹುಬ್ಬಳ್ಳಿಯಲ್ಲಿ ಮಾಜಿ ಸಿಎಂ ಜಗದೀಶ ಶೆಟ್ಟರ್ ಸವಾಲು ಹಾಕಿದ್ದಾರೆ. ರಾಹುಲ್ ಗಾಂಧೀ ಪ್ರಧಾನಿಯಾಗುವ ಕನಸು ಯಶಸ್ವಿಯಾಗಲುಸಾಧ್ಯವಿಲ್ಲ. ಮೋದಿಯವರ ನಡೆ ಹಾಗೂ ಅವರ ಅಭಿವೃದ್ದಿಯೇ ಮುಂದಿನ ಚುನಾವಣೆಗೆ ಸಹಕಾರಿಯಾಗಲಿದೆ. ನರೇಂದ್ರ ಮೋದಿಯವರೇ ಮುಂದಿನ ಪ್ರಧಾನಿಯಾಗಿ ಮುಂದುವರೆಯಲಿದ್ದಾರೆ ಎಂದಿದ್ದಾರೆ.

ಬಜೆಟ್ ಪ್ರತಿ ಬಿಡುಗಡೆ ಮಾಡಲಿ:
ಸಿಎಂ ಹೆಚ್.ಡಿ.ಕುಮಾರಸ್ವಾಮಿಯವರು ಬಜೆಟ್ ನಲ್ಲಿ 55 ಸಾವಿರ ಕೋಟಿ ಬಿಡುಗಡೆ ಮಾಡಿರುವುದನ್ನು ಅಂಕಿಸಂಖ್ಯೆಯ ಮೂಲಕ ಸ್ಪಷ್ಟಪಡಿಸಲಿ.
ಯಾವ ಯಾವ ಇಲಾಖೆಗೆ ಬಿಡುಗಡೆ ಮಾಡಿದ್ದಾರೆ ಎಂಬುದನ್ನ ಸ್ಪಷ್ಟಪಡಿಸಬೇಕು. ಮುಖ್ಯಮಂತ್ರಿಗಳು ಬಜೆಟ್ ಪ್ರತಿ ಶೀಘ್ರವೇ ಬಿಡುಗಡೆ ಮಾಡಲಿ.
ಬಜೆಟ್ ಗೆ ಸಂಬಂಧಿಸಿದಂತೆ ಬಹಿರಂಗ ಚರ್ಚೆಗೆ ಸಿದ್ಧ ಎಂದಿರುವುದರಲ್ಲಿ ಅರ್ಥವೇ ಇಲ್ಲ. ರಾಜ್ಯದ 50 ಹೊಸ ತಾಲೂಕುಗಳಲ್ಲಿ 38 ತಾಲೂಕುಗಳು ಉತ್ತರ ಕರ್ನಾಟಕದಲ್ಲಿವೆ. ಪ್ರತಿ ತಾಲೂಕಿಗೆ ಕನಿಷ್ಟ 5 ಕೋಟಿ ಅನುದಾನ ಬಿಡುಗಡೆ ಮಾಡಬೇಕು ಎಂದು ಹುಬ್ಬಳ್ಳಿಯಲ್ಲಿ ಮಾಜಿ ಸಿಎಂ ಆಗ್ರಹಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಈ ವಾರದ ಹವಾಮಾನ ಬದಲಾವಣೆಯನ್ನು ತಪ್ಪದೇ ಗಮನಿಸಿ

Viral Video: ಜಗಳ ಮಾಡ್ತೀಯಾ ಅಂತ ಪತ್ನಿಯನ್ನು ಬಾಲ್ಕನಿಗೇ ನೇತು ಹಾಕಿದ ಗಂಡ

ಕೇದಾರನಾಥಗೆ ಪ್ರಯಾಣಬೆಳೆಸುವವರು ಈ ಸುದ್ದಿಯನ್ನು ಮಿಸ್ ಮಾಡದೇ ಓದಲೇ ಬೇಕು

ಇಸ್ರೇಲ್‌- ಇರಾನ್ ಮಧ್ಯೆ ಹೆಚ್ಚಿದ ಉದ್ವಿಗ್ನತೆ: ಇರಾನ್‌ನಲ್ಲಿ ಭಾರತೀಯರ ಸುರಕ್ಷತೆಗೆ ಸಹಾಯವಾಣಿ ಬಿಡುಗಡೆ

ತಿರುವನಂತಪುರಂನಲ್ಲಿ ತುರ್ತು ಭೂಸ್ಪರ್ಶವಾದ ಬ್ರಿಟಿಷ್ ಫೈಟರ್ ಜೆಟ್‌

ಮುಂದಿನ ಸುದ್ದಿ
Show comments