Webdunia - Bharat's app for daily news and videos

Install App

ಸಾವಿನಲ್ಲೂ ಸಾರ್ಥಕತೆ ಮೆರೆದ ಶಿವಮೊಗ್ಗದ ಮಹಿಳೆ: ಹೊಸ ದಾಖಲೆ ನಿರ್ಮಿಸಿದ ವೆನ್ಲಾಕ್‌ ಸರ್ಕಾರಿ ಆಸ್ಪತ್ರೆ

Sampriya
ಶುಕ್ರವಾರ, 10 ಜನವರಿ 2025 (14:20 IST)
Photo Courtesy X
ಮಂಗಳೂರು: ಶಿವಮೊಗ್ಗ ರಾಗಿಗುಡ್ಡೆಯ 41 ವರ್ಷ ವಯಸ್ಸಿನ ರೇಖಾ ಅವರು ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದಾರೆ.

ಮಿದುಳು ನಿಷ್ಕ್ರಿಯಗೊಂಡಿದ್ದ ರೇಖಾ ಅವರ ಅಂಗಾಂಗ ದಾನ ಪ್ರಕ್ರಿಯೆ ನಗರದ ವೆನ್ಲಾಕ್ ಆಸ್ಪತ್ರೆಯಲ್ಲಿ ಶುಕ್ರವಾರ ನಡೆಯಿತು.‌ ವೆನ್ಲಾಕ್ ಸರ್ಕಾರಿ ಆಸ್ಪತ್ರೆಯ 176 ವರ್ಷಗಳ‌ ಇತಿಹಾಸದಲ್ಲಿ ಮೊದಲ ಬಾರಿಗೆ ಅಂಗಾಂಗ ದಾನ ಪ್ರಕ್ರಿಯೆ ನಡೆದಿದೆ.

ಮಹಿಳೆಯ ಎರಡು ಕಣ್ಣುಗಳನ್ನು ಮಂಗಳೂರಿನ ಕೆಎಂಸಿ ಆಸ್ಪತ್ರೆಗೆ ಹಾಗೂ ಲಿವರ್ ಅನ್ನು ಮೈಸೂರಿಗೆ ಝೀರೊ ಟ್ರಾಫಿಕ್ ನಲ್ಲಿ ಕೊಂಡೊಯ್ಯಲಾಯಿತು. ಆಂಬುಲೆನ್ಸ್ ಪುತ್ತೂರು, ಮಡಿಕೇರಿ ಮಾರ್ಗವಾಗಿ ಮೈಸೂರು ತಲುಪಲಿದೆ.

ಮನೆಯಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಅಸ್ವಸ್ಥಗೊಂಡಿದ್ದ ಅವರನ್ನು ಶಿವಮೊಗ್ಗ ಆಸ್ಪತ್ರೆಗೆ ದಾಖಲಿಸಿ, ನಂತರ ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ಜ.6ರಂದು ಕರೆತರಲಾಗಿತ್ತು.

ಅವರ ಆರೋಗ್ಯ ದಿನದಿಂದ‌ ದಿನಕ್ಕೆ ಕ್ಷೀಣಿಸುತ್ತಿತ್ತು. ಅವರ ಮಿದುಳು ನಿಷ್ಕ್ರಿಯ ಗೊಂಡಿದ್ದನ್ನು ಕುಟುಂಬಸ್ಥರಿಗೆ ತಿಳಿಸಿ, ಅಂಗಾಂಗ ದಾನದ ಬಗ್ಗೆ ಅರಿವು ಮೂಡಿಸಲಾಯಿತು ಎಂದು ವೆನ್ಲಾಕ್ ಆಸ್ಪತ್ರೆಯ ವೈದ್ಯರು ತಿಳಿಸಿದರು.

ಎಲ್ಲ ರೀತಿಯ ಪರೀಕ್ಷೆಗಳನ್ನು ಪೂರ್ಣಗೊಳಿಸಿ, ಮಿದುಳು ನಿಷ್ಕ್ರಿಯ ಗೊಂಡಿರುವುದನ್ನು ಖಚಿತ ಪಡಿಸಿಕೊಂಡು ಮುಂದಿನ ಪ್ರಕ್ರಿಯೆ ನಡೆಸಲಾಯಿತು ಎಂದು ವೆನ್ಲಾಕ್ ಆಸ್ಪತ್ರೆಯ ಅಧೀಕ್ಷಕ ಡಾ.ಶಿವಪ್ರಕಾಶ್ ಮಾಹಿತಿ ನೀಡಿದರು.‌

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜಾತಿ ಧರ್ಮ ಯಾವುದೂ ನೋಡಲ್ಲ, ಇದೊಂದು ಮಾತು ಸುಳ್ಳಾದ್ರೆ ವೇದಿಕೆ ಹತ್ತಲ್ಲ: ಸಿದ್ದರಾಮಯ್ಯ

ವಿಮಾನ ದುರಂತವಾದ ಕ್ಷಣದಲ್ಲೇ ನಾಪತ್ತೆಯಾದ ನಿರ್ಮಾಪಕ ಮಹೇಶ್ ಕಲಾವಾಡಿಯಾ ಇನ್ನೂ ಪತ್ತೆಯಾಗಿಲ್ಲ

DC ಅಪಾಯಕಾರಿ ಎಂದು ಘೋಷಿಸಿದ್ದರು,ಇಂದ್ರಾಯಣಿ ನದಿ ಸೇತುವೆ ದುರಂತ ನಡೆದಿದೆ: ಸಿಎಂ ಫಡಣವೀಸ್‌

Bengaluru, ಮಹಿಳೆ ಮೇಲೆ ರಾ‍ಪಿಡೋ ಚಾಲಕ ಕಪಾಳಮೋಕ್ಷ: ಅಸಲಿ ಸತ್ಯಾಂಶನೇ ಬೇರೆ

ಸಿಎಂ ಸಿದ್ದರಾಮಯ್ಯನ ಕಾರಿಗೆ ಅಡ್ಡ ಕಟ್ಟಿ ಆಕ್ರೋಶ ಹೊರಹಾಕಿದ ರೈತನ ಮೇಲೆ ಒದ್ದ ಪೊಲೀಸರು

ಮುಂದಿನ ಸುದ್ದಿ
Show comments