Publish Date: Wed, 15 Jan 2020 (10:06 IST)
Updated Date: Wed, 15 Jan 2020 (10:07 IST)
ಬೆಂಗಳೂರು : ದೆಹಲಿಯ ಕೆಂಪುಕೋಟೆ ಬಳಿ ಗಣರಾಜ್ಯೋತ್ಸವ ಆಚರಣೆ ಮಾಡುವ ರೀತಿಯಂತೆ ಸ್ವಾತಂತ್ರ್ಯ ದಿನಾಚರಣೆ ಹಾಗೂ ಗಣರಾಜ್ಯೋತ್ಸವ ಕಾರ್ಯಕ್ರಮವನ್ನು ವಿಧಾನಸೌಧಕ್ಕೆ ಶಿಫ್ಟ್ ಮಾಡುವ ಬಗ್ಗೆ ಚಿಂತನೆ ನಡೆಸಲಾಗುತ್ತಿದೆ.
ಇಷ್ಟು ವರ್ಷಗಳಿಂದ ಮಾಣಿಕ್ ಷಾ ಪರೇಡ್ ಗ್ರೌಂಡ್ ನಲ್ಲಿ ಸ್ವಾತಂತ್ರ್ಯ ದಿನಾಚರಣೆ ಹಾಗೂ ಗಣರಾಜ್ಯೋತ್ಸವ ಕಾರ್ಯಕ್ರಮವನ್ನು ಆಚರಿಸಲಾಗುತ್ತಿತ್ತು. ಆದರೆ ಈ ವರ್ಷ ಆಚರಣೆಗಳನ್ನು ವಿಧಾನಸೌಧಕ್ಕೆ ಶಿಫ್ಟ್ ಮಾಡುವ ಬಗ್ಗೆ ಚಿಂತನೆ ನಡೆಸಲಾಗಿದೆ. ವಿಧಾನಸೌಧದ ಎದುರು ಗಣರಾಜ್ಯೋತ್ಸವ ಆಚರಣೆ ಮಾಡುವಂತೆ ರಾಜ್ಯ ಪೊಲೀಸ್ ಇಲಾಖೆ ಸಲಹೆ ನೀಡಿದೆ ಎಂಬುದಾಗಿ ತಿಳಿದುಬಂದಿದೆ.
ಆದರೆ ಸಮಯದ ಅಭಾವದ ಹಿನ್ನಲೆ ಈ ಬಾರಿ ಆಚರಣೆ ಮಾಡುತ್ತಿಲ್ಲ. ಈ ಬಾರಿ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಆಚರಿಸಲಿದೆ. ಮುಂದಿನ ಬಾರಿ ವಿದಾನಸೌಧದ ಎದುರು ಆಚರಿಸಲು ಪ್ಲ್ಯಾನ್ ಮಾಡಲಾಗಿದೆ ಎಂದು ಬಿಬಿಎಂಪಿ ಆಯುಕ್ತ ಅನಿಲ್ ಕುಮಾರ್ ಹೇಳಿದ್ದಾರೆ.