Webdunia - Bharat's app for daily news and videos

Install App

ಕನ್ನಡದ ಹಬ್ಬಕ್ಕೆ ಬರಲೊಲ್ಲೆ ಎಂದ ಕನ್ನಡತಿ ಶಿಲ್ಪಾ ಶೆಟ್ಟಿ..!

Webdunia
ಗುರುವಾರ, 27 ಅಕ್ಟೋಬರ್ 2016 (14:03 IST)

ಬೆಳಗಾವಿ: ಪ್ರಸ್ತುತ ವರ್ಷ ಬೆಳಗಾವಿಯಲ್ಲಿ ನಡೆಯುವ ಕನ್ನಡ ರಾಜ್ಯೋತ್ಸವದ ಮೆರವಣಿಗೆಯಲ್ಲಿ ಹಾಲಿವುಡ್ ನಟಿ, ಕನ್ನಡತಿ ಶಿಲ್ಪಾ ಶೆಟ್ಟಿ ಪಾಲ್ಗೊಳ್ಳಲಿದ್ದಾರೆ ಎಂದು ಹೇಳಲಾಗುತ್ತಿತ್ತು. ಆದರೆ, ಕೊನೆ ಘಳಿಗೆಯಲ್ಲಿ ಅವರು ನಿರಾಕರಿಸಿದ ಹಿನ್ನೆಲೆಯಲ್ಲಿ ಕಾರ್ಯಕ್ರಮ ರದ್ದಾಗಿದೆ.
 

ಕನ್ನಡದ ಚೆಲುವೆ ಶಿಲ್ಪಾ ಶೆಟ್ಟಿ ಅವರನ್ನು ಕನ್ನಡ ರಾಜ್ಯೋತ್ಸವವನ್ನು ವಿಜೃಂಭಣೆಯಿಂದ ಹಿಂದೆಂದೂ ಕಂಡರಿಯದ ರೀತಿಯಲ್ಲಿ ಆಚರಿಸಬೇಕೆಂದು ಜಿಲ್ಲಾಡಳಿತ ನಿರ್ಧರಿಸಿತ್ತು. ವಿದೇಶಗಳಲ್ಲಿ ಕನ್ನಡದ ಪತಾಕೆಯನ್ನು ಹಾರಿಸಿದ ಶಿಲ್ಪಾ ಶೆಟ್ಟಿ ಅವರನ್ನು ಕರೆಸಿದರೆ, ಕನ್ನಡದ ಹಬ್ಬಕ್ಕೆ ಇನ್ನಷ್ಟು ಕಳೆ ಬರುವುದಲ್ಲದೆ, ವಿದೇಶದಲ್ಲಿ ಕನ್ನಡ ಮತ್ತಷ್ಟು ಕೀರ್ತಿ ಪಡೆಯುತ್ತದೆ ಎನ್ನುವುದು ಜಿಲ್ಲಾಧಿಕಾರಿ ಎನ್. ಜೈರಾಮ ಅವರ ಮುಂದಾಲೋಚನೆಯಾಗಿತ್ತು. ಅದರಂತೆ, ಶಿಲ್ಪಾ ಶೆಟ್ಟಿ ಅವರನ್ನು ರಾಜ್ಯೋತ್ಸವದ ಮೆರವಣಿಗೆಗೆ ಕರೆತರುವ ಪ್ರಯತ್ನ ಮಾಡಲಾಗಿತ್ತು. ಅದಕ್ಕೆ ಶಿಲ್ಪಾ ಶೆಟ್ಟಿ ಒಪ್ಪಿಗೆಯನ್ನೂ ನೀಡಿದ್ದರು. ಆದರೆ, ಕನ್ನಡದ ಹಬ್ಬ ಹತ್ತಿರ ಬರುತ್ತಿದ್ದಂತೆ ಕೆಲವು ತಾಂತ್ರಿಕ ಕಾರಣಗಳನ್ನು ಒಡ್ಡಿ, ಬರಲಾಗದು ಎಂದು ತಿಳಿಸಿದ್ದಾರೆ. ಇದರಿಂದಾಗಿ ಶಿಲ್ಪಾ ಶೆಟ್ಟಿ ಕಾರ್ಯಕ್ರಮವನ್ನು ಜಿಲ್ಲಾಡಳಿತ ರದ್ದುಗೊಳಿಸಿದೆ. ಇದರಿಂದಾಗಿ ಶಿಲ್ಪಾ ಶೆಟ್ಟಿಯ ಕಾರ್ಯಕ್ರಮ ರದ್ದಾಗಿದೆ.

 

ಶಿಲ್ಪಾ ಶೆಟ್ಟಿ ಬರದಿದ್ದರೇನಂತೆ, ಅದಕ್ಕೆ ಬದಲಾಗಿ ಇನ್ನಷ್ಟು ರಂಜನೀಯವಾಗಿ ಕನ್ನಡದ ಹಬ್ಬ ಆಚರಿಸಬೇಖೆಂದು ಪಣತೊಟ್ಟ ಜಿಲ್ಲಾಡಳಿತ ನೆಂಬರ್ 1ರ ಬದಲಾಗಿ, ಮೊದಲನೇ ವಾರ ಬೆಳಗಾವಿಯ ಸರ್ದಾರ ಮೈದಾನದಲ್ಲಿ ಅದ್ಧೂರಿ ರಸ ಮಂಜರಿ ಕಾರ್ಯಕ್ರಮ ಆಯೋಜಿಸಲು ನಿರ್ಧರಿಸಿದೆ. ಆ ವೈಭವದ ಕಾರ್ಯಕ್ರಮಕ್ಕೆ ಖ್ಯಾತ ಸಂಗೀತ ನಿರ್ದೇಶಕರೊಬ್ಬರನ್ನು ಕರೆಯಿಸಲು ಚಿಂತನೆ ನಡೆಸಿದೆ. ಇದರಿಂದ ಗಡಿ ನಾಡು ಬೆಳಗಾವಿಯಲ್ಲಿ ಕನ್ನಡದ ಹಬ್ಬ ವಿಜೃಂಭಿಸಲಿದೆ. ಹೀಗೆ ಜಿಲ್ಲಾಧಿಕಾರಿ ಜಯರಾಮ್ ಅವರು ವೈವಿಧ್ಯಮಯ ಕಾರ್ಯಕ್ರಮ ನಡೆಸುವ ಮೂಲಕ ಬೆಳಗಾವಿಯನ್ನು ಕನ್ನಡಮಯವನ್ನಾಗಿಸಲಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

2029 ರಲ್ಲಿ ಕೇಂದ್ರದಲ್ಲಿ ನಾವು ಬಂದಾಗ ಬಿಜೆಪಿಯವರನ್ನು ತಿಹಾರ್ ಜೈಲಿಗೆ ಹಾಕ್ತೀವಿ: ಪ್ರದೀಪ್ ಈಶ್ವರ್

ಸಂವಿಧಾನಕ್ಕೆ ಅಪಚಾರ ಮಾಡಿದ ಪಕ್ಷ ಎಂದರೆ ಕಾಂಗ್ರೆಸ್: ಛಲವಾದಿ ನಾರಾಯಣಸ್ವಾಮಿ

5 ವರ್ಷ ನಾನೇ ಸಿಎಂ ಎಂದ ಸಿದ್ದರಾಮಯ್ಯ: ಲೈಫ್ ಟೈಂ ನಾನೇ ಎನ್ನಿ ಎಂದ ಡಿಕೆಶಿ ಫ್ಯಾನ್ಸ್

ರಾಹುಲ್ ಗಾಂಧಿ ಭೇಟಿಗೆ ಮುನ್ನ ನಾನೇ ಸಿಎಂ ಎಂದು ಘರ್ಜಿಸಿದ ಸಿದ್ದರಾಮಯ್ಯ

ಆ್ಯಪ್ ಮೂಲಕ ಆನ್‌-ಡಿಮ್ಯಾಂಡ್ ಇಂಟ್ರಾಸಿಟಿ ಶಿಪ್ಪಿಂಗ್ ಸೇವೆ ಆರಂಭಿಸಿದ ಡೆಲಿವರಿ

ಮುಂದಿನ ಸುದ್ದಿ
Show comments